Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Team Udayavani, May 18, 2024, 9:23 AM IST
ನೂಹ್ (ಹರ್ಯಾಣ): ಭಕ್ತರು ತುಂಬಿದ್ದ ಬಸ್ ಹೊತ್ತಿ ಉರಿದು ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಹರ್ಯಾಣದ ನೂಹ್ ನಲ್ಲಿ ನಡೆದಿದೆ. ಕುಂಡಳಿ- ಮನೆಸರ್- ಪಲ್ವಾಲ್ ಎಕ್ಸ್ ಪ್ರೆಸ್ ವೇ ನಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.
ಮಥುರಾ ಮತ್ತು ವೃಂದಾವನಕ್ಕೆ ತೀರ್ಥಯಾತ್ರೆಗೆ ಹೋಗಿದ್ದ ಈ ಜನರು ಹಿಂದೆ ಬರುತ್ತಿದ್ದರು. ಬಸ್ ನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 60 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು, ಎಲ್ಲರೂ ಪಂಜಾಬ್ ನಿವಾಸಿಗಳಾಗಿದ್ದರು.
ರಾತ್ರಿ ಸುಮಾರು 1.30ರ ಸುಮಾರಿಗೆ ಬಸ್ ನ ಹಿಂದಿನಿಂದ ಸುಟ್ಟ ವಾಸನೆ ಬರುತ್ತಿತ್ತು ಎಂದು ಬದುಕುಳಿದವರು ಹೇಳಿದರು.
ದ್ವಿಚಕ್ರ ವಾಹನ ಸವಾರನೊಬ್ಬ ಬಸ್ಸಿನ ಹಿಂಬದಿಯಲ್ಲಿ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿ ಹಿಂಬಾಲಿಸಿದ. ಕೊನೆಗೆ ಬಸ್ ನಿಲ್ಲಿಸಿದ ಚಾಲಕನಿಗೆ ಎಚ್ಚರಿಕೆ ನೀಡಿದರು.
“ನಾವು 10 ದಿನಗಳ ಕಾಲ ಪವಿತ್ರ ಕ್ಷೇತ್ರಗಳಿಗೆ ತೀರ್ಥಯಾತ್ರೆಗೆ ಹೋಗಲು ಬಸ್ ಅನ್ನು ಬಾಡಿಗೆಗೆ ಪಡೆದಿದ್ದೇವೆ. ನಾವು ಶುಕ್ರವಾರ ರಾತ್ರಿ ಮನೆಗೆ ಮರಳುತ್ತಿದ್ದೆವು. ನಾವು ಮಲಗಿದ್ದಾಗ ನಮಗೆ ಹೊಗೆಯ ವಾಸನೆ ಬಂದಿತು. ಮೋಟಾರ್ ಸೈಕಲ್ ಸವಾರ ಚಾಲಕನಿಗೆ ಎಚ್ಚರಿಕೆ ನೀಡಿದ ನಂತರ ಬಸ್ ನಿಲ್ಲಿಸಿದೆ” ಎಂದು ಬದುಕುಳಿದವರಲ್ಲಿ ಒಬ್ಬರು ಹೇಳಿದರು.
ಬಸ್ ನಿಂತ ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಬೆಂಕಿ ನಂದಿಸಿ ಜನರನ್ನು ರಕ್ಷಿಸಲು ಯತ್ನಿಸಿದರು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ ಬಳಿಕ ಬೆಂಕಿ ನಂದಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.