Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌


Team Udayavani, May 27, 2024, 12:31 AM IST

rahul gandhi

ಶಿಮ್ಲಾ/ನಹಾನ್‌/ಉನಾ: ದೇವರೇ ತಮ್ಮಿಂದ ಕೆಲಸ ಮಾಡಿಸುತ್ತಿದ್ದಾನೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಳ್ಳುತ್ತಾರೆೆ. ಬಹುಶಃ ದೇವರು ಅದಾನಿಗಾಗಿ ಕೆಲಸ ಮಾಡುವಂತೆ ಹೇಳಿರಬೇಕು ಎಂದು ಕಾಂಗ್ರೆಸ್‌ ನಾಯಕ ವ್ಯಂಗ್ಯವಾಡಿದರು. ಅಲ್ಲದೇ ಜತೆಗೆ ದೇಶದ ವಿಮಾನ ನಿಲ್ದಾಣ, ಬಂದರುಗಳನ್ನು ಉದ್ಯಮಿ ಗೌತಮ್‌ ಅದಾನಿ ಯವರಿಗೆ ಮಾರುತ್ತಿದ್ದಾರೆ ಎಂದು ದೂರಿದರು.

ಹಿಮಾಚಲ ಪ್ರದೇಶದ ಶಿಮ್ಲಾ, ನಾಹನ್‌ ಮತ್ತು ಉನಾ ದಲ್ಲಿ ಮಾತನಾಡಿದ ಅವರು, 10 ವರ್ಷಗಳಲ್ಲಿ 22 ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲಮನ್ನಾ ಮಾಡಿರುವ ಪ್ರಧಾನಿ ಮೋದಿ ಹಿಮಾಚಲ ಪ್ರದೇಶದ ಮಳೆ ವಿಕೋಪ ಪರಿಹಾರಕ್ಕೆ 9,000 ಕೋಟಿ ರೂ. ನೀಡುತ್ತಿಲ್ಲ. ಹಿಮಾಚಲ ಪ್ರದೇಶಕ್ಕೆ ನೆರವು ಒದಗಿಸುವ ಬದಲು ಇಲ್ಲಿನ ಸರಕಾರದ ಪತನ ಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ದೂರಿದರು. ಕೇಂದ್ರ ಸರಕಾರ ರದ್ದು ಮಾಡಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆದಿದ್ದ ಪ್ರತಿಭಟನೆ ವೇಳೆ 700 ಮಂದಿ ರೈತರು ಅಸುನೀಗಿದ್ದರು. ಅವರಿಗೆ ಕೇಂದ್ರ ಸರಕಾರ ಹುತಾತ್ಮರ ಗೌರವ ನೀಡಿಲ್ಲವೆಂದರು.

ಪ್ರಗತಿ ಆಗಿದ್ದರೆ ಜನರ ಜೀವನ ಏಕೆ ಸುಧಾರಣೆ ಆಗಿಲ್ಲ?: ಪ್ರಿಯಾಂಕಾ
ಚಂಡೀಗಢ: ದೇಶದ ಆರ್ಥಿಕ ಪ್ರಗತಿಯಾಗುತ್ತಿ ದ್ದರೂ ಜನರ ಜೀವನ ಮಟ್ಟ ಸುಧಾರಿಸಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಧಾನ ಕಾರ್ಯ ದರ್ಶಿ ಪ್ರಿಯಾಂಕಾ ವಾದ್ರಾ ಆರೋಪಿಸಿದ್ದಾರೆ. ಪಂಜಾಬ್‌ನ ಫ‌ತೇಗರ್‌ ಸಾಹೀಬ್‌ನಲ್ಲಿ ನಡೆದ ಚುನಾವಣೆ ರ್ಯಾಲಿಯಲ್ಲಿ ಮಾತನಾಡಿ, ದೇಶ ಪ್ರಗತಿಯಾಗುತ್ತಿದೆ ಎಂದು ಮೋದಿ ಹೇಳು ತ್ತಾರೆ. ಅದು ನಿಜವಾಗಿದ್ದರೆ, ಇಲ್ಲಿನ ಸ್ಟೀಲ್‌ ಕಾರ್ಖಾ ನೆಗಳೇಕೆ ಮುಚ್ಚುತ್ತಿವೆ. ಜಿಎಸ್‌ಟಿ ಹೇರಿಕೆಯಿಂದ ಉದ್ಯಮಗಳನ್ನು ಬಲಹೀನ ಗೊಳಿ ಸಲಾಗುತ್ತಿದೆ. ಜನರ ಜೀವನ ಮಟ್ಟ ಸುಧಾರಣೆಯಾಗಿಲ್ಲ. ಬಿಜೆಪಿ ಆಡಳಿತದ ಅವಧಿಯಲ್ಲಿ ಜನರ ಅಭಿವೃದ್ಧಿ ಆಗುತ್ತಿಲ್ಲ. ಪ್ರಧಾನಿ ಕೇವಲ ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ನಿರತರಾಗಿದ್ದಾರೆ ಎಂದು ಅವರು ದೂರಿದರು.

ಪಿಎಂ ಮೋದಿ ತಮ್ಮನ್ನು ತೀಸ್‌ ಮಾರ್‌ ಖಾನ್‌ ಅಂದುಕೊಂಡಿದ್ದಾರೆ
ಸಸಾರಾಂ: ಮುಸ್ಲಿಮರ ಮುಂದೆ ಇಂಡಿಯಾ ಕೂಟ “ಮುಜ್ರಾ’ ಮಾಡುತ್ತದೆ ಎಂಬ ಪ್ರಧಾನಿ ಹೇಳಿಕೆ ಬಿಹಾರಕ್ಕೆ ಮಾಡಿದ ಅವಮಾನ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾ ರ್ಜುನ ಖರ್ಗೆ ಕಿಡಿ ಕಾರಿ ದ್ದಾರೆ. ಮೋದಿ ತಮ್ಮನ್ನು ತಾವು “ತೀಸ್‌ ಮಾರ್‌ ಖಾನ್‌’ ಎಂದು ಭಾವಿಸಿ ದ್ದಾರೆ ಎಂದೂ ಹೇಳಿದರು. ಬಿಹಾರದ ಸಸಾ ರಾಂನಲ್ಲಿ ಮಾತನಾಡಿದ ಅವರು “ಮೋದಿಯವರು ಮುಜ್ರಾ ಇಲ್ಲಿಯೇ ನಡೆಯುತ್ತದೆ ಎಂಬರ್ಥದಲ್ಲಿ ಮಾತನಾಡುವ ಮೂಲಕ ಬಿಹಾರ ಮತದಾರನ್ನು ಅವಮಾನಿಸಿದ್ದಾರೆ. ಅವರು ತಮ್ಮನ್ನು ತಾವು ತೀಸ್‌ ಮಾರ್‌ ಖಾನ್‌ ಎಂದು ಭಾವಿಸಿಕೊಂಡಿದ್ದಾರೆ. ಅವರ ಭಾವನೆ ತಪ್ಪು. ಜನರೇ ನಿಜವಾದ ತೀಸ್‌ ಮಾರ್‌ ಖಾನ್‌ ಎಂದರು.

ಜೂ.4ರ ಬಳಿಕ ಸರಕಾರ ಜತೆಗೆ ಮಾಧ್ಯಮಗಳೂ ಬದಲು
ಬಲ್ಲಿಯಾ: ಪ್ರಧಾನಿ ಮೋದಿ ಆತ್ಮವಿಶ್ವಾಸ ಕಳೆದು ಕೊಂಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಉಳಿಸಿ ಕೊಳ್ಳುವುದಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದ್ದಂತೆ ಅವರು ತಮ್ಮ ಭಾಷಣದಲ್ಲಿ ಏನೇನೋ ಮಾತಾಡಲು ಶುರು ಮಾಡಿದ್ದಾರೆಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್‌ ಯಾದವ್‌ ಟೀಕಿಸಿದ್ದಾರೆ. ಉ.ಪ್ರ.ದ ಬಲ್ಲಿಯಾದಲ್ಲಿ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ಜೂ.4ರಂದು ಫ‌ಲಿತಾಂಶ ಬಂದ ಬಳಿಕ, ಕೇಂದ್ರ ಸಂಪುಟವೂ ಬದಲಾಗುತ್ತದೆ, ಮಾಧ್ಯಮಗಳೂ ಬದಲಾಗುತ್ತವೆ ಎಂದಿದ್ದಾರೆ. ಯಾವಾಗ ಆತ್ಮವಿಶ್ವಾಸ ಕಳೆದುಕೊಳ್ಳುತ್ತೇವೋ, ಆಗ ಮಾತುಗಳು ಅಸ್ಪಷ್ಟ ವಾಗುತ್ತವೆ. ಅದನ್ನು ಪ್ರಧಾನಿ ಭಾಷಣದಲ್ಲಿ ಕಾಣ ಬಹುದು. ದೇಶದ 140 ಕೋಟಿ ಜನರು ಬಿಜೆಪಿಗೆ 140 ಸೀಟುಗಳಿಗೂ ಕಷ್ಟಪಡುವಂತೆ ಮಾಡಲಿದ್ದಾರೆ ಎಂದೂ ಅಖೀಲೇಶ್‌ ನುಡಿದಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.