ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

ಈಗ ಪಕ್ಷಕ್ಕಿದೆ ತಾನಾಗಿ ಮುನ್ನಡೆಯುವ ಸಾಮರ್ಥ್ಯ: ಬಿಜೆಪಿ ಅಧ್ಯಕ್ಷ

Team Udayavani, May 19, 2024, 1:07 AM IST

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

ಹೊಸದಿಲ್ಲಿ: ಭಾರತೀಯ ಜನತಾ ಪಾರ್ಟಿ ಈಗ ಬೆಳೆದಿದೆ, ಸದೃಢ ವಾಗಿದೆ. ಹಾಗಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್‌)ದ ಆಸರೆಯ ಅಗತ್ಯ ಈಗ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

“ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದ ಸಮಯಕ್ಕೂ ಈಗಿನ ಸಮಯಕ್ಕೂ ಆರೆಸ್ಸೆಸ್‌ನ ಉಪಸ್ಥಿತಿಯಲ್ಲಿ ವ್ಯತ್ಯಾಸ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಆರಂಭದಲ್ಲಿ ನಾವು ಸಮರ್ಥರಾಗಿರಲಿಲ್ಲ. ಚಿಕ್ಕ ಪಕ್ಷವಾಗಿದ್ದೆವು. ಹಾಗಾಗಿ ಆರೆಸ್ಸೆಸ್‌ನ ಅಗತ್ಯ ಇತ್ತು. ಆದರೆ ಈಗ ನಾವು ಬೆಳೆದಿದ್ದೇವೆ. ನಮಗೆ ನಮ್ಮದೇ ಆದ ಸಾಮರ್ಥ್ಯ ಬಂದಿದೆ. ಬಿಜೆಪಿ ಈಗ ತನ್ನಷ್ಟಕ್ಕೆ ತಾನೇ ಮುನ್ನಡೆಯು ತ್ತಿದೆ ಎಂದು ಹೇಳಿದ್ದಾರೆ.

ಈಗ ಆರೆಸ್ಸೆಸ್‌ನ ಬೆಂಬಲ ಬಿಜೆಪಿಗೆ ಅಗತ್ಯ ಇಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಪಕ್ಷ ಬೆಳೆದಿದೆ. ಎಲ್ಲರಿಗೂ ಅವರ ಪಾತ್ರ ಮತ್ತು ಕರ್ತವ್ಯ ಏನು ಎಂಬುದು ಗೊತ್ತು. ಆರೆಸ್ಸೆಸ್‌ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆಯಾಗಿದೆ. ನಮ್ಮದು ರಾಜಕೀಯ ಸಂಘಟನೆ. ಹಾಗಾಗಿ ಆರೆಸ್ಸೆಸ್‌ನ ಅಗತ್ಯದ ಪ್ರಶ್ನೆಯೇ ಬರುವುದಿಲ್ಲ. ಅದು ಸೈದ್ಧಾಂತಿಕ ವೇದಿಕೆಯಾಗಿದೆ. ಸೈದ್ಧಾಂತಿಕವಾಗಿ ಏನು ಮಾಡಬೇಕೋ ಆ ಕೆಲಸವನ್ನು ಅದು ಮಾಡುತ್ತದೆ. ಪಕ್ಷದ ವ್ಯವಹಾರಗಳನ್ನು ನಮ್ಮದೇ ಆದ ರೀತಿಯಲ್ಲಿ ನಾವು ನಿರ್ವಹಣೆ ಮಾಡುತ್ತಿದ್ದೇವೆ. ಒಂದು ರಾಜಕೀಯ ಪಕ್ಷವಾಗಿ ನಾವು ಹೀಗೆಯೇ ಇರಬೇಕು ಎಂದರು.

ಮಥುರಾ, ಕಾಶಿ ದೇಗುಲ ಯೋಜನೆ ಇಲ್ಲ
ಮಥುರಾ ಮತ್ತು ಕಾಶಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡುವ ಯೋಚನೆಯನ್ನಾಗಲೀ, ಇಚ್ಛೆಯನ್ನಾಗಲೀ ಬಿಜೆಪಿ ಹೊಂದಿಲ್ಲ ಅಥವಾ ಆ ಕುರಿತ ಯಾವುದೇ ಚರ್ಚೆಗಳೂ ನಡೆದಿಲ್ಲ. ಸಂಸದೀಯ ಮಂಡಳಿಯಲ್ಲಾದ ಚರ್ಚೆಯಂತೆ ನಮ್ಮ ಪಕ್ಷದ ವ್ಯವಹಾರಗಳು ನಡೆಯುತ್ತವೆ ಎಂದು ಪ್ರಶ್ನೆಯೊಂದಕ್ಕೆ ನಡ್ಡಾ ಉತ್ತರಿಸಿದರು.

ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ ಮತ್ತು ಹಿಮಂತ ಬಿಸ್ವಾ ಶರ್ಮಾ ಅವರು ಮಥುರಾ ಮತ್ತು ಕಾಶಿಯಲ್ಲಿ ದೇಗುಲ ನಿರ್ಮಾಣದ ಭರವಸೆ ನೀಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಈ ವಿಷಯದಲ್ಲಿ ಗೊಂದಲ ಬೇಡ. 1989ರಲ್ಲಿ ಪಾಲಂಪುರ್‌ನಲ್ಲಿ ಕೈಗೊಳ್ಳಲಾದ ನಿರ್ಣಯದಲ್ಲಿ ರಾಮಮಂದಿರ ನಿರ್ಮಾಣದ ಅಜೆಂಡಾವನ್ನು ಬಿಜೆಪಿ ತನ್ನದಾಗಿಸಿಕೊಂಡಿತು. ಸುದೀರ್ಘ‌ ಹೋರಾಟದ ಬಳಿಕ ಈಗ ರಾಮಮಂದಿರ ನಿರ್ಮಾಣವಾಗಿದೆ. ಅದು ನಮ್ಮ ಅಜೆಂಡಾ ಆಗಿತ್ತು. ಆದರೆ ಕೆಲವರು ಭಾವುಕರಾಗುತ್ತಾರೆ ಅಥವಾ ಅತ್ಯುತ್ಸಾಹದಲ್ಲಿ ಇತರ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ನಮ್ಮದು ದೊಡ್ಡ ಪಕ್ಷವಾಗಿದ್ದು, ಪ್ರತಿಯೊಬ್ಬ ನಾಯಕ ತಮ್ಮದೇ ಆದ ಮಾತಿನ ಶೈಲಿಯನ್ನು ಹೊಂದಿದ್ದಾರೆ ಎಂದರು.

ಟಾಪ್ ನ್ಯೂಸ್

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.