Sagara; ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ
Team Udayavani, May 21, 2024, 4:16 PM IST
ಸಾಗರ: ಶರಾವತಿ ಹಿನ್ನೀರು ಬತ್ತಿರುವ ಹಿನ್ನೆಲೆಯಲ್ಲಿ ಹಸಿರುಮಕ್ಕಿ ಲಾಂಚನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಮಳೆ ಕೊರತೆ ಮತ್ತು ವಿಪರೀತ ಬಿಸಿಲಿನ ಝಳದಿಂದಾಗಿ ಶರಾವತಿ ಹಿನ್ನೀರು ಬತ್ತಿ ಹೋಗಿದೆ. ನೀರಿನ ಆಳದಲ್ಲಿರುವ ಮರದ ದಿಮ್ಮಿಗಳು, ಕಲ್ಲುಬಂಡೆಗಳು ನೀರು ಇಳಿದಿರುವ ಹಿನ್ನೆಲೆಯಲ್ಲಿ ಲಾಂಚ್ಗೆ ತಾಗಿ ಹಾನಿ ಉಂಟಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಲಾಂಚ್ ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಸಾಗರದಿಂದ ಹಸಿರುಮಕ್ಕಿ ಮೂಲಕ ಕೊಲ್ಲೂರು, ಕುಂದಾಪುರ, ಉಡುಪಿ, ಮಂಗಳೂರು ಕಡೆ ಪ್ರಯಾಣ ಬೆಳೆಸುವವರು ಈ ಅಂಶವನ್ನು ಗಮನಿಸಬೇಕಾಗಿದೆ.
ಕಳೆದ ಒಂದು ವಾರದಿಂದ ಹಸಿರುಮಕ್ಕಿ ಲಾಂಚ್ನಲ್ಲಿ ಜನರ ಜೊತೆಗೆ ಲಘು ವಾಹನ, ದ್ವಿಚಕ್ರ ವಾಹನವನ್ನು ಸಾಗಿಸಲಾಗುತ್ತಿತ್ತು. ಈಗ ಲಾಂಚ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದ್ದು, ಮಳೆ ಬಂದು ನೀರಿನ ಮಟ್ಟ ಹೆಚ್ಚಳವಾಗುವವರೆಗೂ ಹಸಿರುಮಕ್ಕಿ ಲಾಂಚ್ ಸೇವೆ ಇರುವುದಿಲ್ಲ ಎಂದು ಆಂತರಿಕ ಜಲಾನಯನ ನಿಗಮ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.