The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌


Team Udayavani, May 17, 2024, 2:54 PM IST

The Judgement;

“ಜನ ಕೊಡೋ ಜಡ್ಜ್ಮೆಂಟ್‌ ನಮಗೆ ಅಂತಿಮ..’ – ಹೀಗೆ ಹೇಳಿ ನಕ್ಕರು ರವಿಚಂದ್ರನ್‌. ಆಗಷ್ಟೇ “ದಿ ಜಡ್ಜ್ ಮೆಂಟ್‌’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿತ್ತು. ಇದು ರವಿಚಂದ್ರನ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸಿನಿಮಾ. ಚಿತ್ರ ಮೇ 24ರಂದು ತೆರೆಕಾಣುತ್ತಿದೆ.

ಟ್ರೇಲರ್‌ ರಿಲೀಸ್‌ ಬಳಿಕ ಚಿತ್ರದ ಬಗ್ಗೆ ಮಾತನಾಡಲಾರಂಭಿಸಿದರು ರವಿಚಂದ್ರನ್‌. “ಜಡ್ಜ್ಮೆಂಟ್‌ ಅನ್ನೋದು ಎಲ್ಲರ ಜೀವನದಲ್ಲೂ ಬಹಳ ಮುಖ್ಯ. ನಾವು ತೆಗೆದುಕೊಳ್ಳುವ ನಿರ್ಧಾರ ಅದು ನಮ್ಮ ಮುಂದಿನ ಭವಿಷ್ಯವನ್ನು ನಿರ್ಧರಿಸುತ್ತದೆ. ಅದು ಪ್ರೀತಿಯಾಗಿರಬಹುದು ಅಥವಾ ಯಾವುದೇ ವಿಷಯವಾಗಿರಬಹುದು… ಈ ಜಡ್ಜ್ಮೆಂಟ್‌ ಆರಂಭವಾಗಿದ್ದು ಶಿವ ಗೌಡ ಅವರಿಂದು. ನಿರ್ದೇಶಕ ಗುರುರಾಜ್‌ ಕುಲಕರ್ಣಿ ಆರಂಭದಲ್ಲಿ “ದಿ ಗಿಲ್ಟ್’ ಎಂಬ ಟೈಟಲ್‌ನಲ್ಲಿ ಸಿನಿಮಾ ಮಾಡಲು ಬಂದಿದ್ದರು. ಆ ನಂತರ ಟೈಟಲ್‌ ಅನ್ನು “ದಿ ಜಡ್ಜ್ಮೆಂಟ್‌’ ಎಂದು ಬದಲಿಸಿದರು. ಚಿತ್ರದಲ್ಲಿ ಸಾಕಷ್ಟು ಕೇಸ್‌ಗಳ ಬಗ್ಗೆ ನನ್ನಿಂದ ಹೇಳಿಸಿದ್ದಾರೆ. ಸಾಕಷ್ಟು ರಿಯಲ್‌ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡಿದ್ದಾರೆ. ಚಿತ್ರದಲ್ಲಿ ನಟಿಸಿದ ಎಲ್ಲರೂ ನನ್ನ ಜೊತೆ ನಟಿಸಿ ಖುಷಿಯಾಯಿತು ಎನ್ನುತ್ತಿದ್ದಾರೆ. ನನಗೂ ಅಷ್ಟೇ ಅವರೆಲ್ಲರ ಜೊತೆ ನಟಿಸಿ ಖುಷಿಯಾಗಿದೆ. ರವಿಚಂದ್ರನ್‌ ಅಂದರೆ ಹಂಗೆ, ಹಿಂಗೆ ಎಂದು ಜನರಲ್ಲಿ ಭಯ ಹುಟ್ಟಿಸಿಬಿಟ್ಟಿದ್ದರು. ಅದನ್ನೆಲ್ಲಾ ಕೇಳಿ ನನ್ನ ಬಗ್ಗೆ ಎಲ್ಲರೂ ಒಂದು ಕಲ್ಪನೆ ಕಟ್ಟಿಕೊಂಡಿದ್ದರು. ನಾನು ಸೆಟ್‌ ಗೆ ಬಂದರೆ ನನ್ನ ಮುಂದಿರುವ ಕ್ಯಾಮರಾವನ್ನು ಪ್ರೀತಿಸುವಷ್ಟು ಬೇರೆ ಯಾರನ್ನೂ ಪ್ರೀತಿಸುವುದಿಲ್ಲ’ ಎಂದರು.

ನಿರ್ದೇಶಕ ಗುರುರಾಜ್‌ ಕುಲಕರ್ಣಿ ಅವರಿಗೆ “ದಿ ಜಡ್ಜ್ಮೆಂಟ್‌’ ಮೇಲೆ ವಿಶ್ವಾಸವಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲ್ಲುತ್ತದೆ ಎನ್ನುತ್ತಾರೆ. “ಮನುಷ್ಯನ ಪ್ರಾಯಶ್ಚಿತ್ತದ ಕಥೆ ಇದು. ನಾವು ತಿಳಿದೋ, ತಿಳಿಯದೆಯೋ ತಪ್ಪು ಮಾಡಿರುತ್ತೇವೆ. ಆ ತಪ್ಪನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ, ಅದನ್ನು ಸರಿಪಡಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು. ಈ ಚಿತ್ರದಲ್ಲಿ ತಪ್ಪು ಮಾಡಿರುವ ವ್ಯಕ್ತಿ ಆ ತಪ್ಪನ್ನು ಸರಿಪಡಿಸಿಕೊಳ್ಳುವುದಕ್ಕೆ ಹೊರಟಾಗ, ಅವನಿಗಾಗುವ ಅಡೆತಡೆಗಳ ಬಗ್ಗೆ ಹೇಳುವ ಪ್ರಯತ್ನ ಮಾಡಿದ್ದೇವೆ’ ಎನ್ನುವುದು ಅವರ ಮಾತು. ಈ ಕಥೆಯನ್ನು ರವಿಚಂದ್ರನ್‌ ಅವರಿಗಾಗಿಯೇ ಬರೆದಿದ್ದು ಎನ್ನಲು ಅವರು ಮರೆಯಲಿಲ್ಲ.

ಚಿತ್ರದಲ್ಲಿ ನಟಿಸಿರುವ ದಿಗಂತ್‌ ಕೂಡಾ ಮಾತನಾಡಿದರು. “ನಾನು ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನವಾದ ಪಾತ್ರ ಸಿನಿಮಾದಲ್ಲಿದೆ. ಇಂದಿನ ಜನರೇಶನ್‌ ಬೆಂಗಳೂರಿನಂತಹ ಸಿಟಿಯಲ್ಲಿರುವ ಯುವಕರನ್ನು ಪ್ರತಿನಿಧಿಸುವಂತೆ ನನ್ನ ಪಾತ್ರವಿದೆ. ತನ್ನ ಇಷ್ಟದಂತೆ ಜೀವನ ನಡೆಸಲು ಹೊರಟ ಹುಡುಗನೊಬ್ಬನ ಜೀವನದಲ್ಲಿ ನಡೆಯುವ ಕೆಲವು ಅನಿರೀಕ್ಷಿತ ಘಟನೆಗಳು, ಏನೆಲ್ಲ ಬದಲಾವಣೆಗಳಿಗೆ ಕಾರಣವಾಗುತ್ತದೆ ಎಂಬುದರ ಸುತ್ತ ನನ್ನ ಪಾತ್ರವಿದೆ’ ಎಂದರು.

ಉಳಿದಂತೆ ಮೇಘನಾ ಗಾಂವ್ಕರ್‌, ಲಕ್ಷ್ಮೀ ಗೋಪಾಲ ಸ್ವಾಮಿ, ಧನ್ಯಾ ಚಿತ್ರದ ಬಗ್ಗೆ ಮಾತನಾಡಿದರು. ಈ ಚಿತ್ರ ಜಿ9 ಕಮ್ಯುನಿಕೇಶನ್‌ನಡಿ ತಯಾರಾಗಿದೆ. ಚಿತ್ರದಲ್ಲಿ ನಾಗಾಭರಣ, ಪ್ರಕಾಶ್‌ ಬೆಳವಾಡಿ, ರಂಗಾಯಣ ರಘು, ರವಿಶಂಕರ್‌ ಗೌಡ, ಸುಜಯ್‌ ಶಾಸ್ತ್ರಿ ,ಕೃಷ್ಣ ಹೆಬ್ಟಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಪಿ.ಕೆ. ಎಚ್‌. ದಾಸ್‌ ಛಾಯಾಗ್ರಹಣ, ಬಿ.ಎಸ್‌. ಕೆಂಪರಾಜು ಅವರ ಸಂಕಲನ ಮತ್ತು ಅನೂಪ್‌ ಸೀಳಿನ್‌ ಸಂಗೀತವಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

Chethan Kumar: ನಟ ಚೇತನ್‌ ವಿರುದ್ಧದ ವಾರಂಟ್‌ ಹಿಂಪಡೆದ ಕೋರ್ಟ್ ‌

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.