Kanhaiya Kumar ಕ್ಯಾಂಪೇನ್ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!
ನಿರ್ದೇಶಕ ವಿಶಾಲ್ ಭಾರದ್ವಾಜ್ರಿಂದಲೂ ನೆರವು
Team Udayavani, May 22, 2024, 5:36 AM IST
ನವದೆಹಲಿ: ದೆಹಲಿ ಈಶಾನ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯ ಕುಮಾರ್ ಅವರಿಗೆ ಚುನಾವಣೆ ಪ್ರಚಾರಕ್ಕೆಂದು 47.04 ಲಕ್ಷ ರೂ.ಗಳು ಸಾರ್ವಜನಿಕ ದೇಣಿಗೆ ಮೂಲಕ ಸಂಗ್ರಹವಾಗಿದೆ.
ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಲು ಆರ್ಥಿಕ ಸಂಪನ್ಮೂಲಗಳ ಕೊರತೆ ಎದುರಿಸುತ್ತಿದ್ದಾಗ, ಕನ್ಹಯ್ಯ ಸಾರ್ವಜನಿಕ ದೇಣಿಗೆ ಅಭಿಯಾನ ಆರಂಭಿಸಿದರು. ಜನರ ಸಮಸ್ಯೆಗೆ ಜನರ ಸಹಕಾರದಿಂದಲೇ ಹೋರಾಡುವ ಉದ್ದೇಶ ತಮ್ಮದು ಎಂದಿದ್ದರು.
ಅದರಂತೆ, ಈವರೆಗೆ 2,037 ಜನ 100ರಿಂದ 5 ಲಕ್ಷ ರೂ. ವರೆಗೆ ದೇಣಿಗೆ ನೀಡಿದ್ದಾರೆ. ಖ್ಯಾತ ಹಾಸ್ಯಗಾರ ಕುನಾಲ್ ಕಾಮ್ರಾ, ನಿರ್ದೇಶಕ ವಿಶಾಲ್ ಭಾರದ್ವಾಜ್, ಜೆಎನ್ಯು ಹಾಲಿ, ಮಾಜಿ ಪ್ರಾಧ್ಯಾಪಕರು ಹಾಗೂ ಸಾಮಾನ್ಯ ಜನರು ಸಹ ದೇಣಿಗೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮಾಧ್ಯಮ ವಕ್ತಾರ ಅಂಶುಲ್ ತ್ರಿವೇದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.