![Modi,-Dravid](https://www.udayavani.com/wp-content/uploads/2024/06/Modi-Dravid-415x249.jpg)
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್
Team Udayavani, May 18, 2024, 4:29 PM IST
![raghu bhat](https://www.udayavani.com/wp-content/uploads/2024/05/raghu-bhat-620x410.jpg)
ಮಂಗಳೂರು: ‘ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿ ಘೋಷಣೆಯಲ್ಲಿ ಬಿಜೆಪಿಯಿಂದ ಕರಾವಳಿಗೆ ಆದ ಭೌಗೋಳಿಕ ಅನ್ಯಾಯ, ಆಯ್ಕೆಯ ಮಾನದಂಡದಲ್ಲಾದ ವ್ಯತ್ಯಾಸದ ಕಾರಣಕ್ಕಾಗಿ ನಾನು ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಯಾರನ್ನೂ ಸೋಲಿಸುವ ಉದ್ದೇಶ ನನ್ನಲ್ಲಿಲ್ಲ, ಬದಲಾಗಿ ಗೆದ್ದು, ಪದವೀಧರ ಕ್ಷೇತ್ರದ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತೇನೆ’ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಷತ್ ಸದಸ್ಯನಾಗಿ ಆಯ್ಕೆಯಾದರೆ ಪದವೀಧರ ಕ್ಷೇತ್ರಗಳಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ಪೂರ್ತಿ ಸಮಯ ನೀಡಿ, ಆ ಸ್ಥಾನಕ್ಕೆ ನ್ಯಾಯ ನೀಡುವ ಕೆಲಸ ಮಾಡುತ್ತೇನೆ. ನಾನೇನು ಪಕ್ಷಕ್ಕೆ ದ್ರೋಹ ಮಾಡಿಲ್ಲ. ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬೇಸರ, ನೋವಿನಿಂದ ಸ್ಪರ್ಧಿಸುತ್ತಿದ್ದೇನೆ’ ಎಂದರು.
ಗಾಡ್ ಫಾದರ್ ಸಂಸ್ಕೃತಿ
‘ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವಾಗ ಬೂತ್ ಮಟ್ಟದಿಂದಲೇ ಹೆಸರು ಪಡೆದು, ಮಂಡಲದಲ್ಲಿ ಚರ್ಚೆಯಾಗಿ ಅಂತಿಮವಾಗಿ ಜಿಲ್ಲೆಯಿಂದ ಒಂದು ಹೆಸರು ಅಂತಿಮವಾಗಿ ರಾಜ್ಯದ ಮೂಲಕ ಕೇಂದ್ರಕ್ಕೆ ಕಳುಹಿಸಲಾಗುತ್ತಿತ್ತು. ಆದರೆ, ಈಗ ರಾಜ್ಯದಿಂದ ಹೋದ ಹೆಸರು ಕೇಂದ್ರದಲ್ಲಿ ಬದಲಾಗುತ್ತದೆ. ಈಗ ಕಾಂಗ್ರೆಸ್ನ ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ’ ಎಂದು ಆಕ್ರೋಶ ಹೊರ ಹಾಕಿದರು.
ಟಾಪ್ ನ್ಯೂಸ್
![Modi,-Dravid](https://www.udayavani.com/wp-content/uploads/2024/06/Modi-Dravid-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Modi,-Dravid](https://www.udayavani.com/wp-content/uploads/2024/06/Modi-Dravid-150x90.jpg)
T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ
![6-health](https://www.udayavani.com/wp-content/uploads/2024/06/6-health-150x90.jpg)
AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್ ಯುಟರೈನ್ ಬ್ಲೀಡಿಂಗ್ (ಎಯುಬಿ)
![1](https://www.udayavani.com/wp-content/uploads/2024/06/1-20-150x90.jpg)
T20 world cup: ವಿಶ್ವಕಪ್ ದಿಗ್ವಿಜಯ… ಅಂದು – ಇಂದು
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.