Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್ ನೀರು
ನೀರಿನ ಸಮಸ್ಯೆ ದೂರವಾಗುವ ನಿರೀಕ್ಷೆ
Team Udayavani, May 21, 2024, 12:38 AM IST
ಮಂಗಳೂರು: ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಏರಿಕೆ ಹಿನ್ನೆಲೆ ಯಲ್ಲಿ ಬಂಟ್ವಾಳದ ಶಂಭೂರಿ ನಲ್ಲಿರುವ ಎಎಂಆರ್ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಮಂಗಳೂರಿಗೆ ನೀರುಣಿಸುವ ತುಂಬೆ ಡ್ಯಾಂಗೆ ಸೋಮವಾರ ಹರಿಸಲಾಗಿದೆ.
ನೇತ್ರಾವತಿ ನದಿ ಪಾತ್ರದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿರುವುದರಿಂದ ನದಿಗೆ ನೀರಿನ ಹರಿವು ಆರಂಭವಾಗಿದೆ. ತುಂಬೆ ಅಣೆಕಟ್ಟೆಗಿಂತ ಹಿಂದೆ ಇರುವ ಎಎಂಆರ್ ಅಣೆಕಟ್ಟು ಪ್ರಸ್ತುತ ಬಹುತೇಕ ಭರ್ತಿಯಾಗಿರುವುದರಿಂದ ಅಲ್ಲಿಂದ ನೀರನ್ನು ಹೊರಬಿಡಲಾಗುತ್ತಿದೆ. ಈ ನೀರು ತುಂಬೆಗೆ ಸೇರುವುದರಿಂದ ಇಲ್ಲಿನ ನೀರಿನ ಮಟ್ಟವೂ ಏರಲಿರುವುದರಿಂದ ಮಂಗಳೂರಿನ ನೀರಿನ ಸಮಸ್ಯೆ ದೂರವಾಗುವ ನಿರೀಕ್ಷೆ ಇದೆ.
ತುಂಬೆ ಅಣೆಕಟ್ಟಿನಲ್ಲಿ (6 ಮೀ. ಎತ್ತರ)
ಸೋಮವಾರ 3.42 ಮೀ. ಮಾತ್ರ ನೀರು
ಲಭ್ಯವಿದ್ದು ಮುಂದಿನ 10 ದಿನಗಳಿಗೆ ಮಾತ್ರ ಮಂಗಳೂರು ನಗರಕ್ಕೆ ಲಭ್ಯವಾ ಗುತ್ತಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿಗೆ ಕಳೆದ ಕೆಲವು ದಿನಗಳಿಂದ ರೇಶನಿಂಗ್ ಮೂಲಕ ನೀರು ಸರಬರಾಜು ಮಾಡಲಾ ಗುತ್ತಿದೆ. ಬೆಳ್ತಂಗಡಿ, ಸುಬ್ರಹ್ಮಣ್ಯ ಪರಿಸರ ದಲ್ಲಿ ಕೆಲವು ದಿನಗಳಿಂದ ಉತ್ತಮ ಮಳೆ ಯಾಗಿರುವ ಕಾರಣ ನೀರಿನ ಹರಿವು ಆರಂಭಗೊಂಡಿದೆ. ಸೋಮವಾರ ಕೂಡ ನದಿ ಪಾತ್ರದ ಬೆಳ್ತಂಗಡಿ, ಪುತ್ತೂರು, ಸುಬ್ರಹ್ಮಣ್ಯ ಪರಿಸರದ ಹೆಚ್ಚಿನ ಕಡೆ ಉತ್ತಮ ಮಳೆಯಾಗಿದೆ. ಇದರಿಂದ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಮಂಗಳೂರಿನ ನೀರಿನ ಸಮಸ್ಯೆಯೂ ದೂರವಾಗುವ ಆಶಾವಾದ ಹೊಂದಲಾಗಿದೆ.
ಎಎಂಆರ್ಆರ್ ಕೋರಿಕೆ
ಮೇ 20ರ ಲೆಕ್ಕಾಚಾರ ಪ್ರಕಾರ ಎಎಂಆರ್ ಡ್ಯಾಂನ ನೀರಿನ ಮಟ್ಟ 18.60 ಮೀ. ಇದೆ. ಗರಿಷ್ಠ ಮಟ್ಟ 18.90 ಮೀ. ದಾಟಿದಲ್ಲಿ ಬ್ಯಾರೇಜ್ನ ವಿನ್ಯಾಸ ಹಾಗೂ ಸುರಕ್ಷತೆ ದೃಷ್ಟಿಯಿಂದ ಉಕ್ಕೇರುವ ಸಾಧ್ಯತೆ ಇದೆ. ಜತೆಗೆ ಪ್ರಸ್ತುತ ನೀರಿನ ಮಟ್ಟವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸುರಕ್ಷೆ ದೃಷ್ಟಿಯಿಂದ ಡ್ಯಾಂನಲ್ಲಿ ಲಭ್ಯವಿರುವ ನೀರನ್ನು ನದಿಯ ಕೆಳಭಾಗಕ್ಕೆ ಬಿಡುಗಡೆ ಮಾಡುವುದು ಸೂಕ್ತ. ಹೀಗಾಗಿ ಟರ್ಬೈನ್ಗಳನ್ನು ಪ್ರಾರಂಭಿಸಲು ಅಥವಾ 18.9 ಮೀ.ಗಿಂತ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಅನುಮತಿ ನೀಡುವಂತೆ ಶುಕ್ರವಾರ ಎಎಂಆರ್ ಪವರ್ ಪ್ರೈ.ಲಿ.ನಿಂದ ಜಿಲ್ಲಾಡಳಿತಕ್ಕೆ ಕೋರಿಕೆ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.