Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ
Team Udayavani, May 20, 2024, 12:45 AM IST
ಬೆಳ್ತಂಗಡಿ: ವಸಂತ ಬಂಗೇರ ಅವರು ನಮ್ಮ ತಂದೆ ಬಂಗಾರಪ್ಪರಂತೆ ಶುದ್ಧತೆ ಮತ್ತು ನೇರ ನುಡಿಯಿಂದಲೇ ಜನರಿಗೆ ಹತ್ತಿರವಾದವರು. ಬಂಗೇರರ ನಿಧನದ ಸಮಯದಲ್ಲಿ ನಾನು ಕಾರಣಾಂತರಗಳಿಂದ ಬರಲಾಗಿರಲಿಲ್ಲ. ಪಕ್ಷಾತೀತವಾದ ಅವರ ನಡೆ ಮಾದರಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ಇತ್ತೀಚೆಗೆ ನಿಧನ ಹೊಂದಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿವಾಸಕ್ಕೆ ಶನಿವಾರ ಆಗಮಿಸಿ ಪತ್ನಿ ಸುಜಿತಾ ವಿ. ಬಂಗೇರ, ಪುತ್ರಿಯರಾದ ಪ್ರೀತಿತಾ, ಬಿನುತಾ, ಧರ್ಮ ವಿಜೇತ್, ಸಂಜೀವ್ ಕಾನೆಕಲ್ ಹಾಗೂ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಜತೆಗಿದ್ದರು.
ಪ್ರಜ್ವಲ್ ಪ್ರಕರಣ:
ಎಸ್ಐಟಿ ಉತ್ತರಿಸಲಿದೆ
ಬೆಳ್ತಂಗಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸುತ್ತಿದೆ. ವಿದೇಶದಲ್ಲಿ ಇರುವ ಅವರನ್ನು ಕರೆತರಲು ಕೇಂದ್ರದ ನೆರವು ಬೇಕಿದೆ. ಎಸ್ಐಟಿ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.
ಈಬಾರಿ ಪರೀಕ್ಷೆಯ ಪಾವಿತ್ರ್ಯ ಕಾಪಾಡಲು ಎಸೆಸೆಲ್ಸಿ ಪರೀಕ್ಷೆಯಲ್ಲಿ ಕಠಿನ ನಿರ್ಧಾರ ತೆಗೆದುಕೊಂಡಿದ್ದೆವು. ಅದರಿಂದ ಫಲಿತಾಂಶದಲ್ಲಿ ಶೇ. 30 ಕುಸಿತವಾಗಿದೆ. ಮುಂದೆ ಮರು ಪರೀಕ್ಷೆಗೂ ಅವಕಾಶ ನೀಡಲಾಗಿದೆ. ಈವರ್ಷ ಮಾತ್ರ ಅಂಕ ಸಡಿಲಿಕೆಗೆ ಮುಖ್ಯಮಂತ್ರಿ ಅನುಮತಿಯಂತೆ ಅವಕಾಶ ನೀಡಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಬದಲಾಗಲಿದೆ. ಟೀಕೆ ಟಿಪ್ಪಣಿಗಳು ಇದ್ದೇ ಇರುತ್ತವೆ. ಮಕ್ಕಳಿಗೆ ಯಾವುದು ಉತ್ತಮ ಅನ್ನುವುದಷ್ಟೇ ನಮಗೆ ಬೇಕಿರುವುದು ಎಂದರು.
ನಾಳೆ ಸಿಎಂ ಭೇಟಿ
ಬೆಳ್ತಂಗಡಿ: ಗುರುವಾಯನಕೆರೆ ಮಂಜಿಬೆಟ್ಟು ಎಫ್.ಎಂ. ಗಾರ್ಡನ್ನಲ್ಲಿ ಮೇ 21ರಂದು ನೆರವೇರಲಿರುವ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಉತ್ತರಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ಬೆಳಗ್ಗೆ 11ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಟು ಮಂಗಳೂರಿಗೆ 12ಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮೂಲಕ ಮಧ್ಯಾಹ್ನ 1 ಗಂಟೆಗೆ ಗುರುವಾಯನಕೆರೆಗೆ ತಲುಪುವರು.
ಕಾರ್ಯಕ್ರಮದ ಬಳಿಕ 2 ಗಂಟೆಗೆ ಹೊರಟು 3ಕ್ಕೆ ಬಜಪೆಯಿಂದ ವಿಮಾನದಲ್ಲಿ ಬೆಂಗಳೂರಿಗೆ ತೆರಳು ವರು ಎಂದು ಸರಕಾರದ ಅಪರ ಕಾರ್ಯದರ್ಶಿ ಪ್ರಕಟನೆ ತಿಳಿಸಿದೆ. ಬಂಗೇರಅವರ ಕುಟುಂಬಸ್ಥರು ಮುಖ್ಯಮಂತ್ರಿಯನ್ನು ಭೇಟಿಯಾಗಿ ಆಮಂತ್ರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.