Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ


Team Udayavani, May 24, 2024, 7:20 AM IST

Pen drive case: ತಾರಕಕ್ಕೇರಿದ ಕಾಂಗ್ರೆಸ್‌-ಜೆಡಿಎಸ್‌ ಗುದ್ದಾಟ

ಬೆಂಗಳೂರು: ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವಿನ ಗುದ್ದಾಟ ತಾರಕಕ್ಕೇರಿದ್ದು, ಎರಡೂ ಪಕ್ಷಗಳು ಈಗ ಸಾಮಾಜಿಕ ಜಾಲತಾಣ  “ಎಕ್ಸ್‌’ನಲ್ಲಿ ಪೋಸ್ಟ್‌ ವಾರ್‌ ನಡೆಸಿವೆ. ಒಂದೆಡೆ  “ಸಿ.ಡಿ. ಶಿವು ಎಲ್ಲಿದ್ದೀಯಪ್ಪ’ ಅಂತ ಜೆಡಿಎಸ್‌ ಜಾಲತಾಣದಲ್ಲಿ ಟ್ರೋಲ್‌ ಆರಂಭಿಸಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್‌ “ಉತ್ತರಿಸು ಪೆನ್‌ಡ್ರೈವ್‌ ಸ್ವಾಮಿ’ ಎಂದು ಕೇಳಲು ಆರಂಭಿಸಿದೆ.

“ಪ್ರಜ್ವಲ್‌ ಎಲ್ಲಿರಬಹುದು ಎನ್ನುವ ವಿಷಯ ನಿಮ್ಮ ಸಿ.ಡಿ. ಶಿವುಗೆ ಚೆನ್ನಾಗಿಯೇ ಗೊತ್ತಿದೆ. ಅವರನ್ನೇ ಕೇಳಿದರೆ ಉತ್ತಮವಲ್ಲವೇ? ಸಖ್ಯ ಮತ್ತು ಸೌಖ್ಯದ ಬಗ್ಗೆ ಅವರಿಗಿಂತ ಬಲ್ಲವರು ಉಂಟೇ’ ಎಂದು ಕೇಳುವ ಮೂಲಕ ಈ  “ಟ್ವೀಟ್‌ ವಾರ್‌’ಗೆ ಗುರುವಾರ ಮಾಜಿ ಸಿಎಂ ಕುಮಾರಸ್ವಾಮಿ ಮುನ್ನುಡಿ ಬರೆದರು. ಇದು ಅಪ್‌ಲೋಡ್‌ ಆದ ಕೆಲವೇ ಹೊತ್ತಿನಲ್ಲಿ ಕಾಂಗ್ರೆಸ್‌, “ಗೆಜ್ಜೆ ಶಬ್ದ ಕಂಡರೆ ಕಳ್ಳ ಹೆಜ್ಜೆ ಇಡುವ ಮಾನಗೇಡಿಗಳು ತಾವು. ತಮ್ಮ ಕುಟುಂಬದ ಸದಸ್ಯನೊಬ್ಬ ಎಲ್ಲಿ ಅಡಗಿದ್ದಾನೆ ಎನ್ನುವ ಮಾಹಿತಿ ಇಲ್ಲದಿರುವಷ್ಟು ಅಮಾಯಕನೂ ಅಲ್ಲ, ಮುಗ್ಧನೂ ಅಲ್ಲ ಬ್ರದರ್‌ ಸ್ವಾಮಿ’ ಎಂದು ಕಾಲೆಳೆದಿದೆ.

ಕಾರ್ಖಾನೆಯ ಮೂಲ ಮಾಲಕ:

ಎಸ್‌ಐಟಿ ಅಧಿಕಾರಿಗಳಿಗೆ ಸಿ.ಡಿ. ಶಿವುವನ್ನು ಹಿಡಿದು ಡ್ರಿಲ್‌ ಮಾಡಿದರೆ, ಸತ್ಯ ಹೊರಗೆ ಬರುತ್ತದೆ. ಶಿವಕುಮಾರ್‌ ಇನ್‌ವೆಸ್ಟಿಗೇಷನ್‌ ಟೀಮ್‌ಗೆ ಗೊತ್ತಿಲ್ಲವೆಂದರೆ ಅದು ಶತಮಾನದ ಜೋಕ್‌ ಅಷ್ಟೇ. ಅಲ್ಲದೆ, ಸಿ.ಡಿ. ಶಿವು ಪೂರ್ವಾಶ್ರಮಕ್ಕೆ ಮಾಡಿದ ಘೋರ ಅಪಚಾರ. ಈ ಶತಮಾನ ಕಂಡು ಕೇಳರಿಯದ ಸೋಜಿಗ. ಪೆನ್‌ಡ್ರೈವ್‌ ಕಾರ್ಖಾನೆಯ ಮೂಲ ಮಾಲಕ, ಸಿ.ಡಿ. ಸಂಚುಕೋರ ಸಿ.ಡಿ. ಶಿವು ಕಣ್ಸನ್ನೆಯಂತೆ ಅವರ ಚೇಲಾಗಳು ನಡೆಸಿದ ಪೆನ್‌ಡ್ರೈವ್‌ ಸಮಾರಾಧನೆ ಯಾರಿಗೆ ಗೊತ್ತಿಲ್ಲ ಹೇಳಿ? ಎಫ್ಐಆರ್‌ ಆದ ಮೇಲೆ ಕಾಲ್ಕಿತ್ತ ಪೆನ್‌ಡ್ರೈವ್‌ ಪಿಶಾಚಿಗಳು; ಕೋರ್ಟ್‌ ಜಾಮೀನು ನಿರಾಕರಿಸಿದ ಮೇಲೆಯೂ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ಸಿ.ಡಿ. ಶಿವು ಆಸ್ಥಾನದಲ್ಲಿ ಓಲಾಡುತ್ತಿರುವುದು ಯಾರಿಗೆ ಗೊತ್ತಿಲ್ಲ, ಹೇಳಿ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸಿ.ಡಿ. ಜನಕ ಬ್ರದರ್‌ ಸ್ವಾಮಿ!:

ತಮ್ಮ ಕುಟುಂಬದ ಸದಸ್ಯನೊಬ್ಬ ಎಲ್ಲಿ ಅಡಗಿದ್ದಾನೆ ಎನ್ನುವ ಮಾಹಿತಿ ಇಲ್ಲದಿರುವಷ್ಟು ಅಮಾಯಕನೂ ಅಲ್ಲ, ಮುಗ್ಧನೂ ಅಲ್ಲ ಬ್ರದರ್‌ ಸ್ವಾಮಿ! ಗೆಜ್ಜೆ ಶಬ್ದ ಕಂಡರೆ ಕಳ್ಳ ಹೆಜ್ಜೆ ಇಡುವ ಮಾನಗೇಡಿಗಳು ತಾವು ಕೊಳಕು ತಿಂದು ಇತರರ ಬಾಯಿಗೆ ಒರೆಸಲು ಬರುತ್ತಿರುವುದು ಮೂರನ್ನೂ ಬಿಟ್ಟಿರುವ ನಿರ್ಲಜ್ಜತನದ ಪರಮಾವಧಿ. ಪೆನ್‌ಡ್ರೈವ್‌ ಬಿಡುತ್ತೇನೆ, ಬಿಡುತ್ತೇನೆ ಎಂದು ಒಂದು ವರ್ಷದಿಂದ ಬಾಯಿ ಬಡಿದುಕೊಳ್ಳುತ್ತಿದ್ದ ಬಿಜೆಪಿಯ ದೇವರಾಜೇಗೌಡನ ಜತೆ ರಹಸ್ಯ ಒಪ್ಪಂದ ಮಾಡಿಕೊಂಡು ಅಖಿಲ ಕರ್ನಾಟಕಕ್ಕೆ ಹಂಚಿಕೆ ಮಾಡಿದ್ದು ಇದೇ ಬ್ರದರ್‌ ಸ್ವಾಮಿಯಲ್ಲವೇ? ಪೂರ್ವಾಶ್ರಮದ ಸಿನೆಮಾ ಹಂಚಿಕೆಯ ವೃತ್ತಿ ಇದರಲ್ಲೂ ಸಹಾಯಕ್ಕೆ ಬಂದಿರಬಹುದು ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.