Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ


Team Udayavani, May 19, 2024, 8:27 PM IST

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

ಹುಣಸೂರು:ವರುಣನ ಅಬ್ಬರಕ್ಕೆ ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ತಂಬಾಕು, ಶುಂಠಿ ಬೆಳೆ ಜಲಾವೃತವಾಗಿದೆ. ಕೆರೆ ಕಟ್ಟೆಗಳು ತುಂಬಿವೆ. ಜೊತೆಗೆ ಜಮೀನಿನ ಮಣ್ಣನನ್ನು ಸಹ ಹೊತ್ತೊಯ್ದಿದೆ.

ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದ ಸಾಕಷ್ಟು ಅನಾಹುತ ಸೃಷ್ಟಿಸಿತ್ತು. ಭಾನುವಾರ ಮಧ್ಯಾಹ್ನ ಒಂದೂವರೆ ಗಂಟೆ ಕಾಲ ಸುರಿದ ಮಳೆಯು ತಾಲೂಕಿನ ಹನಗೋಡು ಹೋಬಳಿಯ ಕರಣಕುಪ್ಪೆ, ಕಲ್ಲಹಳ್ಳಿ, ಕೊತ್ತೆಗಾಲ, ಚಿಲ್ಕುಂದ ಗ್ರಾ.ಪಂ.ವ್ಯಾಪ್ತಿಯ ಹರೀನಹಳ್ಳಿ, ಕಣಗಾಲು, ಮುತ್ತುರಾಯನಹೊಸಹಳ್ಳಿ, ಆಡಿಗನಹಳ್ಳಿ, ಚಿಲ್ಕುಂದದದಲ್ಲಿ ಮತ್ತೆ ಬೆಳೆಗಳು ಕೊಚ್ಚಿ ಹೋಗಿದ್ದು, ಈ ಗ್ರಾಮಗಳಲ್ಲೇ ಅಪಾರ ನಷ್ಟವಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದ್ದು ಗ್ರಾಮಸ್ಥರು ನಲುಗಿ ಹೋಗಿದ್ದಾರೆ.

ಭಾನುವಾರ ಭಾರೀ ಮಳೆ:
ಭಾನುವಾರ ಮಧ್ಯಾಹ್ನ ಕಣಗಾಲು, ಹರೀನಹಳ್ಳಿ, ಮುತ್ತುರಾಯನಹೊಸಹಳ್ಳಿ, ಕಲ್ಲಹಳ್ಳಿ, ಹುಣಸೇಗಾಲ, ಅತ್ತಿಕುಪ್ಪೆ, ಚಿಲ್ಕುಂದ, ಕೊತ್ತೆಗಾಲ, ಆಡಿಗನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸುರಿದ ಭಾರೀ ಮಳೆಯಿಂದ ಅಪಾರ ಹಾನಿ ಉಂಟಾಗಿದ್ದು, ಕೃಷಿಕರು ಸಂಕಟ ಎದುರಿಸುತ್ತಿದ್ದಾರೆ.

ನೂರಾರು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ತಂಬಾಕು ಬೆಳೆ, ಬಿತ್ತನೆ ಮಾಡಿದ್ದ ಶುಂಠಿ ಬೆಳೆಯನ್ನು ಮಳೆನೀರು ಕೊಚ್ಚಿ ಹೊತ್ತೊಯ್ದಿದೆ. ಹೊಲಗಳಲ್ಲಿ ಮಣ್ಣು ಹಳ್ಳ ಸೇರಿದೆ, ರಸ್ತೆಯಲ್ಲಿ ನೀರು ಹರಿದು ಹಾಳಾಗಿದೆ. ಈ ಭಾಗದಲ್ಲೇ ಕೋಟ್ಯಾಂತರ ರೂ ನಷ್ಟ ಸಂಭವಿಸಿದೆ.

ತುಂಬಿದ ಕೆರೆಗಳು:
ಮುತುರಾಯನಹೊಸಹಳ್ಳಿಯ ಬೆಟ್ಟದಿಂದ ಅಪಾರ ಪ್ರಮಾಣದ ನೀರು ಹರಿದು ಕಣಗಾಲಿನ ಗೆಂಡೆಕೆರೆ, ಚನ್ನಮ್ಮನಕಟ್ಟೆ, ಹರೀನಹಳ್ಳಿಕೆರೆ, ಮುತತ್ತುರಾಯನಹೊಸಹಳ್ಳಿಕೆರೆ, ಆಡಿಗನಹಳ್ಳಿಕೆರೆ, ನಾಗಮಂಗಲ ಕೆರೆ, ಕಲ್ಲಹಳ್ಳಿಯ ನಾಲ್ಕು ಕೆರೆಗಳು, ಅಲ್ಲದೆ ಚಿಲ್ಕುಂದದ ಬಹುತೇಕ ಕೆರೆ ಕಟ್ಟೆಗಳು ಭರ್ತಿಯಾಗಿವೆ. ಅನೇಕ ಕೆರೆಗಳ ಏರಿ, ಕೋಡಿ ಮೇಲೆ, ಕಣಗಾಲು ಹುನುಗನಹಳ್ಳಿ ರಸ್ತೆ ಮೇಲೆ ನೀರು ಹರಿದಿದೆ.

ಮೀನು ಹಿಡಿದ ಗ್ರಾಮಸ್ಥರು:
ಕೆರೆಕಟ್ಟೆಗಳಿಗೆ ಅಪಾರ ಪ್ರಮಾಣದ ಮಳೆ ನೀರು ಹರಿದು ಬಂದಿದ್ದರಿಂದ ಹರೀನಹಳ್ಳಿ ಕೆರೆಯಲ್ಲಿ ಮಳೆ ನಿಂತ ನಂತರ ಸುತ್ತಮುತ್ತಲ ಗ್ರಾಮಸ್ಥರು ಕೂನಿ ಹಾಕಿ ಮೀನು ಹಿಡಿದರು. ಮಕ್ಕಳು ನೀರಿನಲ್ಲಿ ಮಿಂದೆದ್ದರು. ಈ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಸರಕಾರ ಸೂಕ್ತ ಪರಿಹಾರ ನೀಡುಬೇಕೆಂದು ನೊಂದ ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.