Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ
Team Udayavani, May 19, 2024, 1:50 AM IST
ಮಂಗಳೂರು: ಯುವ ಲೇಖಕಿ ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಬೆಂಗಳೂರಿನ ಸ್ವಾಭಿಮಾನಿ ಕರ್ನಾಟಕ ವೇದಿಕೆಯ 2023ನೇ ಸಾಲಿನ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ ಲಭಿಸಿದೆ.
ಡಾ| ಸಿ. ಸೋಮಶೇಖರ್ ಮತ್ತು ಸರ್ವಮಂಗಳ ದತ್ತಿ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಮೇ 31ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಜರಗಲಿದೆ.
ಡಾ| ಎಚ್.ಎಸ್.ಎಂ. ಪ್ರಕಾಶ್ ಅನುವಾದಿತ ಕೃತಿ “ನಮ್ಮಂಥ ಬಲ್ಲಿದವರು”, ಪ್ರೊ| ಎಚ್.ಟಿ. ಪೋತೆ ಪ್ರವಾಸ ಕಥನ “ಬಾಬಾ ಸಾಹೇಬರ ಲಂಡನ್ ಮನೆಯಲ್ಲಿ’, ಫಾತಿಮಾ ರಲಿಯಾ ಕಥಾ ಸಂಕಲನ “ಒಡೆಯಲಾರದ ಒಡಪು’, ಸಂತೋಷ ನಾಯಕ ಕವನ ಸಂಕಲನ “ಹೊಸ ವಿಳಾಸದ ಹೆಜ್ಜೆಗಳು’ ಆಯ್ಕೆಯಾಗಿವೆ.
ಡಾ| ಸಿ. ಸೋಮಶೇಖರ್ ಮತ್ತು ಸರ್ವಮಂಗಳ ದತ್ತಿ ಪ್ರಶಸ್ತಿಗೆ ಇಂದಿರಾ ಕೃಷ್ಣಪ್ಪ ವ್ಯಕ್ತಿಚಿತ್ರಣ “ಸಾವಿತ್ರಿ ಬಾಪುಲೆ’ ಮತ್ತು ಡಾ| ಎಂ.ಎಸ್. ಮಣಿ ಲೇಖನ ಸಂಕಲನ “ಗವಿಮಾರ್ಗ” ಕೃತಿಗೆ ಲಭಿಸಿದೆ.
ಪ್ರಶಸ್ತಿ ತಲಾ 5 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಕರ್ನಾಟಕ ಲೇಖಕಿ ಸಂಘದ ಅಧ್ಯಕ್ಷ ಎಚ್.ಎಲ್. ಪುಷ್ಪಾ, ಲೇಖಕರಾದ ದ್ವಾರನಕುಂಟೆ ಪಾತಣ್ಣ ಹಾಗೂ ಡಾ| ಸತ್ಯಮಂಗಲ ಮಹಾದೇವ್ ತೀರ್ಪುಗಾರರಾಗಿ ಸಹಕರಿಸಿದ್ದರು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.