ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್ ಆಗ್ರಹ
Team Udayavani, May 28, 2024, 12:59 AM IST
ತಿರುವನಂತಪುರ: ಕೇರಳದಲ್ಲಿ ನಡೆದಿದೆ ಎನ್ನಲಾಗಿರುವ ಮದ್ಯ ಹಗರಣದಲ್ಲಿ ದಿಲ್ಲಿ ಮಾದರಿಯನ್ನೇ ಅಳವಡಿಸಿ ಕೊಳ್ಳಲಾಗಿದೆ ಎಂದು ಕೇಂದ್ರ ಸಚಿವ ವಿ. ಮುರಳೀಧರನ್ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೇರಳದ ಮದ್ಯ ನೀತಿ ಬದಲಾವಣೆಗೆ ಸಂಬಂಧಿಸಿದಂತೆ ಸೋರಿಕೆಯಾಗಿರುವ ಆಡಿಯೋ ಟೇಪ್ಗ್ಳು ರಾಜ್ಯ ಸರಕಾರದ ಭ್ರಷ್ಟಾಚಾರವನ್ನು ಬಹಿರಂಗಪಡಿಸುತ್ತದೆ.
ಇದೇ ಮಾದರಿಯನ್ನು ದಿಲ್ಲಿಯಲ್ಲಿ ಅರವಿಂದ ಕೇಜ್ರಿವಾಲ್ ಅಳವಡಿಸಿಕೊಂಡಿದ್ದರು. ಇಲ್ಲೂ ಅಬ ಕಾರಿ ನೀತಿಯಲ್ಲಿ ಕೆಲವು ಬದಲಾವಣೆ ಗಳನ್ನು ತರಲು ಬಾರ್ ಮಾಲಕರಿಂದ ಲಂಚ ಕೇಳಲಾಗಿದೆ. ರಾಜ್ಯ ಸರಕಾರಕ್ಕೆ ಈ ವಿಚಾರದಲ್ಲಿ ಮುಚ್ಚಿಡಲು ಏನೂ ಇಲ್ಲದಿದ್ದರೆ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿ ಎಂದು ಆಗ್ರಹಿಸಿದ್ದಾರೆ.
ಹಣ ವಸೂಲಿಗೆ ಸಭೆ: ಕಾಂಗ್ರೆಸ್
ಅಬಕಾರಿ ನೀತಿಯಲ್ಲಿ ಬದಲಾವಣೆ ತರಲು ಬಾರ್ ಮಾಲಕರಿಂದ ಲಂಚ ಪಡೆದುಕೊಳ್ಳುವುದಕ್ಕಾಗಿ ರಾಜ್ಯ ಸರಕಾರ ಸಭೆ ನಡೆಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸೋರಿಕೆಯಾಗಿರುವ ಬಾರ್ ಮಾಲಕರ ಆಡಿಯೋ ಸಹ ಇದನ್ನೇ ಸ್ಪಷ್ಟ ಪಡಿಸುತ್ತಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.