ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ನಿಯಮದಡಿ ಅವಕಾಶವಿಲ್ಲದಿದ್ದರೂ ಅನುಮತಿ ನೀಡಿದ್ದ ಜಿ.ಪಂ.

Team Udayavani, May 28, 2024, 7:05 AM IST

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ಉಡುಪಿ: ಕರಾವಳಿಯಲ್ಲಿ ಅತ್ಯಗತ್ಯ ವಾಗಿರುವ ಕಾಲುಸಂಕಗಳನ್ನು ನರೇಗಾ ಯೋಜನೆ ಯಡಿ ನಿರ್ಮಿಸಲು ಜಿಲ್ಲಾ ಪಂಚಾಯತ್‌ ಹಾಗೂ ಜಿಲ್ಲಾಡಳಿತಗಳು ಕಳೆದ ವರ್ಷ ಎಲ್ಲ ಪಂಚಾಯತ್‌ಗಳಿಗೂ ಅನುಮತಿ ನೀಡಿದ್ದವು. ಹೀಗಾಗಿ ಅನೇಕ ಗ್ರಾ.ಪಂ.ಗಳಲ್ಲಿ ಕಾಲುಸಂಕ ನಿರ್ಮಾಣ ಆಗಿದೆ. ಆದರೆ ಈಗ ಸರಕಾರ ನರೇಗಾದಡಿ ಕಾಲುಸಂಕ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದಿರುವುದು ಗ್ರಾ.ಪಂ.ಗಳಲ್ಲಿ ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಜಿ.ಪಂ. ಕೂಡ ಇಕ್ಕಟ್ಟಿಗೆ ಸಿಲುಕಿದೆ.

ನರೇಗಾದಡಿ ಕಾಲುಸಂಕ ನಿರ್ಮಿಸಲು ಅವಕಾಶ ಕೋರಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯುವ ಮೊದಲೇ ಜಿಲ್ಲೆಯಲ್ಲಿ ಕಾಲುಸಂಕ ನಿರ್ಮಿಸಲು ಸೂಚನೆ ಹೊರಡಿಸಲಾಗಿತ್ತು. ಅನಂತರ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತರು ಕೇಂದ್ರ ಸಚಿವಾಲಯಕ್ಕೆ ಪತ್ರ ಬರೆದು ಅನುಮತಿ ಕೋರಿದ್ದರು. ಆದರೆ ಕೇಂದ್ರದಿಂದ ನರೇಗಾದಡಿ ಕಾಲುಸಂಕ ನಿರ್ಮಿಸಲು ಅನುಮತಿ ಕೊಟ್ಟಿಲ್ಲ, ಬದಲಾಗಿ ಮೋರಿಗಳನ್ನು ಸ್ಥಾಪಿಸಬಹುದು ಎಂದಷ್ಟೇ ಹೇಳಿದೆ. ಹೀಗಾಗಿ ಈಗ ಕಾಲುಸಂಕ ನಿರ್ಮಾಣಕ್ಕೆ ನರೇಗಾದಡಿ ಅವಕಾಶ ಕೊಡಲಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಹಣ ಬರುತ್ತಿಲ್ಲ
ಜಿ.ಪಂ. ಸೂಚನೆಯಂತೆ 7 ಮೀಟರ್‌ಗಿಂತ ಕಡಿಮೆ ವ್ಯಾಪ್ತಿಯ ಕಾಲು ಸಂಕಗಳನ್ನು ನರೇಗಾದಡಿ ನಿರ್ಮಿಸಲು ಗ್ರಾ.ಪಂ.ಗಳಲ್ಲಿ ಕಳೆದ ವರ್ಷ ಕ್ರಿಯಾ ಯೋಜನೆಯಲ್ಲಿ ಜೋಡಿಸಿ ಜಿ.ಪಂ.ಗೆ ಕಳುಹಿಸಿಕೊಡಲಾಗಿತ್ತು. ಅದರಂತೆ ಅನೇಕ ಕಡೆ ಕಾಲುಸಂಕ ನಿರ್ಮಾಣ ಆಗಿದೆ. ಆದರೀಗ ನರೇಗಾದಡಿ ಕಾಲುಸಂಕ ನಿರ್ಮಿಸಲು ಅವಕಾಶವಿಲ್ಲ ಎನ್ನುವ ಸರಕಾರದ ನಿರ್ದೇಶನವು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಲುಸಂಕ ನಿರ್ಮಿಸಿದ ಗುತ್ತಿಗೆದಾರರಿಗೆ ಸಂಕಷ್ಟ ತಂದೊಡ್ಡಿದೆ. ಕೂಲಿಯಾಗಿ ದುಡಿದವರ ಹಣ ಅವರ ಖಾತೆಗೆ ಸಂದಾಯವಾಗಿದೆ. ಆದರೆ ಸಾಮಗ್ರಿ ಹಾಗೂ ಯಂತ್ರೋಪಕರಣಕ್ಕೆ ಸಂಬಂಧಿಸಿ ಶೇ. 40ರಷ್ಟು ಅನುದಾನ ಇನ್ನೂ ಬಂದಿಲ್ಲ.

ಈಗ ಅವಕಾಶವೇ ನೀಡುತ್ತಿಲ್ಲ
ನರೇಗಾದಡಿ ಕಾಲುಸಂಕ ನಿರ್ಮಿಸಲು ಅವಕಾಶವಿಲ್ಲ ಎಂದು ಸರಕಾರ ಲಿಖೀತವಾಗಿ ನಿರ್ದೇಶನ ನೀಡಿರುವುದರಿಂದ ಜಿ.ಪಂ.ಗಳು ಎಚ್ಚೆತ್ತುಕೊಂಡಿವೆ. ಈಗ ನರೇಗಾದಡಿ ಕಾಲುಸಂಕ ನಿರ್ಮಿಸಲು ಅನುಮತಿ ನೀಡುತ್ತಿಲ್ಲ. ಪ್ರಸ್ತಾವನೆ ನೀಡಿದ ಗ್ರಾ.ಪಂ.ಗಳಿಗೆ ನರೇಗಾದಡಿ ಅವಕಾಶ ನೀಡಲು ಆಗುತ್ತಿಲ್ಲ ಎಂದಷ್ಟೇ ಹೇಳುತ್ತಿದ್ದಾರೆ. ಯಾಕೆ ಅವಕಾಶ ಇಲ್ಲ ಮತ್ತು ಆಗಿರುವ ಸಮಸ್ಯೆ ಏನು ಎಂದು ಸ್ಪಷ್ಟವಾಗಿ ಹೇಳದೆ ಇರುವುದರಿಂದ ತಳಮಟ್ಟದಲ್ಲಿ ಗೊಂದಲ ಹಾಗೆಯೇ ಉಳಿದಿದೆ.

7 ಮೀ. ಕಡಿಮೆ
ಉದ್ದದ ಕಾಲುಸಂಕ
2 ವರ್ಷಗಳ ಹಿಂದೆ ಬೈಂದೂರು ತಾಲೂಕಿನ ಕಾಲೊ¤àಡು ಗ್ರಾಮದಲ್ಲಿ ಮಗುವೊಂದು ಕಾಲುಸಂಕದಿಂದ ನೀರಿಗೆ ಬಿದ್ದು ಮೃತಪಟ್ಟ ಬಳಿಕ ಉಭಯ ಜಿಲ್ಲೆಯಲ್ಲೂ ಗ್ರಾ.ಪಂ. ಪಿಡಿಒಗಳ ಮೂಲಕ ಕಾಲು ಸಂಕಗಳ ಸ್ಥಿತಿಗತಿ ಸರ್ವೇ ಮಾಡಲಾಗಿತ್ತು. ಎಲ್ಲ ಪಿಡಿಒಗಳು ತಮ್ಮ ವ್ಯಾಪ್ತಿಯ ಕಾಲುಸಂಕಗಳು, ಅಗತ್ಯವಾಗಿ ಆಗಬೇಕಿರುವ ಕಾಲುಸಂಕಗಳು, ದುರಸ್ತಿ ಕಾಣಬೇಕಿರುವ (ಕಚ್ಚಾ) ಕಾಲುಸಂಕಗಳ ಮಾಹಿತಿಯನ್ನು ಜಿ.ಪಂ.ಗೆ ಒದಗಿಸಿದ್ದರು. ಅದರಂತೆ 7 ಮೀಟರ್‌ಗಿಂತ ಕಡಿಮೆ ಉದ್ದದ ಕಾಲುಸಂಕಗಳನ್ನು ನರೇಗಾದಡಿ ನಿರ್ಮಿಸಲು ಜಿ.ಪಂ. ಅನುಮತಿ ನೀಡಿತ್ತು. 7 ಮೀಟರ್‌ಗಿಂತ ದೊಡ್ಡದಾದ ಕಾಲುಸಂಕ ಅಥವಾ ಅಣೆಕಟ್ಟು ಅಥವಾ ಕಿಂಡಿ ಅಣೆಕಟ್ಟು ಮತ್ತು ಸೇತುವೆಗಳನ್ನು ಸಣ್ಣ ನೀರಾವರಿ ಇಲಾಖೆ ಮತ್ತು ಪಿಡಬ್ಲ್ಯುಡಿ ಇಲಾಖೆ ಮಾಡಲಾಗುತ್ತಿದೆ.

ಇನ್ನೊಮ್ಮೆ ಮನವರಿಕೆ
ನರೇಗಾದಡಿ ಕಾಲುಸಂಕ ನಿರ್ಮಾಣಕ್ಕೆ ಅವಕಾಶ ಕೋರಿ ಇನ್ನೊಮ್ಮೆ ಕೇಂದ್ರಕ್ಕೆ ಪತ್ರ ರವಾನೆ ಮಾಡಲಿದ್ದೇವೆ. ಕರಾವಳಿ ಭಾಗದಲ್ಲಿ ಸಣ್ಣ ಸಣ್ಣ ಕಾಲು ಸಂಕಗಳು ಅವಶ್ಯವಾಗಿ ಆಗಬೇಕಿರುವು ದರಿಂದ ನರೇಗಾದಡಿ ಅವಕಾಶ ಕೊಡ ಬೇಕಾಗುತ್ತದೆ. ಕೇಂದ್ರ ಗ್ರಾಮೀಣಾಭಿ ವೃದ್ಧಿ ಸಚಿವಾಲಯಕ್ಕೆ ಸಮಸ್ಯೆಯ ಮನವರಿಕೆ ಮಾಡಿ ಅವಕಾಶ ಪಡೆಯ ಲಾಗುವುದು ಎಂದು ರಾಜ್ಯ ಪಂಚಾ ಯತ್‌ ರಾಜ್‌ ಹಾಗೂ ಗ್ರಾಮೀಣಾಭಿ ವೃದ್ಧಿ ಇಲಾಖೆಯ ಹೆಸರು ಬಹಿರಂಗ ಪಡಿಸಲು ಇಚ್ಛಿಸದ ಹಿರಿಯ ಅಧಿಕಾರಿ ಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

- ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.