ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ಕಾಂಗ್ರೆಸ್‌ ಕಚೇರಿಯಲ್ಲಿ ವಿಶೇಷ ಕಾರ್ಯಕ್ರಮ; ಪಕ್ಷ ಸಂಘಟನೆಗೆ ಆದ್ಯತೆ

Team Udayavani, May 28, 2024, 6:20 AM IST

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮುಂದೆ ಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಂದ ಕಾರ್ಯಕರ್ತರ ಭೇಟಿ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಹಿತಿ ನೀಡಿದರು. ಪಕ್ಷದ ಕಚೇರಿಯಲ್ಲಿ ನಡೆದ ನೆಹರು ಪುಣ್ಯಸ್ಮರಣೆ ವೇಳೆ ಮಾತನಾಡಿದ ಅವರು, ತಿಂಗಳಿಗೊಮ್ಮೆ ಮುಖ್ಯಮಂತ್ರಿ ಹಾಗೂ ನಾನು ಒಂದು ದಿನ ಕಾಂಗ್ರೆಸ್‌ ಕಚೇರಿಯಲ್ಲಿ ಕುಳಿತು ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಕೇವಲ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಪಕ್ಷದ ಸದಸ್ಯತ್ವ ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗಿರುತ್ತದೆ. ಇನ್ನು ಮಂತ್ರಿಗಳು ವಾರ ಮುಂಚಿತವಾಗಿ ದಿನಾಂಕ ನಿಗದಿ ಮಾಡಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು. ಎಷ್ಟೋ ಬಾರಿ ಕಾರ್ಯಕರ್ತರು ನಮ್ಮನ್ನು ಭೇಟಿ ಮಾಡಲು ದೂರದ ಊರುಗಳಿಂದ ಬರುತ್ತಾರೆ. ಆದರೆ ನಾವು ಅವರನ್ನು ಭೇಟಿ ಮಾಡಲು ಆಗುವುದಿಲ್ಲ. ಪ್ರಮುಖರನ್ನೇ ಮೊದಲು ಕರೆದು ಮಾತನಾಡಿಸುತ್ತೇವೆ. ಇದರಿಂದ ನಮಗೂ ಮುಜುಗರವಾಗುತ್ತದೆ. ನಮ್ಮನ್ನು ವಿಧಾನಸೌಧದಲ್ಲಿ ಕೂರಿಸಿದವರ ಜತೆ ನಮಗೆ ಮಾತನಾಡಲು ಆಗುವುದಿಲ್ಲ. ಈ ಅನುಭವ ನನಗೂ ಆಗಿದೆ. ಹೀಗಾಗಿ ಈ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಗಳಿಗೆ ಅಡಿಪಾಯ: ಈ ಸರ್ಕಾರ ನಾಲ್ಕು ವರ್ಷದ ಸರ್ಕಾರ ಅಲ್ಲ. 10 ವರ್ಷದ ಸರ್ಕಾರ. ಇದಕ್ಕಾಗಿ ನಾವು ಈಗಿನಿಂದಲೇ ತಯಾರಿ ನಡೆಸಬೇಕು. ಸಚಿವರಾದ ರಾಮಲಿಂಗಾ ರೆಡ್ಡಿ ಹಾಗೂ ಕೃಷ್ಣ ಭೈರೇಗೌಡ ಅವರ ಜತೆ ಚರ್ಚೆ ಮಾಡಿದ್ದೇನೆ. ನಾವು ನಮ್ಮ ದೇವಾಲಯವಾಗಿರುವ ಕಾಂಗ್ರೆಸ್‌ ಕಚೇರಿಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯದ ಎಲ್ಲಾ ಜಿಲ್ಲಾ ಕಾಂಗ್ರೆಸ್‌ ಕಚೇರಿಗಳ ನಿರ್ಮಾಣಕ್ಕೆ ಮುಂದಿನ ಒಂದು ವರ್ಷದಲ್ಲಿ ಅಡಿಪಾಯ ಹಾಕುತ್ತೇವೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಈ ಕೆಲಸ ಆರಂಭವಾಗಿವೆ. ಎಲ್ಲಾ ಜಿಲ್ಲೆಗಳಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಇದರ ಹೊಣೆ ಹೊರಬೇಕು. ಇನ್ನು ರೇಸ್‌ ಕೋರ್ಸ್‌ ರಸ್ತೆಯ ಕಚೇರಿಯ ಕಟ್ಟಡವನ್ನು ಹೊಸದಾಗಿ ನಿರ್ಮಾಣ ಮಾಡುತ್ತೇವೆ ಎಂದು ವಿವರಿಸಿದರು.

ಇವಿಎಂ ಹೆಚ್ಚುಕಮ್ಮಿ ಆಗದಿದ್ದರೆ
ಗೆಲುವು ನಮ್ಮದೇ: ಡಿಕೆಶಿ
ನೀವೆಲ್ಲರೂ ಕಷ್ಟಪಟ್ಟು ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದೀರಿ. ಕಾರ್ಯಕರ್ತರು, ಮತದಾರರ ಶ್ರಮದಿಂದ ಸರ್ಕಾರ ಬಂದಿದೆ. ಅದೇ ಶ್ರಮದಿಂದಾಗಿ ಕರ್ನಾಟಕದಲ್ಲೇ ಇಂಡಿಯಾ ಮೈತ್ರಿಕೂಟ ರಚನೆಯಾಯಿತು. ಈ ಬಾರಿ ಸದ್ಯ ಚರ್ಚೆಯಾಗುತ್ತಿರುವಂತೆ ಚುನಾವಣೆಯಲ್ಲಿ ಇವಿಎಂ ಹೆಚ್ಚು ಕಮ್ಮಿಯಾಗದಿದ್ದರೆ ಜನ ನಮಗೆ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ ಎಂಬ ನಂಬಿಕೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು.

ಟಾಪ್ ನ್ಯೂಸ್

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

neet

Exam; ರದ್ದಾಗಿದ್ದ ನೀಟ್‌-ಪಿಜಿ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ:ಅಭಿಜಿತ್‌ ಸೇಠ್

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

1-saddsd

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-amar

Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

1-wq-ewq-e-e-eq-eqw-ewqe

Tata Institute;ಉದ್ಯೋಗಿಗಳ ವಜಾ ಆದೇಶ ಪ್ರಕರಣಕ್ಕೆ ಸುಖಾಂತ್ಯ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.