Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ
Team Udayavani, May 18, 2024, 10:03 AM IST
ವಿಜಯಪುರ: ಜಮೀನು ತತ್ಕಾಲ ಪೋಡಿ ಮಾಡಲು ಲಂಚ ಸ್ವೀಕರಿಸುವಾಗ ಸರ್ವೇಯರ್ ಹಾಗೂ ಮಧ್ಯವರ್ತಿ ಹಣದ ಸಮೇತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪ್ರಕಾಶ ಸಿಂಗೆ ಎಂಬ ರೈತ ನಾಲ್ಕು ಎಕರೆ ಜಮೀನು ತತ್ಕಾಲ್ ಪೋಡಿ ಮಾಡಲು ಅರ್ಜಿ ಹಾಕಿದ್ದರು. ಸದರಿ ತತ್ಕಾಲ ಪೋಡಿ ಮಾಡಲು ಸರ್ವೇಯರ್ ಮಲ್ಲಪ್ಪ ಜಂಬಗಿ ಮಧ್ಯವರ್ತಿ ಗುರುದತ್ ಬಿರಾದಾರ್ ಸೇರಿ 47,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಹಣ ಕೊಡಲು ಇಷ್ಟವಿಲ್ಲದ ರೈತ ಪ್ರಕಾಶ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಬಳಿಕ ರೈತ ಪ್ರಕಾಶ ಅವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತರು ದಾಳಿ ನಡೆಸಿ ಹಣದ ಸಮೇತ ಸರ್ವೇಯರ್ ಮಲ್ಲಪ್ಪ ಜಂಬಗಿ, ಸಹಾಯಕ ಗುರುದತ್ ಬಿರಾದಾರರನ್ನೂ ಬಂಧಿಸಿದ್ದಾರೆ.
ಲೋಕಾಯುಕ್ತ ವಿಜಯಪುರ ಎಸ್ಪಿ ಮಲ್ಲೇಶ, ಡಿಎಸ್ಪಿ ಸುರೇಶರೆಡ್ಡಿ, ಸಿಪಿಐ ಆನಂದ ಟಕ್ಕನವರ, ಆನಂದ ದೋಣಿ ಇವರಿದ್ದ ಲೋಕಾಯುಕ್ತ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.