Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ


Team Udayavani, May 18, 2024, 7:45 AM IST

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

ಕಾರ್ಕಳ: ಕೃಷಿಯ ಮೇಲಿನ ಸೆಳೆತದಿಂದ ವಿದೇಶದ ಉದ್ಯೋಗವನ್ನು ತ್ಯಜಿಸಿ ಹುಟ್ಟೂರಿಗೆ ಮರಳಿದ ವ್ಯಕ್ತಿಯೊಬ್ಬರು ಮಾದರಿ ಕೃಷಿಯ ಮೂಲಕ ಸಾಧನೆ ಮಾಡಿದ್ದಾರೆ.

ಕಾರ್ಕಳದ ಸಾಣೂರಿನ ಆಂಥೋನಿ ಎಲಿಯಾ ಡಿ’ಸಿಲ್ವ ಪ್ರಾಥಮಿಕ ಶಿಕ್ಷಣವನ್ನು ಸಾಣೂರಿನಲ್ಲಿ, ಮುಂಬಯಿ ಯಲ್ಲಿ ಸಂಜೆ ಕಾಲೇಜು ಶಿಕ್ಷಣ ಮುಗಿಸಿ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ನಿಮಿತ್ತ ನೆಲೆಸಿದ್ದರು. ಆದರೆ ಕೃಷಿ ಪ್ರೀತಿ ಹುಟ್ಟೂರಿಗೆ ಮರಳುವಂತೆ ಮಾಡಿತು. 22 ವರುಷಗಳ ಹಿಂದೆ ಸಾಣೂರಿನಲ್ಲಿ ಮೂರೂವರೆ ಎಕರೆ ಬರಡು ಭೂಮಿ ಖರೀದಿಸಿ ವಿದೇಶದಲ್ಲಿ ಗಳಿಸಿದ ಹಣವನ್ನು ವ್ಯಯಿಸಿ ವಿವಿಧ ಬಗೆಯ ಹಣ್ಣುಗಳನ್ನು ಬೆಳೆದು ಪ್ರಸ್ತುತ ಯಶಸ್ವಿ ಕೃಷಿಕ ಎನಿಸಿದ್ದಾರೆ.

ನಳನಳಿಸುವ ಸಸ್ಯಗಳು
ಮೂರೂವರೆ ಎಕರೆ ಭೂಮಿ ಯಲ್ಲಿ 70ಕ್ಕೂ ಅಧಿಕ ವಿವಿಧ ತಳಿಯ ಹಣ್ಣಿನ ಗಿಡ ಗಳನ್ನು ಬೆಳೆಸಿ ದ್ದಾರೆ. ಮಾವು, ಹಲಸು, ಅನಾನಸ್‌, ಡ್ರಾಗನ್‌ ಫ‌ೂಟ್ಸ್‌, ಮ್ಯಾಂಗೋಸ್ಟೀನ್‌, ರಂಬೂಟನ್‌, ಪೇರಳೆ, ಚಿಕ್ಕು ಸಹಿತ ದೇಶ ವಿದೇಶದ ಹಣ್ಣಿನ ಗಿಡಗಳನ್ನು ಬೆಳೆದಿದ್ದಾರೆ. ನೀರು, ಗೊಬ್ಬರ ಎಲ್ಲವನ್ನು ವ್ಯವಸ್ಥಿತವಾಗಿ ಕೃಷಿಯಲ್ಲಿ ಜೋಡಿಸಿಕೊಂಡಿದ್ದಾರೆ.

ಸ್ವತಃ ಮಾರಾಟ
ಸಾವಯವ ಗೊಬ್ಬರ ಬಳಸುವುದರಿಂದ ಹಣ್ಣುಗಳು ಸತ್ವಭರಿತವಾಗಿದ್ದು, ಇವರು ಬೆಳೆದ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಬಹು ಬೇಡಿಕೆಯಿದೆ. ಮಂಗಳೂರಿನಲ್ಲಿ ಮನೆ ಹೊಂದಿರುವ ಅವರು ಹತ್ತಿರದಲ್ಲಿ ಒಂದು ಅಂಗಡಿಯನ್ನು ಖರೀದಿಸಿ ಸ್ವತಃ ಮಾರಾಟ ಮಾಡುತ್ತಾರೆ. ಹಳ್ಳಿಗರಿಗೆ ಸಾವಯವ ಹಣ್ಣು ಸಾಮಾನ್ಯವಾಗಿ ದೊರಕುತ್ತದೆ. ಆದರೆ ನಗರವಾಸಿಗಳು ವಿಷಯುಕ್ತ ಆಹಾರವನ್ನೇ ಸೇವಿಸುವ ಅನಿವಾರ್ಯ ಎದುರಾಗಿದ್ದು, ಅವರು ಕೂಡ ಸಾವಯವ ಹಣ್ಣು ಸವಿಯಬೇಕು ಎನ್ನುವುದು ನನ್ನ ಉದ್ದೇಶ ಎನ್ನುತ್ತಾರೆ ಅವರು. ಹಣ್ಣಿನ ತೋಟ ವೀಕ್ಷಣೆಗೆ ಬರುವವರು ಗಿಡ ಕೇಳುತ್ತಾರೆ ಅನ್ನುವ ಕಾರಣಕ್ಕೆ ಈ ವರ್ಷ ನರ್ಸರಿ ಕೂಡ ಆರಂಭಿಸುವ ಚಿಂತನೆ ಹೊಂದಿದ್ದಾರೆ.

ಶ್ರೇಷ್ಠ ಕೃಷಿಕ ಪ್ರಶಸ್ತಿ
ಆಂಥೋನಿ ಎಲಿಯಾ ಡಿ’ಸಿಲ್ವ ಅವರ ತೋಟಕ್ಕೆ ಹಲವಾರು ಕೃಷಿ ಆಸಕ್ತರು ಭೇಟಿ ನೀಡಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ. ಹಲವು ಸಂಘ-ಸಂಸ್ಥೆಗಳು ಅವರ ಸಾಧನೆಯನ್ನು ಗುರುತಿಸಿ ಗೌರವಿಸಿದೆ. ಕೃಷಿ ಇಲಾಖೆಯು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದೆ.

ಕೃಷಿ ಎಂದರೆ ನನಗೆ ಎಲ್ಲಿಲ್ಲದ ಪ್ರೀತಿ. ಅದೇ ಆಸಕ್ತಿಯಿಂದ ಹಣ್ಣುಗಳನ್ನು ಬೆಳೆದಿದ್ದೇನೆ. ಈ ಸಲ ಮಳೆ ಇಲ್ಲದೆ ಹೂಬಿಡುವಲ್ಲಿ ತೊಂದರೆಯಾಗಿ ಸ್ವಲ್ಪ ಸಮಸ್ಯೆಯಾಗಿದೆ. ಆದರೇ ಧೃತಿಗೆಡುವಂಥದ್ದೇನಿಲ್ಲ. ಮುಂದಿನ ಬಾರಿಗೆ ಉತ್ತಮ ಇಳುವರಿ ನಿರೀಕ್ಷೆ ಇದೆ. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಇದ್ದಲ್ಲಿ ಶ್ರಮಪಟ್ಟು ದುಡಿದರೆ ಸೋಲು ಹತ್ತಿರ ಸುಳಿಯುವುದಿಲ್ಲ.
– ಆಂಥೋನಿ ಎಲಿಯಾ ಡಿ’ಸಿಲ್ವ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.