ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮಾಧ್ಯಮ ಸಂವಾದ

Team Udayavani, May 25, 2024, 12:12 AM IST

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮಂಗಳೂರು: ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸರಕಾರಿ ಶಿಕ್ಷಣ ಸಂಸ್ಥೆಗಳು, ಅಂಗನವಾಡಿ, ಮೆಸ್ಕಾಂ, ಲೋಕೋಪಯೋಗಿ ಇಲಾಖೆ ಅಪಾಯಕಾರಿ ಮರಗಳ ಪಟ್ಟಿಮಾಡಿ ನೀಡಿದ್ದು, ಸುಮಾರು 2 ಸಾವಿರ ಅಪಾಯಕಾರಿ ಮರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ತೀರಾ ಅಗತ್ಯ ಎನ್ನುವ ಮರಗಳ ತೆರವಿಗೆ ಆದ್ಯತೆ ನೀರುವುದರೊಂದಿಗೆ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯ ಅರಣ್ಯ ಇಲಾಖೆ ವತಿಯಿಂದ ನಡೆಯಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.

ಮುಂಗಾರು ಎದುರಿಸಲು ಇಲಾಖೆ ಸಜ್ಜಾಗಿದೆ. ಈ ಬಾರಿ ತಾಲೂಕಿಗೆ ಒಬ್ಬರಂತೆ ಸಿಬಂದಿಯನ್ನು ತಾಲೂಕು ಮಟ್ಟದ ವಿಕೋಪ ನಿರ್ವಹಣ ಕಚೇರಿಯಲ್ಲಿ ನಿಯೋಜಿಸಲಾಗುವುದು. ಇದರಿಂದ ಮರ ಧರೆಗೆ ಉರುಳುವುದು, ಕೊಂಬೆಗಳು ಮುರಿದು ಬೀಳುವುದು ಸೇರಿದಂತೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಶೀಘ್ರವಾಗಿ ಸಂಬಂಧಪಟ್ಟವರಿಗೆ ರವಾನಿಸಲು ನೆರವಾಗಲಿದೆ ಎಂದರು.

ಆನೆ ದಾಳಿ ತಡೆಗೆ ಕ್ರಮ
ಆನೆಗಳು ಊರಿಗೆ ಬರದಂತೆ ತಡೆಯುವ ನಿಟ್ಟಿನಲ್ಲಿ ಸೋಲಾರ್‌ ಬೇಲಿ, ಆನೆ ಕಂದಕ ನಿರ್ಮಾಣ ಮೊದಲಾದ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ರಸ್ತೆ ಮೊದಲಾದ ಕಾಮಗಾರಿಯ ಸಂದರ್ಭದಲ್ಲಿ ಆನೆಗಳ ಪಥ ಬದಲಾದರೆ ಅವು ಗೊಂದಲಕ್ಕೆ ಒಳಗಾಗಿ ಹೊಸ ದಾರಿ ಹುಡುಕುತ್ತವೆ. ಇದರಿಂದ ಸಾಕಷ್ಟು ಬಾರಿ ಅವುಗಳು ನಾಡಿಗೆ ನುಗ್ಗಿದ ಉದಾಹರಣೆಗಳಿವೆ. 2023-24ರಲ್ಲಿ ಆನೆ ದಾಳಿಯಿಂದ ನಾಲ್ಕು ಜೀವ ಹಾನಿಯಾಗಿದೆ. 2024-25ರಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ. ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೆ ಕಳೆದ ಸಾಲಿನಲ್ಲಿ 1.4 ಕೋ.ರೂ. ಪರಿಹಾರ ನೀಡಲಾಗಿದೆ ಎಂದರು.

5 ಲಕ್ಷ ಗಿಡ ನಾಟಿ
2024-25ನೇ ಸಾಲಿನಲ್ಲಿ 5 ಲಕ್ಷ ಗಿಡಗಳನ್ನು ನೆಡಲಾಗುವುದು. ಇದರಲ್ಲಿ ಈ ಸಾಲಿನಲ್ಲಿ ರೈತರಿಗೆ 1.63 ಲಕ್ಷ ಗಿಡಗಳನ್ನು ವಿತರಿಸುವ ಗುರಿ ಹೊಂದಲಾಗಿದೆ. 3 ರೂ. ಮತ್ತು 7 ರೂ. ದರದಲ್ಲಿ ಸಸಿಗಳನ್ನು ವಿತರಿಸಲಾಗುತ್ತಿದೆ. ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಒತ್ತು ನೀಡುತ್ತಿದೆ ಎಂದರು.

1.70 ಲಕ್ಷ ಮರ ತೆರವು
ವಿವಿಧ ಅಭಿವೃದ್ಧಿ ಯೋಜನೆಗಳ ಸಂದರ್ಭದಲ್ಲಿ ಪ್ರತಿ ವರ್ಷ ಸಾಕಷ್ಟು ಮರಗಳ ನಾಶವಾಗುತ್ತದೆ. ಕಳೆದ ವರ್ಷ ಈ ರೀತಿ 1.70 ಲಕ್ಷ ಮರಗಳನ್ನು ತೆರವುಗೊಳಿಸ ಬೇಕಾಯಿತು. ಆದರೂ ಶೇ.33ರಷ್ಟು ಅರಣ್ಯವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಸಹಾಯಕ ಅರಣ್ಯ ಸಂರಕ್ಷಣಾ ಕಾರಿ ಶ್ರೀಧರ್‌, ಅಕ್ಷಯ್‌ ಪ್ರಕಾಶ್ಕರ್‌, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಪ್ರಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್‌ ರೈ ಉಪಸ್ಥಿತರಿದ್ದರು.

ಕೆಪಿಟಿ-ನಂತೂರು ಕಾಮಗಾರಿ
ವಿಳಂಬಕ್ಕೆ ಅರಣ್ಯ ಇಲಾಖೆ ಕಾರಣವಲ್ಲ
ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಮತ್ತು ನಂತೂರು ಜಂಕ್ಷನ್‌ ಫ್ಲೆ$çಓವರ್‌ ಕಾಮಗಾರಿ ವಿಳಂಬವಾಗಿರುವುದರಲ್ಲಿ ಅರಣ್ಯ ಇಲಾಖೆಯ ಯಾವುದೇ ಪಾತ್ರವಿಲ್ಲ. 8 ತಿಂಗಳ ಹಿಂದೆಯೇ ಸಾರ್ವಜನಿಕರು, ಪರಿಸರವಾದಿಗಳಿಂದ ಅಹವಾಲು ಸ್ವೀಕರಿಸಿ ಕೆಪಿಟಿಯಿಂದ ಪದವು ವರೆಗೆ ಮರಗಳನ್ನು ತೆರವುಗೊಳಿಸಲಾಗಿದೆ. ಹೆದ್ದಾರಿ ಪ್ರಾಧಿಕಾರ ಕಡೆಯಿಂದ ಯಾವುದೋ ಕಾರಣಕ್ಕೆ ಕಾಮಗಾರಿ ವಿಳಂಬವಾಗಿದೆ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.