Arrested: ಕಾರಿನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬಂದು ಮೊಬೈಲ್ ಕದಿಯುತ್ತಿದ್ದ ಖದೀಮರ ಬಂಧನ
Team Udayavani, May 22, 2024, 11:08 AM IST
ಬೆಂಗಳೂರು: ಬಿಎಂಟಿಸಿ ಬಸ್ಗಳ ಪ್ರಯಾಣಿಕರನ್ನೇ ಟಾರ್ಗೆಟ್ ಮಾಡಿ ಕೊಂಡು ಮೊಬೈಲ್ ಸುಲಿಗೆ ಮಾಡು ತ್ತಿದ್ದ ಆಂಧ್ರಪ್ರದೇಶ ಮೂಲದ ಮೂವರು ಆರೋಪಿಗಳನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ನಾಗನೂರಿ ಕುಮಾರ್ (23), ಅನಂತಪುರ ಜಿಲ್ಲೆಯ ಪರಶುರಾಮ್ ಅಲಿಯಾಸ್ ಅಭಿ(21) ಮತ್ತು ಬಾಲಕ ನೊಬ್ಬನನ್ನು ಬಂಧಿಸಲಾಗಿದೆ. ಆರೋಪಿಗಳಿಂದ 22.40 ಲಕ್ಷ ರೂ. ಮೌಲ್ಯದ 176 ಮೊಬೈಲ್ಗಳು ಮತ್ತು 1 ಕಾರು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳು ಆಂಧ್ರಪ್ರದೇಶದಿಂದ ಕಾರಿನಲ್ಲಿ ನಗರದ ಹೊರವಲಯಕ್ಕೆ ಬರುತ್ತಿದ್ದರು. ಬಳಿಕ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಅವರ ಜೇಬಿನಲ್ಲಿದ್ದ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದರು. ಅದಕ್ಕಾಗಿ ಮೆಜೆಸ್ಟಿಕ್ ಹಾಗೂ ಹೆಚ್ಚು ಪ್ರಯಾಣಿಕರು ಇರುವ ಬಿಎಂಟಿಸಿ ಬಸ್ ಗಳು ಹಾಗೂ ನಿಲ್ದಾಣಗಳನ್ನು ಆಯ್ಕೆ ಮಾಡಿಕೊಂಡು ಕೃತ್ಯ ಎಸಗುತ್ತಿದ್ದರು ಎಂಬುದು ಗೊತ್ತಾಗಿದೆ.
ಇತ್ತೀಚೆಗೆ ಶಿವಮೊಗ್ಗದಿಂದ ರೈಲಿನಲ್ಲಿ ಮೆಜೆಸ್ಟಿಕ್ಗೆ ಬಂದು, ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಸುಲಿಗೆ ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರು ಕಳವು ಮಾಡಿದ ಮೊಬೈಲ್ ಗಳನ್ನು ಆಂಧ್ರಪ್ರದೇಶಕ್ಕೆ ಕೊಂಡೊಯ್ದು, ಫ್ಲ್ಯಾಶ್ ಮಾಡಿಸಿ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.