Kaup: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು ಪಲ್ಟಿ
Team Udayavani, May 28, 2024, 8:23 PM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಮೋರಿಗೆ ಢಿಕ್ಕಿ ಹೊಡೆದು, ಪಲ್ಟಿಯಾಗಿ ನಾಲ್ಕು ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಏರ್ಪೋರ್ಟ್ಗೆ ತೆರಳುತ್ತಿದ್ದ ಧ್ರುವ್ ಯಾದವ್, ಸಿದ್ಧಾರ್ಥ್ ಶೆಟ್ಟಿ, ಕೃಷ್ ಅನ್ಸಾರಿ, ಮಹಮ್ಮದ್ ಉಜೈರ್ ಖುರೇಷಿ ಗಾಯಗೊಂಡವರಾಗಿದ್ದು, ಗಾಯಾಳುಗಳ ಪೈಕಿ ಧ್ರುವ್ ಯಾದವ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಕೊಪ್ಪಲಂಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಮೋರಿ, ಅದರ ಪಕ್ಕದ ಕಲ್ಲು ಬಂಡೆಗೆ ಢಿಕ್ಕಿ ಹೊಡೆದಿದ್ದು ಬಳಿಕ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ನಾಲ್ಕು ಮಂದಿಯೂ ರಸ್ತೆಯಲ್ಲಿ ಅಲ್ಲಲ್ಲಿ ಬಿದ್ದಿದ್ದರು. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದರು.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ
Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ
Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ
Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.