Raebareli:ಪುತ್ರ ರಾಹುಲ್‌ ಗಾಂಧಿ ಪರ ಪ್ರಚಾರಕ್ಕೆ ಸೋನಿಯಾ ಪ್ರವೇಶ!


Team Udayavani, May 18, 2024, 6:45 AM IST

1-wewewq

ಲಕ್ನೋ: “ನನ್ನ ಮಗನನ್ನು ನಿಮ್ಮ ಕೈಗೆ ಒಪ್ಪಿಸುತ್ತಿದ್ದೇನೆ. ಆತ ನಿಮ್ಮನ್ನು ಎಂದಿಗೂ ನಿರಾಸೆಗೊಳಿಸುವುದಿಲ್ಲ. ಅವ ನನ್ನೂ ನಿಮ್ಮವನೆಂದು ಪರಿಗಣಿಸಿ’ ಎಂದು ರಾಯ್‌ಬರೇಲಿ ಜನತೆಗೆ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆ.

ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಸೋನಿಯಾ ಪ್ರಚಾರ ಕಣಕ್ಕೆ ಧುಮುಕಿದ್ದು, ಸ್ವಕ್ಷೇತ್ರ ರಾಯ್‌ಬರೇಲಿಯಲ್ಲಿ ಪುತ್ರನ ಪರ ಮತಯಾಚಿಸಿದ್ದಾರೆ. ಸಮಾಜವಾದಿ ಪಕ್ಷದ ಜತೆಗೆ ನಡೆಸಿದ ಜಂಟಿ ಚುನಾವಣ ಪ್ರಚಾರ ಸಭೆಯಲ್ಲಿ ಪುತ್ರ ರಾಹುಲ್‌ ಹಾಗೂ ಪುತ್ರಿ ಪ್ರಿಯಾಂಕಾ ವಾದ್ರಾರನ್ನು ಪಕ್ಕದಲ್ಲೇ ನಿಲ್ಲಿಸಿಕೊಂಡು ಸೋನಿಯಾ ಭಾಷಣ ಮಾಡಿದ್ದಾರೆ.

ಈ ವೇಳೆ ಭಾವುಕರಾಗಿ ಮಾತನಾಡಿರುವ ಅವರು “ನನಗೆ ದೊರೆತಿರುವ ಎಲ್ಲವನ್ನೂ ನೀಡಿದ್ದು ನೀವು! ರಾಯ್‌ಬರೇಲಿಯ ನನ್ನ ಸಹೋದರ-ಸಹೋದರಿ ಯರು ನನ್ನನ್ನು ಅವರ ಸ್ವಂತದವಳೆಂದು ಭಾವಿಸಿದ್ದಾರೆ. ಈಗ ನನ್ನ ಮಗನನ್ನೂ ನಿಮಗೆ ನೀಡುತ್ತಿದ್ದೇನೆ ಅವನನ್ನು ನಿಮ್ಮವನೆಂದು ಪರಿಗಣಿಸಿ ಆತ ಎಂದಿಗೂ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ’ ಎಂದಿದ್ದಾರೆ.

ಅಲ್ಲದೇ,” ಇಂದಿರಾ ಗಾಂಧಿ ಹಾಗೂ ರಾಯ್‌ಬರೇಲಿ ಕ್ಷೇತ್ರದ ಜನರು ನನಗೆ ಏನು ಕಲಿಸಿದ್ದರೋ ಅದೇ ಪಾಠಗಳನ್ನು ನಾನು ರಾಹುಲ್‌, ಪ್ರಿಯಾಂಕಾಗೆ ಕಲಿಸಿದ್ದೇನೆ. ಎಲ್ಲರನ್ನೂ ಗೌರವಿಸಿ, ದುರ್ಬಲರನ್ನು ರಕ್ಷಿಸಿ, ಅನ್ಯಾಯದ ವಿರುದ್ಧ ಹೋರಾಡಿ, ಜನರಿಗೆ ನ್ಯಾಯ ದೊರಕಿಸಿಕೊಡಿ, ಹೆದರದಿರಿ ಏಕೆಂದರೆ ನಿಮ್ಮ ಹೋರಾಟದ ಐತಿಹ್ಯ ದೀರ್ಘ‌ವಾದದ್ದು ಎಂಬುದನ್ನು ತಿಳಿಸಿದ್ದೇನೆ’ ಎಂದೂ ಸೋನಿಯಾ ಹೇಳಿದ್ದಾರೆ. ಇದೇ ವೇಳೆ, 20 ವರ್ಷಗಳ ಕಾಲ ನಿಮ್ಮ ಸಂಸದೆಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀವು ನನಗೆ ಕೊಟ್ಟಿರುವಿರಿ. ಇದು ನನ್ನ ಜೀವನದ ಬಹುದೊಡ್ಡ ಆಸ್ತಿ. ನಿಮ್ಮೆಲ್ಲರಿಗೂ ನಾನು ಋಣಿ ಎಂದು ಸೋನಿಯಾ ಹೇಳಿದ್ದಾರೆ.

ರಾಯ್‌ಬರೇಲಿ, ಅಮೇಠಿಗೆ ಸಮಾನ ಪ್ರಾಶಸ್ತ್ಯ
ರಾಯ್‌ಬರೇಲಿಯಲ್ಲಿ ಸಂಸದನಾಗಿ ಆಯ್ಕೆ ಯಾದರೆ ಆ ಕ್ಷೇತ್ರದ ಅಭಿವೃದ್ಧಿ ಮಾತ್ರವಲ್ಲ, ಅಮೇಠಿಯ ಅಭಿವೃದ್ಧಿಗೂ ಸಮಾನ ಪ್ರಾಶಸ್ತ್ಯ ನೀಡುತ್ತೇನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಅಮೇಠಿಯಲ್ಲಿ ರ್ಯಾಲಿ ನಡೆ ಸಿ ಮಾತನಾಡಿ, “ಸಂಸದನಾಗಿ ನಾನು ಆಯ್ಕೆ ಯಾದರೆ ರಾಯ್‌ಬರೇಲಿಯ ಅಭಿವೃದ್ಧಿಗೆ 10 ರೂ. ಖರ್ಚು ಮಾಡಿದರೆ, ಅಮೇಠಿಯ ಅಭಿವೃದ್ಧಿಗೂ ಅಷ್ಟೇ ವ್ಯಯಿಸುತ್ತೇನೆ. ಇದು ನನ್ನ ವಾಗ್ಧಾನ’ ಎಂದಿದ್ದಾರೆ.

ಮೋದಿಯಿಂದ ಏನು ಬೇಕಾದರೂ ಹೇಳಿಸಬಲ್ಲೆ: ರಾಹುಲ್‌ ಲೇವಡಿ

ಲಕ್ನೋ: ಮೋದಿ ಅವರ ಬಾಯಿಂದ ನೀವು ಏನನ್ನು ಕೇಳ ಬಯಸುತ್ತೀರಿ ಹೇಳಿ, ಅದೆಲ್ಲವನ್ನೂ ನಾನು ಹೇಳಿಸಬಲ್ಲೆ ಎಂದು ರಾಹುಲ್‌ ಗಾಂಧಿ ಪ್ರಧಾನಿ ಮೋದಿ ಅವರನ್ನು ಲೇವಡಿ ಮಾಡಿದ್ದಾರೆ.

ರಾಯ್‌ಬರೇಲಿ ರ್ಯಾಲಿಯಲ್ಲಿ ಪ್ರಧಾನ ಮೋದಿ ವಿರುದ್ಧ ಚಾಟಿ ಬೀಸಿರುವ ರಾಹುಲ್‌, “ನಾನು ಅದಾನಿ-ಅಂಬಾನಿ ವಿಚಾರವನ್ನು ಮೋದಿ ಮಾತಾಡುತ್ತಿಲ್ಲ ಎಂದೆ, 2 ದಿನದಲ್ಲಿ ಅದನ್ನೇ ಮೋದಿ ಮಾತನಾಡಿದರು. ನಾನು ಬ್ಯಾಂಕ್‌ ಖಾತೆಗಳಿಗೆ ಫ‌ಟಾ-ಫ‌ಟ್‌ ಹಣ ಹಾಕುತ್ತೇವೆ ಎಂದೆ – ಮೋದಿ ಅದನ್ನೇ ಭಾಷಣದಲ್ಲಿ ಹೇಳಿದರು. ಹೇಳಿ ಮೋದಿ ಬಾಯಿಯಿಂದ ನೀವು ಏನು ಕೇಳಬಯಸುತ್ತೀರೋ ಅದನ್ನೇ ನಾನು ಹೇಳಿಸಬಲ್ಲ, ಹಾಗೆಯೇ ಏನು ಬೇಡವೋ ಅದನ್ನೂ ನಾನು ಸಾಧ್ಯವಾಗಿಸುತ್ತೇನೆ’ ಎಂದಿದ್ದಾರೆ.

ಪಿಎಂ ಹುದ್ದೆಗೆ ಅರ್ಹರಲ್ಲ ಎಂದು ಮೋದಿಗೆ ಗೊತ್ತಾಗಿದೆ: ಪ್ರಿಯಾಂಕಾ
ತಾವು ಪ್ರಧಾನಿ ಹುದ್ದೆಗೆ ಅರ್ಹರಲ್ಲ ಎಂಬುದು ಮೋದಿ ಅವ ರಿಗೆ ಈಗ ಅರಿವಾಗುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಒಂದು ಕಡೆ ಹಿಂದೂ, ಮುಸ್ಲಿಂ ರಾಜಕಾರಣ ಮಾಡಿ ದರೆ, ಮತ್ತೂಂದೆಡೆ ಮುಸ್ಲಿಮರು ನಮ್ಮ ಮನೆ ಅಕ್ಕ ಪಕ್ಕದಲ್ಲಿದ್ದರು ಎನ್ನುತ್ತಾರೆ. ಇಂದಿರಾ ತಮ್ಮ ಹೇಳಿ ಕೆಗೆ ಸದಾ ಬದ್ಧರಾಗಿದ್ದರು. ಹಾಗೆಯೇ ಮೋದಿ ತಮ್ಮ ಮಾತಿಗೆ ಬದ್ಧ ಇರಬೇಕು ಎಂದರು.

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.