Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
Team Udayavani, May 19, 2024, 11:46 PM IST
ಬೆಂಗಳೂರು: ಎಲ್ಲ ಸರಕಾರಿ ಕಚೇರಿಗಳಲ್ಲೂ ಇ-ಆಫೀಸ್ ಅನುಷ್ಠಾನಕ್ಕೆ ಒತ್ತು ಕೊಡಲಾಗುತ್ತಿದೆಯಾದರೂ ನಿರೀಕ್ಷಿತ ಗುರಿ ಮಾತ್ರ ಮುಟ್ಟಿಲ್ಲ. ತುರ್ತಾಗಿ ಇ-ಆಫೀಸ್ ತಂತ್ರಾಂಶ ಅನುಷ್ಠಾನಗೊಳಿಸಿ ಕಡ್ಡಾಯವಾಗಿ ಕಡತ ನಿರ್ವಹಣೆಯನ್ನು ಅದೇ ತಂತ್ರಾಂಶದ ಮೂಲಕ ನಿರ್ವಹಿಸುವಂತೆ ಸಿಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ), ಸಕಾಲ ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್ ಆದೇಶಿಸಿದ್ದಾರೆ.
ಬಹುತೇಕ ಎಲ್ಲ ಸಚಿವಾಲಯ ಹಾಗೂ ಸಚಿವರ ಕಚೇರಿಗಳಲ್ಲಿ ಇ-ಆಫೀಸ್ ಅನುಷ್ಠಾನಗೊಳ್ಳುತ್ತಿದ್ದು, ಆಯುಕ್ತಾಲಯ, ನಿರ್ದೇಶನಾಲಯಗಳಲ್ಲೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿವೆ. ಆದರೆ ಜಿಲ್ಲೆ ಮತ್ತು ತಾಲೂಕು ಮಟ್ಟದ ಸರಕಾರಿ ಕಚೇರಿಗಳು ಹಾಗೂ ನಿಗಮ, ಮಂಡಳಿಗಳ ಕಚೇರಿಗಳು ಈ ವಿಚಾರದಲ್ಲಿ ಹಿಂದೆ ಬಿದ್ದಿವೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಡಿ ಬರುವ 2 ಆಯುಕ್ತಾಲಯದಲ್ಲಿ ಇ-ಆಫೀಸ್ ಅನುಷ್ಠಾನಗೊಂಡಿಲ್ಲ. ಅದೇ ರೀತಿ ಒಳಾಡಳಿತ ಮತ್ತು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಮೂರು ನಿರ್ದೇಶನಾಲಯಗಳಲ್ಲೂ ಜಾರಿಯಾಗಿಲ್ಲ. ರಾಜ್ಯದಲ್ಲಿರುವ 6,240 ಜಿಲ್ಲಾ ಮಟ್ಟದ ಕಚೇರಿಗಳ ಪೈಕಿ 1,145 ಕಚೇರಿಗಳಲ್ಲಿ ಮಾತ್ರ ಇ-ಆಫೀಸ್ ಜಾರಿಯಾಗಿದ್ದು, ಇನ್ನೂ 5,095 ಕಚೇರಿಗಳಲ್ಲಿ ಅನುಷ್ಠಾನ ಆಗಬೇಕಿದೆ. 15,746 ತಾಲೂಕು ಮಟ್ಟದ ಕಚೇರಿಗಳ ಪೈಕಿ 1,425 ಕಚೇರಿಗಳಲ್ಲಿ ಅನುಷ್ಠಾನಗೊಂಡಿದ್ದು, ಬರೋಬ್ಬರಿ 14,321 ಕಚೇರಿಗಳಲ್ಲಿ ಅನುಷ್ಠಾನ ಆಗಿಲ್ಲ. 270 ಸ್ವಾಯತ್ತ ಸಂಸ್ಥೆಗಳ ಕಚೇರಿ ಪೈಕಿ 90ರಲ್ಲಿ ಮಾತ್ರ ಜಾರಿಯಲ್ಲಿದ್ದು, 174 ಕಚೇರಿಯಲ್ಲಿ ಇ-ಆಫೀಸ್ ತಂತ್ರಾಂಶ ಅಳವಡಿಸಿಕೊಂಡಿಲ್ಲ. ಅದೇ ರೀತಿ 862 ಜಿಲ್ಲಾ ಮಟ್ಟದ ನಿಗಮ-ಮಂಡಳಿ ಕಚೇರಿಗಳ ಪೈಕಿ 68ರಲ್ಲಿ ಮಾತ್ರ ಇ-ಆಫೀಸ್ ಅಳವಡಿಸಿಕೊಂಡಿದ್ದು, ಇನ್ನೂ 749 ಕಚೇರಿಗಳಲ್ಲಿ ಬಾಕಿ ಇದೆ. ತುರ್ತಾಗಿ ಇ-ಆಫೀಸ್ ತಂತ್ರಾಂಶ ಅನುಷ್ಠಾನಗೊಳಿಸಿ, ಕಡ್ಡಾಯವಾಗಿ ಕಡತ ನಿರ್ವಹಣೆ ಪ್ರಕ್ರಿಯೆಯನ್ನು ಇ-ಆಫೀಸ್ ತಂತ್ರಾಂಶದ ಮೂಲಕವೇ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿ, ಸಿಬಂದಿಗೆ ಸೂಚಿಸಬೇಕೆಂದು ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.