Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ
Team Udayavani, May 22, 2024, 12:15 AM IST
ಮಂಗಳೂರು/ಉಡುಪಿ/ ಕಾಸರ ಗೋಡು/ಮಡಿಕೇರಿ: ಪೂರ್ವ ಮುಂಗಾರು ಚುರುಕು ಪಡೆದುಕೊಂಡಿದ್ದು ಕರಾವಳಿ, ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಗುಡುಗು-ಸಿಡಿಲು ಸಹಿತ ಬಿರುಸಿನ ಮಳೆಯಾಗಿದೆ.
ದ.ಕ. ಜಿಲ್ಲೆಯ ವಿವಿಧೆಡೆೆ ಸೋಮ ವಾರ ತಡರಾತ್ರಿಯಿಂದಲೇ ಸುರಿದ ಮಳೆ ಮಂಗಳವಾರ ಬೆಳಗಿನ ಜಾವದ ವರೆಗೂ ಮುಂದುವರಿದಿತ್ತು. ಬಳಿಕ ತುಸು ಬಿಡುವು ನೀಡಿದ ಮಳೆ ಮಧ್ಯಾಹ್ನ ಬಳಿಕ ಸುರಿಯಲಾರಂಭಿಸಿದೆ. ಮಂಗಳೂರು, ಬೆಳ್ತಂಗಡಿ, ಧರ್ಮ ಸ್ಥಳ, ಗುರುವಾಯನಕೆರೆ, ಮಡಂತ್ಯಾರು, ಕಡಬ, ಬಾಯಾರು, ಮಂಜೇಶ್ವರ, ಉಳ್ಳಾಲ, ಸುರತ್ಕಲ್, ಬಂಟ್ವಾಳ, ಕನ್ಯಾನ, ಉಪ್ಪಿನಂಗಡಿ, ಸುಳ್ಯ, ಸುಬ್ರಹ್ಮಣ್ಯ ಸಹಿತ ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿದಿದೆ. ಉಡುಪಿ ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗಿದೆ.
ಗೋಡೆ ಕುಸಿದು ದನ, ಕರು ಸಾವು
ಪುತ್ತೂರು: ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಪಟ್ನೂರು ಗ್ರಾಮದ ನೆಲಪ್ಪಾಲು ನಿವಾಸಿ ವಸಂತ ಅವರ ಮನೆ ಸಮೀಪದಲ್ಲಿರುವ ದನದ ಹಟ್ಟಿಯ ಗೋಡೆ ಕುಸಿದು ದನ ಮತ್ತು ಕರು ಮೃತಪಟ್ಟಿವೆ. ಸ್ಥಳಕ್ಕೆ ತಹಶೀಲ್ದಾರ್ ಕುಂಞಿ ಅಹಮ್ಮದ್, ಉಪ್ಪಿನಂಗಡಿ ಕಂದಾಯ ನಿರೀಕ್ಷಕ ಚಂದ್ರು ಭೇಟಿ ನೀಡಿ ಪರಿಶೀಲಿಸಿದರು.
4 ದಿನ “ಎಲ್ಲೋ ಅಲರ್ಟ್’
ಕರಾವಳಿ ಭಾಗದಲ್ಲಿ ಮಳೆ ಇನ್ನಷ್ಟು ಬಿರುಸು ಪಡೆದುಕೊಂಡಿದ್ದು, ಮೇ 22ರಿಂದ 25ರ ವರೆಗೆ “ಎಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಈ ವೇಳೆ ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.