ಬಂಟ್ವಾಳ: ಪುಟಾಣಿಗಳ ಕೇಂದ್ರದ ಅಡಿಪಾಯಕ್ಕೇ ಅಪಾಯ


Team Udayavani, May 23, 2024, 10:10 AM IST

ಬಂಟ್ವಾಳ: ಪುಟಾಣಿಗಳ ಕೇಂದ್ರದ ಅಡಿಪಾಯಕ್ಕೇ ಅಪಾಯ

ಬಂಟ್ವಾಳ: ಪುಟಾಣಿ ಮಕ್ಕಳಿಗೆ ಶೈಕ್ಷಣಿಕ ತಳಪಾಯ ನೀಡುವ ಕೆಲವು ಅಂಗನವಾಡಿ ಕಟ್ಟಡಗಳ ತಳಪಾಯವೇ ಅಪಾಯದಲ್ಲಿವೆ. ಹೀಗಾಗಿ ಬಂಟ್ವಾಳದಲ್ಲಿ 7 ಅಂಗನವಾಡಿ ಕೇಂದ್ರಗಳನ್ನು ಪರ್ಯಾಯ ವ್ಯವಸ್ಥೆಗೆ ಸ್ಥಳಾಂತರಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. 7 ಅಂಗನವಾಡಿ ಕೇಂದ್ರಗಳ ಪಕ್ಕ ಇರುವ ಅಪಾಯಕಾರಿ ಮರಗಳನ್ನು ತೆರವು ಮಾಡುವಂತೆ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ತಾಲೂಕಿನಲ್ಲಿ ಅತೀ ಹೆಚ್ಚಿನ ಅಂಗನವಾಡಿ ಕೇಂದ್ರಗಳು ಕಾರ್ಯಾಚರಿಸುತ್ತಿರುವುದರಿಂದ ಬಂಟ್ವಾಳ ಹಾಗೂ ವಿಟ್ಲ ಯೋಜನೆಗಳೆಂದು ವಿಭಾಗಿಸಲಾಗಿದೆ. ಬಂಟ್ವಾಳ ಯೋಜನೆಯಲ್ಲಿ ಒಟ್ಟು 341 ಅಂಗನವಾಡಿ ಕೇಂದ್ರಗಳಿದ್ದು,
ಅದರಲ್ಲಿ 324 ಅಂಗನವಾಡಿಗಳು ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿವೆ.

ಬಂಟ್ವಾಳದಲ್ಲಿ ಬಹುತೇಕ ಅಂಗನವಾಡಿ ಕೇಂದ್ರಗಳಿಗೆ ನೂತನ ಕಟ್ಟಡ ನಿರ್ಮಾಣಗೊಂಡಿದ್ದು, ಇನ್ನೂ ಒಂದಷ್ಟು ಕೇಂದ್ರಗಳಿಗೆ ಕಟ್ಟಡದ ಬೇಡಿಕೆ ಇದೆ. ಜಾಗದ ಸಮಸ್ಯೆಯ ಕಾರಣಕ್ಕೆ ಕಟ್ಟಡ ನಿರ್ಮಾಣ ಸಾಧ್ಯವಾಗಿಲ್ಲ. ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸರಕಾರಿ ಜಾಗವೇ ಇಲ್ಲದಿರುವುದರಿಂದ ಕೆಲವೊಂದು ಕೇಂದ್ರ ಸಂಘ ಸಂಸ್ಥೆಗಳಲ್ಲಿ ಕಾರ್ಯಾಚರಿಸಬೇಕಾದ ಸ್ಥಿತಿ ಇದೆ.

7ಅಪಾಯಕಾರಿ ಕಟ್ಟಡಗಳು
1)ಅಡಿಪಾಯ, ಆವರಣ ಗೋಡೆ ಕುಸಿದ ನರಿಕೊಂಬು ಗ್ರಾಮದ ನೆಹರೂನಗರ ಕೇಂದ್ರವನ್ನು ನೆಹರೂ ನಗರ ಶಾಲೆಗೆ ಸ್ಥಳಾಂತರಿಸಲು ಅನುಮತಿ ಕೇಳಲಾಗಿದೆ.

2)ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೆಳಗಿನ ಪೇಟೆಯ ಅಂಗನವಾಡಿ ಕೇಂದ್ರವು ನೆರೆಬಂದಲ್ಲಿ ಮುಳುಗಡೆಯಾಗಲಿದೆ. ಕೆಳಗಿನಪೇಟೆ ಕಿ.ಪ್ರಾ. ಶಾಲೆಗೆ ಸ್ಥಳಾಂತರಿಸಲು ಕೋರಿಕೆ.

3)ಮೇಲ್ಛಾವಣಿಯ ಮರದ ಹಲಗೆಗಳು ಗೆದ್ದಲು ಹಿಡಿದಿರುವುದರಿಂದ ಸಂಗಬೆಟ್ಟು ಗ್ರಾಮದ ಮಂಚಕಲ್ಲು ಅಂಗನವಾಡಿ ಕೇಂದ್ರವನ್ನು ಮಂಚಕಲ್ಲು ಕಿ.ಪ್ರಾ.ಶಾಲೆಗೆ ವರ್ಗಾವಣೆ.

4)ಅಪಾಯಕಾರಿ ಸ್ಥಿತಿಯಲ್ಲಿರುವ ಆಲದಪದವು ಕೇಂದ್ರ ವನ್ನು ಶ್ರೀನಿವಾಸನಗರ ಕಿ.ಪ್ರಾ.ಶಾಲೆಗೆ ಸ್ಥಳಾಂತರ

5)ಬಡಗಕಜೆಕಾರು ಗ್ರಾಮದ ಬ್ಯಾರಿಪಲ್ಕೆ ಕೇಂದ್ರ ಹೇಮಾವತಿ ಕದಿಮೇಲು ಅವರ ಮನೆಗೆ ಪಲ್ಲಟ

6)ಬಡಗಬೆಳ್ಳೂರಿನ ಪಡೀಲುಬೈಲು ಕೇಂದ್ರ

7)ಕರಿಯಂಗಳ ಗ್ರಾಮದ ಕಲ್ಲಗುಡ್ಡೆ ಕೇಂದ್ರವನ್ನು ನೆರೆಯ ಮನೆಗೆ ಸ್ಥಳಾಂತರಿಸಲು ಅನುಮತಿ ಗಾಗಿ ಬೇಡಿಕೆ.

7 ಕಡೆ ಮರ ಬೀಳುವ ಸ್ಥಿತಿಯ ಕೇಂದ್ರಗಳು
ಬಂಟ್ವಾಳ ವ್ಯಾಪ್ತಿಯಲ್ಲಿ ಒಟ್ಟು 7 ಅಂಗನವಾಡಿ ಕೇಂದ್ರಗಳಿಗೆ ಮರಗಳು ಬೀಳುವ ಅಪಾಯವಿದೆ.

1)ಕಾವಳಮೂಡೂರು ಗ್ರಾಮದ ಕಾರಿಂಜಬೈಲು ಅಂಗನವಾಡಿ ಕೇಂದ್ರ ಬಳಿ 4 ಮರಗಳು ಅಪಾಯಕಾರಿಯಾಗಿವೆ.

2)ನೆಲ್ಲಿಗುಡ್ಡೆ ಕೇಂದ್ರದ ಬಳಿ 2 ಮರಗಳು ಅಪಾಯಕಾರಿ ಮರಗಳಿವೆ.

3)ಬಂಟ್ವಾಳ ಪುರಸಭಾ ವ್ಯಾಪ್ತಿಯ ಹೊಸ್ಮಾರು

4)ನರಿಕೊಂಬು ಗ್ರಾಮದ ನಿನ್ನಿಪಡ್ಪು ಕೇಂದ್ರ

5)ಮುಗ್ಧಾಲ್‌ ಗುಡ್ಡೆ,

6)ದೇವಶ್ಯಮೂಡೂರು ಗ್ರಾಮದ ಕುಂಟಾಲಪಲ್ಕೆ

7)ಕರಿಯಂಗಳ ಗ್ರಾಮದ ಪುಂಚಮೆ ಕೇಂದ್ರ

ಅನುಮತಿ ಬಳಿಕ ಸ್ಥಳಾಂತರ
ಸುಮಾರು 7 ಕೇಂದ್ರಗಳನ್ನು ಸರಕಾರಿ ಶಾಲೆ ಹಾಗೂ ಇತರ ವ್ಯವಸ್ಥೆಗಳಿಗೆ ಸ್ಥಳಾಂತರಿಸಲು ಈಗಾಗಲೇ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗಿದ್ದು, ಅನುಮತಿಯ ಬಳಿಕ ಸ್ಥಳಾಂತರ ನಡೆಯಲಿದೆ.
*ಉಸ್ಮಾನ್‌, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ದ.ಕ.ಜಿಲ್ಲೆ

ಒಪ್ಪಿಗೆ ಪಡೆದು ಮರ ತೆರವು
ಅಪಾಯಕಾರಿ ಮರಗಳ ತೆರವಿಗೆ ಸಂಬಂಧಿಸಿ ತಹಶೀಲ್ದಾರ್‌ ಅವರಿಂದ ಪತ್ರ ಬಂದಿದ್ದು,
ಅದನ್ನು ಡಿಎಫ್‌ಒ ಅವರಿಗೆ ಕಳುಹಿಸಿ ಅನುಮತಿ ಪಡೆದ ಬಳಿಕ ತೆರವು ಕಾರ್ಯ ನಡೆಸುತ್ತೇವೆ. ಕೆಲವು ಮರಗಳ ರೆಂಬೆ ಕಡಿದರೂ ಸಾಲುತ್ತಿದೆ.

ಪ್ರಫುಲ್‌ ಶೆಟ್ಟಿ ಪಿ.,ವಲಯ ಅರಣ್ಯಾಧಿಕಾರಿ, ಬಂಟ್ವಾಳ

*ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.