Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

ಆನೆ-ಮಾನವ ಸಂಘರ್ಷ ಕಾರಣ; ಮೇ 23ರಿಂದ ಕರ್ನಾಟಕ, ತ.ನಾ., ಕೇರಳ, ಆಂಧ್ರ, ತೆಲಂಗಾಣದಲ್ಲಿ ಗಣತಿ

Team Udayavani, May 20, 2024, 7:30 AM IST

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

ಚಾಮರಾಜನಗರ: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಗಡಿಭಾಗಗಳಲ್ಲಿ ಇದೇ ಮೊದಲ ಬಾರಿಗೆ ಮೇ 23ರಿಂದ ಮೂರು ದಿನಗಳ ಕಾಲ ಆನೆಗಳ ಗಣತಿ ಕಾರ್ಯ ನಡೆಯಲಿದೆ.

ಸಾಮಾನ್ಯವಾಗಿ ಐದು ವರ್ಷಗಳಿಗೊಮ್ಮೆ ದೇಶದ ಎಲ್ಲ ರಾಜ್ಯಗಳಲ್ಲಿ ಆನೆಗಣತಿ ನಡೆಸಲಾಗುತ್ತದೆ. ಆದರೆ ಈ ಬಾರಿ ದಕ್ಷಿಣ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಮಾತ್ರ ಆನೆಗಳ ಗಣತಿ ನಡೆಯುತ್ತಿದೆ. ಇದೇ ವರ್ಷದ ಮಾರ್ಚ್‌ ತಿಂಗಳಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳ ಅಧಿಕಾರಿಗಳನ್ನು ಒಳಗೊಂಡ ಅಂತಾರಾಜ್ಯ ಸಮನ್ವಯ ಸಮಿತಿ ನಡೆಸಿದ ಸಭೆಯ ನಿರ್ಧಾರದಂತೆ ಈ ಗಣತಿ ನಡೆಸಲಾಗುತ್ತಿದೆ.

ಈ ಗಣತಿ ಪ್ರಕ್ರಿಯೆ ಮೂಲಕ ಆನೆಗಳ ಆವಾಸ ಸ್ಥಾನ, ಮಾನವ ಪ್ರಾಣಿ ಸಂಘರ್ಷವನ್ನು ಕಡಿಮೆಗೊಳಿಸುವ ಮತ್ತು ಐದು ರಾಜ್ಯಗಳು ಉತ್ತಮ ಸಮನ್ವಯ ಸಾಧಿಸಲು, ಉತ್ತಮ ಯೋಜನೆಗಳನ್ನು ರೂಪಿಸುವ ಗುರಿ ಹೊಂದಿವೆ ಎಂದು ಹಿರಿಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಹಾಸನ ಜಿಲ್ಲೆ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದು, ಬಂಡೀಪುರ ಅರಣ್ಯದಲ್ಲಿ ಬಿಡಲಾಗಿದ್ದ ದಂತ ರಹಿತ ಗಂಡಾನೆ ಆನೆ ಕೇರಳದ ವಯನಾಡು ಅರಣ್ಯದಲ್ಲಿ ಓರ್ವನನ್ನು ಕೊಂದಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ಬಂಡೀಪುರದಲ್ಲಿ ಮಾ.19ರಂದು ಅಂತಾರಾಜ್ಯ ಅಧಿಕಾರಿಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ವನ್ಯಜೀವಿ ವಾರ್ಡನ್‌ಗಳು ಮತ್ತು ಹಿರಿಯ ಅರಣ್ಯಾಧಿಕಾರಿಗಳು ಭಾಗವಹಿಸಿದ್ದರು.

ಅದರಂತೆ ಮೇ 23, 24 ಮತ್ತು 25ರಂದು ಈ ರಾಜ್ಯಗಳ ಗಡಿಭಾಗದ ಅರಣ್ಯಗಳಲ್ಲಿ ಆನೆಗಳ ಗಣತಿ ನಡೆಸಲಾಗುತ್ತಿದೆ. ಆನೆ ಮತ್ತು ಮಾನವ ಸಂಘರ್ಷದ ಪ್ರದೇಶಗಳು° ಗುರುತಿಸಲು ಮತ್ತು ಇದಕ್ಕೆ ಸೂಕ್ತ ಪರಿಹಾರವನ್ನು ಕಂಡು ಹಿಡಿಯಲು ಈ ಆನೆಗಣತಿ ನಡೆಸಲಾಗುತ್ತಿದೆ. ಈ ಗಣತಿ ಗಡಿ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಗಣತಿಯ ವಿಧಾನ
ಮೇ 23ರಂದು ಮೊದಲ ದಿನ ನೇರ ಎಣಿಕೆ ಪದ್ಧತಿ, 24ರಂದು ಆನೆಗಳ ಲದ್ದಿಗಳ ಮೂಲಕ ಎಣಿಕೆ, 25ರಂದು ನೀರು ಕುಡಿಯಲು ಬರುವ ಜಾಗಗಳಲ್ಲಿ ಎಣಿಕೆ ಮೂಲಕ ಗಣತಿ ನಡೆಸಲಾಗುತ್ತದೆ. ತಂಡಗಳಲ್ಲಿ ಗಣತಿ ಎಣಿಕೆ ಕಾರ್ಯ ನಡೆಯಲಿದೆ. ಒಂದು ತಂಡ ನಿಗದಿತ ಪ್ರದೇಶದ 15 ಕಿ.ಮೀ. ದೂರವನ್ನು ಕಾಲ್ನಡಿಗೆ ಮೂಲಕ ಕ್ರಮಿಸಿ ಗಣತಿ ನಡೆಸುತ್ತದೆ. ಅರಣ್ಯ ಸಿಬಂದಿ ಈ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇವರಿಗೆ ಒಂದು ಸುತ್ತಿನ ತರಬೇತಿಯನ್ನೂ ನೀಡಲಾಗಿದೆ. ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಗಣತಿ ಕಾರ್ಯ ನಡೆಯಲಿದೆ. ಆನೆಗಳ ವಯಸ್ಸು, ಲಿಂಗ, ದಂತ ಮತ್ತು ದಂತ ರಹಿತ ಗಂಡಾನೆ (ಮಕನ) ಸಂಖ್ಯೆಯನ್ನೂ ಈ ಗಣತಿ ಮೂಲಕ ನಿರ್ಣಯಿಸಲಾಗುತ್ತದೆ.

953 ಆನೆಗಳು ಸಂರಕ್ಷಿತ ಪ್ರದೇಶದಿಂದ ಹೊರಗೆ
ರಾಜ್ಯದಲ್ಲಿ ಆನೆಗಳು 14 ಸಂರಕ್ಷಿತ ಪ್ರದೇಶಗಳಲ್ಲಿ ಹಂಚಿ ಹೋಗಿವೆ. ಶೇ.82ರಷ್ಟು ಆನೆಗಳು ಈ ಸಂರಕ್ಷಿತ ಪ್ರದೇಶಗಳಲ್ಲಿ ವಾಸಿಸುತ್ತಿವೆ. ಶೇ.18ರಷ್ಟು ಆನೆಗಳು ಸಂರಕ್ಷಿತ ಅರಣ್ಯ ಪ್ರದೇಶಗಳಿಂದ ಹೊರಗಿವೆ. 2023ರ ಗಣತಿ ಪ್ರಕಾರ ಇಂಥ 953 ಆನೆಗಳಿವೆ. ಈ ಪ್ರದೇಶಗಳು ಆನೆಗಳ ಆವಾಸಕ್ಕೆ ಸುರಕ್ಷಿತವಾಗಿಲ್ಲ. ಕಳೆದ ಗಣತಿಯಲ್ಲಿ ಪತ್ತೆಯಾದ 6,395 ಆನೆಗಳ ಪೈಕಿ 161 ಆನೆಗಳು ಖಾಸಗಿಯವರ ಜಾಗಗಳಲ್ಲಿ (ಜಮೀನು, ಕಾಫಿ ಎಸ್ಟೇಟುಗಳಲ್ಲಿ) ಕಂಡು ಬಂದಿವೆ. ಇವುಗಳ ಸಂರಕ್ಷಣೆ ಅರಣ್ಯ ಇಲಾಖೆಗೆ ಸವಾಲಾಗಿದೆ. ಇವಲ್ಲದೆ, 792 ಆನೆಗಳು ಅರಣ್ಯ ಪ್ರದೇಶದಲ್ಲೆ ಇದ್ದರೂ, ಅವು ಸಾಂಪ್ರದಾಯಿಕ ಸಂರಕ್ಷಣ ವ್ಯಾಪ್ತಿಯಲ್ಲಿಲ್ಲ. ಆದರೂ ಇವು ಖಾಸಗಿ ಜಾಗಗಳಿಗೆ ಹೋಲಿಸಿದರೆ ಸುರಕ್ಷಿತವಾಗಿವೆ ಎಂದು ಗಣತಿಯ ವರದಿಯಲ್ಲಿ ತಿಳಿಸಲಾಗಿದೆ.

ದಕ್ಷಿಣ ರಾಜ್ಯಗಳ ಆನೆಗಳ ಗಣತಿ ಕಾರ್ಯ ಮೇ 23ರಿಂದ ಆರಂಭವಾಗಲಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸುಮಾರು 150 ಮಂದಿ ಅರಣ್ಯ ಸಿಬಂದಿ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಅವರಿಗೆ ತರಬೇತಿಯನ್ನೂ ನೀಡಲಾಗಿದೆ.
-ಪ್ರಭಾಕರನ್‌,
ಅರಣ್ಯ ಸಂರಕ್ಷಣಾಧಿಕಾರಿ, ಬಂಡೀಪುರ

– ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.