Bidar: ಅಕ್ರಮ ಆಸ್ತಿ: 4 ವರ್ಷ ಶಿಕ್ಷೆ, 25 ಲಕ್ಷ ದಂಡ


Team Udayavani, May 28, 2024, 6:48 PM IST

9-bidar

ಬೀದರ್:‌ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತು ಹಿನ್ನಲೆ ಕಾರಂಜಾ ಯೋಜನೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಜಿಲ್ಲಾ ಸತ್ರ ಹಾಗೂ ವಿಶೇಷ ನ್ಯಾಯಾಲಯ ಲಂಚ ನಿಷೇಧ ಕಾಯ್ದೆಯ ಕಲಂ 13(2)ಕ್ಕೆ 4 ವರ್ಷ ಜೈಲು ಶಿಕ್ಷೆ ಜತೆಗೆ 25 ಲಕ್ಷ ರೂ. ದಂಡ ವಿಧಿಸಿದ್ದು, ದಂಡ ಭರಿಸಲು ತಪ್ಪಿದ್ದಲ್ಲಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ಇಲ್ಲಿನ ಗುರು ನಗರ ಕಾಲೋನಿಯ ನಿವಾಸಿ ಫಿರೋಜುದ್ದೀನ್ ಖಾನ್ ಶಿಕ್ಷೆಗೆ ಒಳಗಾದ ಎಇಇ.

1982 ರಲ್ಲಿ ಸಹಾಯಕ ಅಭಿಯಂತರರಾಗಿ ಸರ್ಕಾರಿ ಸೇವೆಗೆ ಸೇರಿರುವ ಫಿರೋಜುದ್ದೀನ್ ಅವರು ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2008 ರಲ್ಲಿ ಕಾರಂಜಾ ಕಾಲುವೆ ನಿರ್ಮಾಣ ಯೋಜನೆಯ ಹುಮನಾಬಾದ ಕ್ಯಾಂಪ್‌ನಲ್ಲಿ ಎಇಇ ಆಗಿ ಕರ್ತವ್ಯದಲ್ಲಿದಾಗ ಅದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವ ಗೌಪ್ಯ ಮಾಹಿತಿ ಆಧಾರದ ಮೇಲೆ 2008ರ ಫೆ. 6ರಂದು ಲೋಕಾಯುಕ್ತ ಪೊಲೀಸರು ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದರು. ಶೋಧ ನಡೆದ ವೇಳೆ ನಗದು, ಬೆಳ್ಳಿ – ಬಂಗಾರದ ಒಡವೆಗಳು ಮತ್ತು ದಾಖಲೆಗಳನ್ನು ಜಪ್ತಿ ಮಾಡಲಾಗಿತ್ತು.

ಫಿರೋಜುದ್ದೀನ್ ಅವರು ಸರ್ಕಾರಿ ನೌಕರಿಗೆ ಸೇರಿದ 1982 ರಿಂದ 2008 ರವರೆಗೆ ಆದಾಯ, ಸ್ಥಿರಾಸ್ತಿ, ಚರಾಸ್ತಿ ಮತ್ತು ಖರ್ಚು ವೆಚ್ಚಳನ್ನು ಲೆಕ್ಕಾಚಾರ ಮಾಡಿದಾಗ ಅದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಕಂಡು ಬಂದಿದ್ದರಿಂದ ಅಂದಿನ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಟಿ.ಜಿ. ರಾಯ್ಕರ್ ಅವರು ತನಿಖೆ ನಡೆಸಿ, ಅವರ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಜಯ ಕುಮಾರ ಆನಂದ ಶೆಟ್ಟಿ ಪ್ರಕರಣದ ವಿಚಾರಣೆ ಮಾಡಿ, ಆರೋಪಿ ಅದಾಯಕ್ಕಿಂತ ಒಟ್ಟು 6,43,345/-ಗಳ (ಶೇ.20.6) ಹೆಚ್ಚಿನ ಆಕ್ರಮ ಆಸ್ತಿ ಹೊಂದಿರುವುದು ಸಾಬೀತು ಆಗಿರುವುದರಿಂದ ದಂಡ ಮತ್ತು ಶಿಕ್ಷೆ ವಿಧಿಸಿ ತೀರ್ಪನ್ನು ನೀಡಿದ್ದಾರೆ.

ದಾಳಿ ವೇಳೆ ದೊರೆತ ಬಂಗಾರ, ಬೆಳ್ಳಿಯ ಒಡವೆಗಳನ್ನು ಹಾಗೂ ನಗದು ಹಣ ಜಪ್ತಿ ಮಾಡಲು ಆದೇಶಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೇಶವರಾವ ಶ್ರೀಮಾಳೆ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಬಿಜೆಪಿ – ಜೆಡಿಎಸ್‌ ವಿರುದ್ದ ಬೀದರ್‌ ನಲ್ಲಿ ಪ್ರತಿಭಟನೆ

Bidar; ಬಿಜೆಪಿ – ಜೆಡಿಎಸ್‌ ವಿರುದ್ದ ಬೀದರ್‌ ನಲ್ಲಿ ಪ್ರತಿಭಟನೆ

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.