![1-qe](https://www.udayavani.com/wp-content/uploads/2024/07/1-qe-415x241.jpg)
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Team Udayavani, May 21, 2024, 1:12 PM IST
![ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!](https://www.udayavani.com/wp-content/uploads/2024/05/6-16-620x372.jpg)
ನವದೆಹಲಿ: ಕಾರು ಅಪಘಾತಗೊಂಡು ತೀವ್ರ ಸ್ವರೂಪದ ಗಾಯಗಳಾಗಿದ್ದರೂ ಜೊತೆಯಾಗಿ ಕೂತು ಸೆಲ್ಫಿಗೆ ಪೋಸ್ ಕೊಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ.
ಶನಿವಾರ(ಮೇ.18 ರಂದು)ಮೆಕ್ಸಿಕನ್ ನಗರದ ಕ್ಯುರ್ನಾವಾಕಾದ ರಸ್ತೆಯಲ್ಲಿ ಐವರು ಯುವತಿಯರು ಕಾರಿನಲ್ಲಿ ಹೋಗುತ್ತಿರಬೇಕಾದರೆ ಲೋಮಾಸ್ ಡೆಲ್ ಮಿರಾಡೋರ್ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಇಬ್ಬರು ಯುವತಿಯರು ಕಾರಿನಿಂದ ಹೊರಬಿದ್ದು ತೀವ್ರತರದ ಗಾಯಗಳಾಗಿದೆ. ಪಾದಚಾರಿ ಮಾರ್ಗದಲ್ಲಿ ಇಬ್ಬರು ಯುವತಿಯರು ಬಿದ್ದಿದ್ದು, ಇತರೆ ಮೂವರು ಕಾರಿನಲ್ಲಿ ಸಿಲುಕಿಕೊಂಡಿದ್ದಾರೆ.
ಆದರೆ ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವತಿಯರು ಗಾಯಗೊಂಡಿದ್ದರೂ ಅಪಘಾತವಾದ ಕಾರಿನ ಮುಂದೆ ಕುಳಿತು ಸೆಲ್ಫಿಗಾಗಿ ಪೋಸ್ ನೀಡಿದ್ದಾರೆ. ಆಂಬ್ಯುಲೆನ್ಸ್ ಬರುವವರೆಗೆ ಇಬ್ಬರು ಸೆಲ್ಫಿಗೆ ಪೋಸ್ ನೀಡಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ತಿಳಿಸಿದೆ.
ಕಾರಿನಲ್ಲಿದ್ದವರು ಮದ್ಯದ ಅಮಲಿನಲ್ಲಿದ್ದರು ಎಂದು ಶಂಕಿಸಲಾಗಿದೆ. ಸೆಲ್ಫಿಗೆ ಪೋಸ್ ಕೊಡುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಗಾಯಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಸದ್ಯ ಮೆಕ್ಸಿಕನ್ ಅಧಿಕಾರಿಗಳು ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಇತ್ತ ಇಂಟರ್ ನೆಟ್ ನಲ್ಲಿ ಸೆಲ್ಫಿಗೆ ಪೋಸ್ ಕೊಟ್ಟಿರುವ ಫೋಟೋ ವೈರಲ್ ಆಗಿದ್ದು, ಅನೇಕರು ಇಬ್ಬರು ಯುವತಿಯರ ವರ್ತನೆ ಕಂಡು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
![1-qe](https://www.udayavani.com/wp-content/uploads/2024/07/1-qe-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-qe](https://www.udayavani.com/wp-content/uploads/2024/07/1-qe-150x87.jpg)
Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
![Barbados](https://www.udayavani.com/wp-content/uploads/2024/07/huricanbe-150x83.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
![Court-Symbol](https://www.udayavani.com/wp-content/uploads/2024/07/Court-Symbol-1-150x90.jpg)
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
![Agriculture-Tracator](https://www.udayavani.com/wp-content/uploads/2024/07/Agriculture-Tracator-150x90.jpg)
Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.