![Amit Shah](https://www.udayavani.com/wp-content/uploads/2024/07/Amit-Shah-1-415x243.jpg)
5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ
ಹಿಂದಿನ ಪರೀಕ್ಷೆ ಆಧಾರದಲ್ಲಿ ಫಲಿತಾಂಶ ಪ್ರಕಟಿಸಿ: ಸೂಚನೆ
Team Udayavani, May 21, 2024, 12:49 AM IST
![5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ](https://www.udayavani.com/wp-content/uploads/2024/05/E-620x349.jpg)
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಫಲಿತಾಂಶ ಪ್ರಕಟನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ ಆ ತರಗತಿಗಳ ಹಿಂದಿನಪರೀಕ್ಷೆಗಳ ಆಧಾರದಲ್ಲಿ ಫಲಿತಾಂಶ ಪ್ರಕಟಿಸುವಂತೆ ಶಾಲಾ ಶಿಕ್ಷಣ ಇಲಾಖೆ ಎಲ್ಲ ಶಾಲೆಗಳಿಗೆ ಸೂಚಿಸಿದೆ.
ರೂಪಣಾತ್ಮಕ ಮೌಲ್ಯಾಂಕನ (ಎಫ್ಎ)-1, 2, 3, 4 ಮತ್ತು ಸಂಕಲನಾತ್ಮಕ ಮೌಲ್ಯಮಾಪನ (ಎಸ್ಎ)- 1ರ ಮೌಲ್ಯಾಂಕನವನ್ನು ಆಧರಿಸಿ ಫಲಿತಾಂಶ ಪ್ರಕಟಿಸಲು ಸೂಚಿಸಲಾಗಿದೆ.
2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ ಫಲಿತಾಂಶವನ್ನು ಎ. 8ರಂದು ಶಾಲೆಗಳಲ್ಲಿ ಪ್ರಕಟಿಸುವಂತೆ ಸೂಚಿಸಲಾಗಿತ್ತು. ಆದರೆ ಫಲಿತಾಂಶ ಪ್ರಕಟಿಸದಂತೆ ಸರ್ವೋಚ್ಚ ನ್ಯಾಯಾಲಯವು ತಡೆ ಯಾಜ್ಞೆಯನ್ನು ನೀಡಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಮೇ 29ರಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಾರಂಭವಾಗು ತ್ತಿರುವ ಹಿನ್ನೆಲೆಯಲ್ಲಿ 5, 8ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡದಿದ್ದರೆ ಮಕ್ಕಳು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಸಾಧ್ಯವಾಗುವುದಿಲ್ಲ. ಹಾಗೆಯೇ ಶುಲ್ಕ ಪಾವತಿ, ವರ್ಗಾವಣೆ ಪ್ರಮಾಣಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರವನ್ನು ಪಡೆಯುವುದು ಮುಂತಾದ ಶೈಕ್ಷಣಿಕ ಕೆಲಸಗಳಿಗೆ ಅಡ್ಡಿಯಾಗಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಶಾಲೆಗಳಲ್ಲಿ ನಡೆದಿರುವಎಫ್ಎ-1, 2, 3, 4 ಮತ್ತು ಎಸ್ಎ-1ರ ಮೌಲ್ಯಾಂಕನದ ಆಧಾರದಲ್ಲಿ ಮಕ್ಕಳ ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರಿಸಲು ಅವಕಾಶ ಕಲ್ಪಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.
ಟಾಪ್ ನ್ಯೂಸ್
![Amit Shah](https://www.udayavani.com/wp-content/uploads/2024/07/Amit-Shah-1-415x243.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM Siddu](https://www.udayavani.com/wp-content/uploads/2024/07/CM-Siddu-150x97.jpg)
Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ
![rape](https://www.udayavani.com/wp-content/uploads/2024/07/rape-150x100.jpg)
Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ
![1-csaddasd](https://www.udayavani.com/wp-content/uploads/2024/07/1-csaddasd-150x85.jpg)
Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್
![Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ](https://www.udayavani.com/wp-content/uploads/2024/07/thimmappa-150x100.jpg)
Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ
![15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ](https://www.udayavani.com/wp-content/uploads/2024/07/bhimanna-naik-150x78.jpg)
15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.