Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ


Team Udayavani, May 26, 2024, 3:01 PM IST

9

ರಾಮನಗರ: ಜಿಲ್ಲೆಯಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ 1646 ಅಪರಾಧ ಪ್ರಕರಣಗಳ ದಾಖಲಾಗಿವೆ.

ಹೌದು.., ಪೊಲೀಸ್‌ ಇಲಾಖೆಯ ಜನವರಿಯಿಂದ ಏಪ್ರಿಲ್‌ ತಿಂಗಳ ವರೆಗೆ ನಡೆದಿರುವ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಸಂಗತಿ ಖಚಿತವಾಗಿದೆ.

ಬೆಂಗಳೂರು ನಗರಕ್ಕೆ ಹೊಂದಿಕೊಂಡಂತೆ ಇರುವ ರಾಮನಗರ ಜಿಲ್ಲೆ ಸಾಕಷ್ಟು ಬೆಳ ವಣಿಗೆ ಹೊಂದುತ್ತಿದ್ದು, ಇದರ ಜೊತೆಗೆ ಅಪರಾಧ ಪ್ರಕರಣಗಳು ಬೆಳೆಯುತ್ತಿವೆ. ನಾಲ್ಕು ತಿಂಗಳ ಅವಧಿಯಲ್ಲಿ ಅಪರಾಧ ಪ್ರಕರಣಗಳು ಒಂದೂವರೆ ಸಾವಿರದ ಗಡಿದಾಟಿರುವುದೇ ಇದಕ್ಕೆ ಉದಾಹರಣೆ.

ಜಿಲ್ಲೆಯಲ್ಲಿ ಜನವರಿಯಿಂದ ಏಪ್ರಿಲ್‌ವರೆಗೆ 1351 ಐಪಿಸಿ ಕಾಯಿದೆಗಳಡಿಯಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿವೆ. ಇನ್ನು ಪೋಕ್ಸೋ ಸೇರಿದಂತೆ ವಿವಿಧ ವಿಶೇಷ ಕಾಯಿದೆಯಡಿಯಲ್ಲಿ 295 ಪ್ರಕರಣಗಳು ದಾಖಲಾಗಿವೆ. ಒಟ್ಟು 1646 ಅಪರಾಧ ಪ್ರಕರಣಗಳು ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿವೆ.

ಏಪ್ರಿಲ್‌ ತಿಂಗಳಲ್ಲಿ 411 ಪ್ರಕರಣ: ಜಿಲ್ಲೆಯಲ್ಲಿ ಕಳೆದ ಏಪ್ರೀಲ್‌ ತಿಂಗಳಲ್ಲಿ 385 ಐಪಿಸಿ ಕಾಯಿದೆಯಡಿಯ ಪ್ರಕರಣಗಳು, 26 ವಿಶೇಷ ಕಾಯಿದೆಯಡಿಯ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಒಟ್ಟು 411 ಪ್ರಕರಣಗಳು ದಾಖಲಾಗಿವೆ. ಪ್ರತಿ ತಿಂಗಳು ಸರಾಸರಿ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದು ಪೊಲೀಸ್‌ ಇಲಾಖೆಯ ವರದಿಯಿಂದ ಬಹಿರಂಗಗೊಂಡಿದೆ.

4 ತಿಂಗಳಲ್ಲಿ 16 ಕೊಲೆ: ಜನವರಿಯಿಂದ ಏಪ್ರಿಲ್‌ವರೆಗಿನ ಅವ ಯಲ್ಲಿ ಜಿಲ್ಲೆಯಲ್ಲಿ 16 ಕೊಲೆ ಪ್ರಕರಣಗಳು ದಾಖಲಾಗಿವೆ. ಏಪ್ರಿಲ್‌ ತಿಂಗಳಿನಲ್ಲಿ 5 ಕೊಲೆ ಪ್ರಕರಣಗಳು ವರದಿಯಾಗಿವೆ. 2023ರಲ್ಲಿ 37 ಕೊಲೆ ಪ್ರಕರಣಗಳು ದಾಖಲಾಗಿದ್ದವು. ಜಿಲ್ಲೆಯಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ 24 ಕೊಲೆ ಯತ್ನದ ಪ್ರಕರಣಗಳು ನಡೆದಿದ್ದು, ಏ.ತಿಂಗಳಲ್ಲಿ 8 ಪ್ರಕರಣಗಳು ದಾಖಲಾಗಿವೆ. 2023ರಲ್ಲಿ 76 ಕೊಲೆ ಯತ್ನ ಪ್ರಕರಣಗಳು ವರದಿಯಾಗಿತ್ತು.

49 ಮನೆಗಳವು, 159 ಕಳ್ಳತನ: ಈ ವರ್ಷದ ಮೊದಲ ನಾಲ್ಕು ತಿಂಗಳ ಅವ ಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಿರುವುದು ಪೊಲೀಸ್‌ ಇಲಾಖೆಯ ಅಂಕಿಅಂಶಗಳಿಂದ ಬಹಿರಂಗವಾಗಿದೆ. ನಾಲ್ಕು ತಿಂಗಳ ಅವ ಧಿಯಲ್ಲಿ 49 ಮನೆಕಳ್ಳತನ, 159 ಕಳ್ಳತನ ಪ್ರಕರಣಗಳು ದಾಖಲಾಗಿವೆ. 2023ರಲ್ಲಿ 184 ಮನೆ ಕಳವು ನಡೆದಿತ್ತು. ಇನ್ನು ನಾಲ್ಕು ತಿಂಗಳ ಅವ ಧಿಯಲ್ಲಿ 7 ಡಕಾಯಿತಿ,14 ರಾಬರಿಗಳು ನಡೆದಿವೆ. 2023ರಲ್ಲಿ 22 ಡಕಾಯಿತಿ, 39 ರಾಬರಿ ಪ್ರಕರಣಗಳು ದಾಖಲಾಗಿದ್ದವು.

ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳು: ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಸಿದಂತೆ ನಾಲ್ಕು ತಿಂಗಳ ಅವ ಧಿಯಲ್ಲಿ 2 ಅತ್ಯಾಚಾರ ಪ್ರಕರಣಗಳು, 44 ಪೋಕ್ಸೋ ಪ್ರಕರಣ, 36 ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.

2023ರಲ್ಲಿ119 ಪೋಕ್ಸೋ ಕಾಯಿದೆಯಡಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು, 104 ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದವು.

ಸೈಬರ್‌ ಕ್ರೈಂ ಪ್ರಮಾಣ ಸಹ ಹೆಚ್ಚಳ: 2023ರಲ್ಲಿ ಇಡೀ ವರ್ಷದಲ್ಲಿ ಜಿಲ್ಲಾದ್ಯಂತ 159 ಸೈಬರ್‌ ಕ್ರೈಂ ಪ್ರಕರಣಗಳು ದಾಖ ಲಾಗಿದ್ದವು. ಆದರೆ, ಈ ವರ್ಷ ನಾಲ್ಕು ತಿಂಗಳ ಅವ ಧಿಯಲ್ಲೇ 61 ಸೈಬರ್‌ ಕ್ರೈಂ ಪ್ರಕರಣಗಳು ದಾಖಲಾಗಿವೆ. ಇನ್ನು ಏಪ್ರಿಲ್‌ ತಿಂಗಳೊಂದರಲ್ಲೇ 21 ಸೈಬರ್‌ ಕ್ರೈಂ ಪ್ರಕರಣಗಳು ದಾಖಲಾಗಿದ್ದು, ಆನ್‌ಲೈನ್‌ನಲ್ಲಿ ವಂಚನೆಗೊಳಗಾಗುವ ಮಂದಿಯ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ.

132 ಮಾರಣಾಂತಿಕ ಅಪಘಾತ: ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ 578 ಅಪ ಘಾತಗಳು ಸಂಭವಿಸಿವೆ. ಇದರಲ್ಲಿ 137 ಮಾರಣಾಂತಿಕ ಅಪಘಾತಗಳು, 441 ಮಾರಣಾಂತಿ ಕವಲ್ಲದ ಅಪಘಾತಗಳು. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಅಪಘಾತಗಳ ಪ್ರಮಾಣ ಕಡಿಮೆಯಾಗಿವೆಯಾದರೂ ಇತರ ರಸ್ತೆಗಳಲ್ಲಿ ಅಪಘಾತದ ಪ್ರಮಾಣ ಹೆಚ್ಚಾಗಿರುವುದು ಇದರಿಂದ ಬೆಳಕಿಗೆ ಬಂದಿದೆ. ಇನ್ನು ಏಪ್ರಿಲ್‌ ತಿಂಗಳೊಂದರಲ್ಲೇ 33 ಮಾರಣಾಂತಿಕ ಅಪಘಾತಗಳು, 137 ಮಾರಣಾಂತಿಕವಲ್ಲದ ಅಪಘಾತಗಳು ನಡೆದಿವೆ.

ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

DK Shivakumar: ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ನೀನೇನು ಮಾಡಿದ್ದೆ ಹೇಳಪ್ಪಾ?- ಡಿಕೆಶಿ

10-ramanagara

Ramanagara: ಬೆಂ.-ಮೈ. ಎಕ್ಸ್‌ ಪ್ರೆಸ್‌ವೇ ಬಿಡದಿ ಎಕ್ಸಿಟ್‌ ಬಂದ್‌

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

Ramanagara: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಡಿಕೆಸು ಕಣ್ಣು ?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.