Arrest: ಬಾರ್ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ
Team Udayavani, May 21, 2024, 9:47 AM IST
ಬೆಂಗಳೂರು: ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ಮಾರಕಾಸ್ತ್ರ ತೋರಿಸಿ ಗ್ರಾಹಕರನ್ನು ಬೆದರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಡಿ.ಜೆ.ಹಳ್ಳಿ ದುಬೈ ಲೇಔಟ್ ನಿವಾಸಿ ಸೈಯದ್ ಸುಹೇಬ್(24) ಮತ್ತು ಡಿ.ಜೆ.ಹಳ್ಳಿ ಸಕ್ಕರೆ ಮಂಡಿ ನಿವಾಸಿ ಸೈಯದ್ ಮುಬಾರಕ್ (23) ಬಂಧಿತರು.
ಆರೋಪಿಗಳಿಂದ ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ. ಆರೋಪಿಗಳು ಮೇ 12ರಂದು ಹೆಣ್ಣೂರು ಠಾಣಾ ವ್ಯಾಪ್ತಿಯ ಬಾಲಾಜಿ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಕೊಂಡು ಗ್ರಾಹಕರಲ್ಲಿ ಭಯ ಉಂಟು ಮಾಡುತ್ತಿದ್ದರು.
ಈ ಬಗ್ಗೆ ಹೆಣ್ಣೂರು ಪೊಲೀಸ್ ಠಾಣೆಯ ಹೊಯ್ಸಳ ಗಸ್ತು ವಾಹ ನದ ಸಿಬ್ಬಂದಿಗೆ ಮಾಹಿತಿ ಬಂದಿದೆ. ಈ ದೂರಿನ ಮೇರೆಗೆ ತಕ್ಷಣ ಹೊಯ್ಸಳ ಸಿಬ್ಬಂದಿ ಬಾರ್ಗೆ ತೆರಳಿ ಇಬ್ಬರು ಆರೋಪಿ ಗಳನ್ನು ಮಾರಕಾಸ್ತ್ರ ಸಹಿತ ವಶಕ್ಕೆ ಪಡೆದಿದ್ದಾರೆ. ಆರೋಪಿ ಸೈಯದ್ ಸುಹೇಬ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರೆ, ಮತ್ತೂಬ್ಬ ಆರೋಪಿ ಸೈಯದ್ ಮುಬಾರಕ್ ಕಾರು ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ. ಇಬ್ಬರ ವಿರುದ್ಧ ಈ ಹಿಂದೆ ಯಾವುದೇ ಅಪರಾಧ ಪ್ರಕರಣಗಳು ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದರು.
ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.