Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Team Udayavani, May 19, 2024, 4:02 PM IST
ಸಾಂದರ್ಭಿಕ ಚಿತ್ರ
ಪಣಜಿ: ಮುಂಗಾರು ಪೂರ್ವದಲ್ಲಿ ಅಪಾಯಕಾರಿ ಮರಗಳನ್ನು ಕಡಿಯಲು ರಾಜ್ಯದ ಪುರಸಭೆ ಮತ್ತು ಪಂಚಾಯತ್ಗಳಿಗೆ ವರ್ಗವಾರು ಆರ್ಥಿಕ ನೆರವು ನೀಡುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಎರಡೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ಇದರ ಪ್ರಕಾರ ಪಣಜಿ ಮಹಾನಗರ ಪಾಲಿಕೆಗೆ 1 ಲಕ್ಷ ರೂ. ಆದರೆ ‘ಸಿ’ ಮಟ್ಟದ ಪುರಸಭೆಗಳು ಮತ್ತು ಪಂಚಾಯತ್ಗಳು 25,000 ರೂ.ಗಳನ್ನು ನೀಡಲಾಗುತ್ತಿದೆ.
ಮುಂಗಾರು ಪೂರ್ವ ಕಾಮಗಾರಿ ವೇಳೆ ರಾಜ್ಯದ ನಾನಾ ಕಡೆ ಅಪಾಯಕಾರಿ ಮರಗಳನ್ನು ಕಡಿಯುವುದು ಅನಿವಾರ್ಯವಾಗಿದೆ. ಇದಕ್ಕಾಗಿ ಎರಡೂ ಜಿಲ್ಲಾಧಿಕಾರಿಗಳು ರಾಜ್ಯ ವಿಕೋಪ ನಿಧಿಯಿಂದ ನಗರಸಭೆ, ಪುರಸಭೆ ಹಾಗೂ ಪಂಚಾಯಿತಿಗಳಿಗೆ ಹಣ ನೀಡಬೇಕು ಎಂದು ಪ್ರಾಧಿಕಾರ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.
ಹಣ ವಿನಿಯೋಗಿಸುವ ಮುನ್ನ ನಗರಸಭೆ, ಪುರಸಭೆ, ಪಂಚಾಯಿತಿಗಳಿಂದ ಈ ಹಿಂದೆ ನೀಡಿದ ಹಣ ಬಳಕೆ ಬಗ್ಗೆ ಪ್ರಮಾಣ ಪತ್ರ ಪಡೆಯುವುದು ಅಗತ್ಯ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಯಾರೂ ಈ ನಿಧಿಯನ್ನು ರಾಜಕೀಯ ಲಾಭಕ್ಕೆ ಬಳಸದಂತೆ ಎಚ್ಚರಿಕೆ ವಹಿಸಬೇಕು. ಈ ಅಧಿಸೂಚನೆಗೆ ರಾಜ್ಯ ಕಾರ್ಯಕಾರಿ ಸಮಿತಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪೂರ್ವಾನುಮತಿಯನ್ನೂ ತೆಗೆದುಕೊಳ್ಳಲಾಗಿದೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.