ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ


Team Udayavani, May 21, 2024, 7:30 AM IST

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಕುಂದಾಪುರ: ಒಂದು ಕಾಲದಲ್ಲಿ ವರ್ಷಪೂರ್ತಿ ನೀರಿನಿಂದ ಕಂಗೊಳಿಸುತ್ತಿದ್ದ ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಡವು ಗ್ರಾಮದ ಗೋರ್ಕಲ್ಲು ಮನೆ ಕೆರೆಯೀಗ ಹೂಳು ತುಂಬಿದ ಕೊಂಪೆಯಾಗಿದೆ. ಸುತ್ತಲಿನ ಹತ್ತಾರು ಎಕರೆ ಕೃಷಿ ಭೂಮಿಗೆ ನೀರುಣಿಸುತ್ತಿದ್ದ ಈ ಕೆರೆ ಈಗ ನಿಷ್ಪ್ರಯೋಜಕವಾಗಿದೆ.

ಹಡವು ಗ್ರಾಮದ ಗೋರ್ಕಲ್ಲುಮನೆ ಕೆರೆ ಬೈಂದೂರು ತಾಲೂಕಿನ ದೊಡ್ಡ ಕೆರೆಗಳಲ್ಲಿ ಒಂದು. ಅಂದಾಜು 50 ಸೆಂಟ್ಸ್‌ಗೂ ಅಧಿಕ ಪ್ರದೇಶದಲ್ಲಿ ವ್ಯಾಪಿಸಿದ್ದು, ಈಗ ಮಾತ್ರ ಹೂಳು ತುಂಬಿದೆ.

ಹಡವು ಗ್ರಾಮಕ್ಕೆ ಪ್ರಯೋಜನ
ಈ ಗೋರ್ಕಲ್ಲುಮನೆ ಕೆರೆ ಪುನರುಜ್ಜೀವನಗೊಂಡು, ಸಮೃದ್ಧ ನೀರು ಸಂಗ್ರಹಗೊಂಡರೆ ಸುಮಾರು 10-15 ಎಕರೆ ಕೃಷಿ ಭೂಮಿಗೆ ಪ್ರಯೋಜನವಾಗಲಿದೆ. ಈ ಭಾಗದ ಬಹುತೇಕ ರೈತರು ಭತ್ತದ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ. ತುಂಬಾ ವರ್ಷಗಳ ಹಿಂದೆ ಈ ಕೆರೆಯಲ್ಲಿ ನೀರು ತುಂಬಿರುತ್ತಿದ್ದ ಕಾಲದಲ್ಲಿ ಮುಂಗಾರು ಹಾಗೂ ಹಿಂಗಾರು ಎರಡೂ ಬೆಳೆಗಳನ್ನು ಮಾಡುತ್ತಿದ್ದ ರೈತರು, ಈಗ ಮುಂಗಾರಲ್ಲಿ ಮಾತ್ರ ಭತ್ತದ ಬೆಳೆಯುತ್ತಿದ್ದಾರೆ. ಹಿಂಗಾರಿನಲ್ಲಿ ನೀರಿನ ಕೊರತೆಯಾಗುತ್ತಿದೆ. ಹಡವು ಗ್ರಾಮದ ಜನ ಪ್ರತೀ ಬೇಸಗೆಯಲ್ಲಿ ನೀರಿನ ಅಭಾವ ಎದುರಿಸುತ್ತಿದ್ದಾರೆ.
ಸುತ್ತ ನದಿಯಿದ್ದರೂ ಉಪ್ಪು ನೀರಿನ ಪ್ರಭಾವದಿಂದ ನೀರು ಕುಡಿಯಲು ಯೋಗ್ಯ ವಾಗಿಲ್ಲ. ಈ ಕೆರೆಯನ್ನು ಅಭಿವೃದ್ಧಿಪಡಿಸಿ ವರ್ಷಪೂರ್ತಿ ನೀರು ತುಂಬಿರುವಂತೆ ಮಾಡಿದರೆ ಅದನ್ನು ಶುದ್ಧೀಕರಿಸಿ ಗ್ರಾಮದ ಎಲ್ಲ 270ಕ್ಕೂ ಹೆಚ್ಚಿನ ಮನೆಗಳಿಗೆ ನಳ್ಳಿ ಮೂಲಕ ಪೂರೈಸಬಹುದು. ಈ ಕೆರೆಯಲ್ಲಿ ನೀರು ತುಂಬಿದ್ದರೆ ಆಸುಪಾಸಿನ 30ಕ್ಕೂ ಹೆಚ್ಚಿನ ಮನೆಗಳ ಬಾವಿಗಳ ಅಂತರ್ಜಲ ಮಟ್ಟವೂ ಉತ್ತಮವಾಗಿರಲಿದೆ.

ಏನೆಲ್ಲ ಆಗಬೇಕು?
ಈ ಕೆರೆಯ ಹೂಳೆತ್ತದೇ 40 ವರ್ಷಗಳಿಗೂ ಹೆಚ್ಚು ಕಾಲ ಆಗಿರಬಹುದು. ಕೆರೆ ಅಭಿವೃದ್ಧಿ ಯೋಜನೆಯಡಿ ಹೂಳೆತ್ತಿದರೆ ಸಮೃದ್ಧ ನೀರು ಸಂಗ್ರಹಗೊಳ್ಳಬಹುದು. ಸುತ್ತಲೂ ಸುಂದರ ದಂಡೆ ನಿರ್ಮಿಸಿದರೆ ಉತ್ತಮ.

ಹತ್ತಕ್ಕೂ ಹೆಚ್ಚು ಕೆರೆಗಳು
ನಾಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಹತ್ತಕ್ಕೂ ಮಿಕ್ಕಿ ಸರಕಾರಿ ಕೆರೆಗಳಿವೆ. ಅವುಗಳನ್ನು ಗುರುತಿಸಿ, ಹೂಳೆತ್ತಿ, ಅಭಿವೃದ್ಧಿಪಡಿಸಿದ್ದರೆ ಈಗ ನೀರಿನ ಸಮಸ್ಯೆಯೆ ಉದ್ಭವವೇ ಆಗುತ್ತಿರಲಿಲ್ಲ. ಈ ಗೋರ್ಕಲ್ಲುಮನೆ ಕೆರೆ ಇರುವ 1 ಕಿ.ಮೀ. ವ್ಯಾಪ್ತಿಯಲ್ಲಿಯೇ ಕೆಂಪು ಹೊಳೆ ಕೆರೆ, ಬಂಡಾÕಲೆ ಕೆರೆ, ಗುಂಡಿಕೆರೆ ಸೇರಿದಂತೆ 4 ಕೆರೆಗಳಿವೆ. ಇನ್ನು ನಾಡ ಪಂಚಾಯತ್‌ ವ್ಯಾಪ್ತಿಯಲ್ಲಿ ಅಂಗಡಿಹಿತ್ಲು ಕೆರೆ, ಹೆಮ್ಮುಂಜೆ ಮದಗ, ಹೆಬ್ಟಾರ್‌ಕೆರೆ, ಚುಂಗಿಗುಡ್ಡೆ ಕೆರೆ, ಬಡಿನಮಕ್ಕಿ ಮದಗ, ಅಂಗಡಿಬೆಟ್ಟು ಕೆರೆ, ಶೇಡಿಗುಂಡಿ ಮದಗ, ಜೋಯಿಸರಬೆಟ್ಟು ಮದಗ, ಶೇಡುRಳಿ ಮದಗ, ಪಾತನಮಕ್ಕಿ ಮದಗಗಳ ಪುನಶ್ಚೇತನ ಆಗಬೇಕಿದೆ.

ನೀರಿನ ಸಮಸ್ಯೆಗೆ ಮುಕ್ತಿ
ಗೋರ್ಕಲ್ಲುಮನೆ ಕೆರೆ ಅಭಿವೃದ್ಧಿಯಾದರೆ ಈ ಭಾಗದ ನೀರಿನ ಸಮಸ್ಯೆ ಬಹುತೇಕ ನೀಗಲಿದೆ. ಅನೇಕ ಬಾರಿ ಈ ಕೆರೆಯ ಅಭಿವೃದ್ಧಿಗಾಗಿ ಸಂಬಂಧಪಟ್ಟ ಎಲ್ಲರನ್ನೂ ಆಗ್ರಹಿಸಿದ್ದೇವೆ. ಆದರೆ ಅಭಿವೃದ್ಧಿಗೆ ಯಾವುದೇ ಯೋಜನೆ ರೂಪಿಸಿಲ್ಲ. ಈಗಲಾದರೂ ಪುನಶ್ಚೇತನಗೊಳಿಸಿದರೆ ಕೃಷಿಗೆ, ಕುಡಿಯುವ ನೀರಿಗೂ ಪ್ರಯೋಜನವಾಗಲಿದೆ.
– ಶೀಲಾವತಿ ಪಡುಕೋಣೆ,
ಸ್ಥಳೀಯರು

ಅಭಿವೃದ್ಧಿಗೆ ಪ್ರಯತ್ನ
ಗೋರ್ಕಲ್ಲುಮನೆ ಕೆರೆ ನಮ್ಮ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವುದಿಲ್ಲ. ಸ್ಥಳೀಯ ಪಂಚಾಯತ್‌ನಿಂದ ಪ್ರಸ್ತಾವನೆ ಸಲ್ಲಿಸಿದರೆ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು.
– ಅರುಣ್‌ ಭಂಡಾರಿ,
ಎಇಇ,ಸಣ್ಣ ನೀರಾವರಿ ಇಲಾಖೆ ಉಡುಪಿ

- ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Vandseಬೆಳ್ಳಾಲ ದುರಂತ: ಮಕ್ಕಳಿಬ್ಬರ ಅಂತ್ಯಸಂಸ್ಕಾರ: ತಾಯಿ ಚೇತರಿಕೆ,ಆಸ್ಪತ್ರೆಯಿಂದ ಬಿಡುಗಡೆ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Udupi ಆಟೋ ರಿಕ್ಷಾ ಢಿಕ್ಕಿ: ಕಾರು ಜಖಂ

Manipal ಗಸ್ತು ನಿರತ ಪೊಲೀಸ್‌ ಸಿಬಂದಿಗೆ ಸ್ಕೂಟರ್‌ ಢಿಕ್ಕಿ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.