Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು
Team Udayavani, May 17, 2024, 7:36 PM IST
ಭಟ್ಕಳ: ತಾಲೂಕಿನ ಕಡವಿನಕಟ್ಟೆ ಸಮೀಪ ಕಂಡೆಕೊಡ್ಲು ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ ಪಟ್ಟ ದುರ್ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಕಂಡೆಕೊಡ್ಲು ಗ್ರಾಮದವರಾದ ಪಾರ್ವತಿ ಶಂಕರ ನಾಯ್ಕ (35) ಹಾಗೂ ಸೂರಜ್ ಪಾಂಡು ನಾಯ್ಕ(17)ಎಂದು ಗುರುತಿಸಲಾಗಿದೆ.
ಕಂಡೆಕೊಡ್ಲುವಿನ ಐವರು ಕಡವಿನಕಟ್ಟೆ ಡ್ಯಾಂ ಕೆಳಭಾಗದಲ್ಲಿ ರೈಲ್ವೇ ಸೇತುವೆಯ ಬಳಿಯಲ್ಲಿನ ನೀರಿನಲ್ಲಿ ಈಜಲು ತೆರಳಿದ್ದರು. ಈ ಸಂದರ್ಭದಲ್ಲಿ ಈಜುತ್ತಿದ್ದ ಸೂರಜ್ ಪಾಂಡು ನಾಯ್ಕ ನೀರಿನಲ್ಲಿ ಆಯತಪ್ಪಿ ಮುಳುಗಲು ಪ್ರಾರಂಭಿಸಿದ್ದನ್ನು ಕಂಡ ದಡದಲ್ಲಿದ್ದ ಪಾರ್ವತಿ ಶಂಕರ ನಾಯ್ಕ ಆತನನ್ನು ರಕ್ಷಿಸಲು ಮುಂದಾದರು. ದುರಾದೃಷ್ಟವಶಾತ್ ಆತನನ್ನು ರಕ್ಷಿಸಲು ಸಾಧ್ಯವಾಗದೆ ಆಕೆಯೂ ಕೂಡಾ ನೀರಿನಲ್ಲಿ ಮುಳುಗಿ ಮೃತ ಪಟ್ಟರು ಎನ್ನಲಾಗಿದೆ.
ಸರಕಾರಿ ಆಸ್ಪತ್ರೆಗೆ ಮೃತ ದೇಹ
ಘಟನೆ ನಡೆದ ತತ್ ಕ್ಷಣ ಊರಿನವರೆಲ್ಲರೂ ಒಟ್ಟಾಗಿ ನೀರಿನಲ್ಲಿ ಮುಳುಗಿದ್ದ ಇಬ್ಬರನ್ನೂ ಮೇಲಕ್ಕೆತ್ತಿದರಾದರೂ ಅದಾಗಲೇ ಅವರು ಮೃತ ಪಟ್ಟಿದ್ದರು ಎನ್ನಲಾಗಿದೆ. ಮೃತ ದೇಹವನ್ನು ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.
ಶ್ಮಶಾನ ಮೌನ
ಕಂಡೆಕೊಡ್ಲು ಗ್ರಾಮ ಅತಿ ಚಿಕ್ಕ ಗ್ರಾಮವಾಗಿದ್ದು ಕೆಲವೇ ಕೆಲವು ಮನೆಗಳಿವೆ. ಈ ಗ್ರಾಮದಲ್ಲಿ ಇಬ್ಬರು ಸಾವನ್ನಪ್ಪಿರುವುದು ಗ್ರಾಮಸ್ಥರಿಗೆ ನುಂಗಲಾರದ ತುತ್ತಾಗಿದೆ. ಇಡೀ ಗ್ರಾಮಕ್ಕೆ ಗ್ರಾಮವೇ ಇಬ್ಬರ ಸಾವಿಗೆ ಮರುಗುತ್ತಿದೆ. ನೂರಾರು ಜನರು ಆಸ್ಪತ್ರೆಯ ಆವರಣಕ್ಕೆ ಆಗಮಿಸಿ ಮೃತರನ್ನು ನೋಡಿ ಬೇಸರ ವ್ಯಕ್ತಪಡಿಸುತ್ತಿದ್ದರೆ ಇನ್ನೂ ಕೆಲವರ ಕಣ್ಣು ಅವರಿಗೆ ಅರಿವಿಲ್ಲದೇ ತೇವವಾಗುತ್ತಿರುವುದು ಸಾಮಾನ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ
Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ
Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು
Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ
Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.