![basavaraj rayareddy](https://www.udayavani.com/wp-content/uploads/2024/07/rayareddy-415x229.jpg)
Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ
ದಿನ ಹಿಂದೂ-ಮುಸ್ಲಿಂ ಎನ್ನುವ ಅವರು ಸಾರ್ವಜನಿಕ ಬದುಕಿಗೆ ವಿದಾಯ ಹೇಳಲಿ
Team Udayavani, May 22, 2024, 6:14 AM IST
![Hateful PM Modi should quit politics: Kharge](https://www.udayavani.com/wp-content/uploads/2024/05/khrage-620x342.jpg)
ಹೊಸದಿಲ್ಲಿ: ಚುನಾವಣೆ ಪ್ರಚಾರದಲ್ಲಿ ಹಿಂದೂ-ಮುಸ್ಲಿಂ ಬಗ್ಗೆ ಮಾತನಾಡುತ್ತಾ ದ್ವೇಷ ಭಾಷಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಜೀವನವನ್ನು ತ್ಯಜಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಖರ್ಗೆ, “”ಒಂದೆಡೆ ಹಿಂದೂ-ಮುಸ್ಲಿಂ ರಾಜಕೀಯ ಮಾಡಿದರೆ ಸಾರ್ವಜನಿಕ ಜೀವನ ಹಾಗೂ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಲು ತಮಗೆ ಹಕ್ಕಿಲ್ಲ ಎನ್ನುವ ಮೋದಿ, ಮತ್ತೂಂದೆಡೆ ಪ್ರತಿ ದಿನ ಅದೇ ರಾಜಕಾರಣ ಮಾಡುತ್ತಿದ್ದಾರೆ. ಹಾಗಾಗಿ, ಅವರು ರಾಜಕೀಯ ಬದುಕಿಗೆ ವಿದಾಯ ಹೇಳುವ ಮೂಲಕ ನುಡಿದಂತೆ ನಡೆಯಬೇಕು” ಎಂದು ಹೇಳಿದ್ದಾರೆ.
ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಒಟ್ಟಿಗೆ ಕರೆದೊಯ್ಯುವ ಮಾತನಾಡುವ ಬದಲು ಮತಗಳಿಗಾಗಿ ಅವರು ವಿಭಜನಕಾರಿಯಾಗಿ ಮಾತನಾಡುತ್ತಾರೆ. ದ್ವೇಷ ಭಾಷಣ ಮಾಡುತ್ತಿದ್ದಾರೆ. ಸಂವಿಧಾನ ಅಥವಾ ಮುಸ್ಲಿಮರ ವಿರುದ್ಧ ಮಾತನಾಡಿದವರನ್ನು ಮೋದಿ ಎಂದಾದರೂ ಖಂಡಿಸಿದ್ದಾರೆಯೇ ಎಂದು ಖರ್ಗೆ ಪ್ರಶ್ನಿಸಿದರು.
ಯಾವುದೇ ಸಮಾಜಕ್ಕೆ ಆದ ಅನ್ಯಾಯವನ್ನು ತಡೆಯುವುದು ತುಷ್ಟೀಕರಣ ಎನಿಸಿಕೊಳ್ಳುವುದಿಲ್ಲ. ಆದರೆ ಬಿಜೆಪಿಯವರು ಮತಕ್ಕಾಗಿ ಧ್ರುವೀಕರಣ ಮಾಡುತ್ತಿದ್ದಾರೆ. ನಾವು ಏನೇ ಮಾಡಿದರೂ ಅದನ್ನು ತುಷ್ಟೀಕರಣ ಎನ್ನುವಂತೆ ಪ್ರತಿಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಖರ್ಗೆ ಹೇಳಿದರು.
ಬಿಜೆಪಿಯನ್ನು ಇಂಡಿಯಾ ಕೂಟ ತಡೆಯಲಿದೆ: ನಮ್ಮ ಪರ ಬೆಂಬಲ ಗುಪ್ತಗಾಮಿನಿಯಾಗಿದೆ. ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟವು ಬಿಜೆಪಿ ಬಹುಮತ ಪಡೆಯುವುದನ್ನು ತಡೆಯಲಿದೆ ಎಂದು ಹೇಳಿದರು.
ಮೋದಿ “ಸುಳ್ಳಿನ ಸರದಾರ’: ಖರ್ಗೆ
ಜಗಾಧರೀ: ಪ್ರಧಾನಿ ನರೇಂದ್ರ ಮೋದಿ “ಸುಳ್ಳಿನ ಸರದಾರ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಹರ್ಯಾಣದಲ್ಲಿ ಮೊದಲ ಬಾರಿಗೆ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾನು ಯಾರನ್ನೂ ಅವಹೇಳನ ಮಾಡುವುದಿಲ್ಲ. ನಾನು ಮೋದಿ ವಿರೋಧಿ ಅಲ್ಲ. ಆದರೆ, ಅವರ ಸಿದ್ಧಾಂತ ವಿರೋಧಿಸುತ್ತೇನೆ. ಕಾಂಗ್ರೆಸ್ ಆರ್ಎಸ್ಎಸ್ನ ವೈಚಾರಿಕತೆ ವಿರೋಧಿಸುತ್ತದೆ. ಮೋದಿ ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುತ್ತಿದ್ದಾರೆ, ನಾವು ಅದರ ವಿರುದ್ಧ ಹೋರಾಡುತ್ತಿದ್ದೇವೆ. ಜನರ ಹಾಗೂ ಮೋದಿ, ಬಿಜೆಪಿ ನಡುವೆ ಈಗಿನ ಹೋರಾಟ ನಡೆಯುತ್ತಿದೆ. ಬಿಜೆಪಿ ಆಡಳಿತಕ್ಕೆ ಜನ ರೋಸಿ ಹೋಗಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
![basavaraj rayareddy](https://www.udayavani.com/wp-content/uploads/2024/07/rayareddy-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು](https://www.udayavani.com/wp-content/uploads/2024/07/8-150x90.jpg)
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
![Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…](https://www.udayavani.com/wp-content/uploads/2024/07/crocodile-150x93.jpg)
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
![Commercial ಸಿಲಿಂಡರ್ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ](https://www.udayavani.com/wp-content/uploads/2024/07/cylinder-150x84.jpg)
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
![ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ](https://www.udayavani.com/wp-content/uploads/2024/07/mumbai-150x89.jpg)
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
![NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ](https://www.udayavani.com/wp-content/uploads/2024/07/NEET-1-150x87.jpg)
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
MUST WATCH
ಹೊಸ ಸೇರ್ಪಡೆ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-150x83.jpg)
Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್
![rohit sharma](https://www.udayavani.com/wp-content/uploads/2024/07/rohit-150x83.jpg)
Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-150x90.jpg)
Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…
![ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!](https://www.udayavani.com/wp-content/uploads/2024/07/10-150x90.jpg)
ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.