Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು


Team Udayavani, May 28, 2024, 9:50 PM IST

21-

ಬಾವಿಗೆ ಬಿದ್ದ ಕೋಳಿಯನ್ನು ರಕ್ಷಿಸಲು ಇಳಿದ ಯುವಕ ಮೇಲಕ್ಕೇರುತ್ತಿದ್ದಾಗ ಬಿದ್ದು ಸಾವು

ಮುಳ್ಳೇರಿಯ: ಬಾವಿಗೆ ಬಿದ್ದ ಕೋಳಿಯನ್ನು ರಕ್ಷಿಸಲೆಂದು ಇಳಿದ ಯುವಕ ಮೇಲಕ್ಕೇರುತ್ತಿದ್ದಾಗ ಆಯ ತಪ್ಪಿ ಬಿದ್ದು ಸಾವಿಗೀಡಾದ ಘಟನೆ ನೆಟ್ಟಣಿಗೆಯಲ್ಲಿ ನಡೆದಿದೆ.

ನೆಟ್ಟಣಿಗೆ ಪಡೈಮೂಲೆ ನಿವಾಸಿ ಸುಂದರ ಅವರ ಪುತ್ರ ಸತೀಶ(30) ಸಾವಿಗೀಡಾದರು.

ನೆಟ್ಟಣಿಗೆ ಕಲ್ಲಗದ ರವಿ ಅವರ ಬಾವಿಗೆ ಮೇ 27 ರಂದು ಸಂಜೆ ಕೋಳಿ ಬಿದ್ದಿತ್ತು. ಅದನ್ನು ಮೇಲಕ್ಕೆತ್ತಲೆಂದು ಸತೀಶ ಹಗ್ಗದ ಮೂಲಕ ಬಾವಿಗೆ ಇಳಿದಿದ್ದರು. ಬಳಿಕ ಮೇಲೇರುತ್ತಿದ್ದಂತೆ ಆಯ ತಪ್ಪಿ ಬಾವಿಗೆ ಬಿದ್ದಿದ್ದು, ಕೂಡಲೇ ಕಾಸರಗೋಡಿನಿಂದ ತಲುಪಿದ ಅಗ್ನಿಶಾಮಕ ದಳ ಮೇಲಕ್ಕೆತ್ತಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.

———————————————————————————–

ಬಸ್‌ನಲ್ಲಿ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 10 ರೂ. ಪತ್ತೆ ; ಕೊಯಿಪ್ಪಾಡಿ ನಿವಾಸಿ ವಶಕ್ಕೆ

ಬದಿಯಡ್ಕ: ಬೆಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಸರಿಯಾದ ದಾಖಲೆ ಪತ್ರಗಳಿಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ. ಯನ್ನು ಅಬಕಾರಿ ತಂಡ ಪತ್ತೆಹಚ್ಚಿದ್ದು, ಈ ಸಂಬಂಧ ಕುಂಬಳೆ ಕೊಯಿಪ್ಪಾಡಿ ಕುಚ್ಯಾಳಂದ ಕೆ.ಅಬ್ದುಲ್‌ ಸಮದ್‌(35)ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.

ಈತನನ್ನು ಹಣ ಸಹಿತ ಆದೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಾಹನ ತಪಾಸಣೆ ಮಾಡುತ್ತಿದ್ದಾಗ ಹಣ ಪತ್ತೆಯಾಯಿತು.

———————————————————————————-

ಮಂಜೇಶ್ವರದ ಚುನಾವಣಾ ತಕರಾರು ಪ್ರಕರಣ : ವಿಚಾರಣೆ ಮುಂದೂಡಿಕೆ

ಕಾಸರಗೋಡು: ಕಳೆದ ಬಾರಿ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಲಂಚ ನೀಡಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ದಾಖಲಾದ ಪ್ರಕರಣದ ವಿಚಾರಣೆಯನ್ನು ಕಾಸರಗೋಡು ಪ್ರಿನ್ಸಿಪಲ್‌ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ ಜುಲೈ 11 ಕ್ಕೆ ಮುಂದೂಡಿದೆ.

ಬಿಜೆಪಿ ಅಭ್ಯರ್ಥಿ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್‌ ಸಹಿತ ಬಿಜೆಪಿಯ ಆರು ಮಂದಿ ನೇತಾರರನ್ನು ಪ್ರಕರಣದಲ್ಲಿ ಸೇರ್ಪಡೆಗೊಳಿಸಲಾಗಿದೆ. ಬಿಎಸ್‌ಪಿ ಅಭ್ಯರ್ಥಿ ಕೆ.ಸುಂದರ ಅವರಿಗೆ ಎರಡು ಲಕ್ಷ ರೂ. ನಗದು ಮತ್ತು ಮೊಬೈಲ್‌ ಫೋನ್‌ ನೀಡಿ ಅವರ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಮಾಡಲಾಯಿತೆಂದು ಆರೋಪಿಸಿ ನೀಡಲಾದ ದೂರಿನಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಆ ಬಳಿಕ ಕ್ರೈಂಬ್ರಾಂಚ್‌ ವಿಭಾಗ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

———————————————————————————–

ಹೊಳೆಯಲ್ಲಿ ಮುಳುಗಿ ಬಾಲಕನ ಸಾವು

ಕಾಸರಗೋಡು: ಅರಯಿ ಹೊಳೆಯ ಕಾರ್ತಿಕದಲ್ಲಿ ಸ್ನಾನ ಮಾಡಲು ಇಳಿದ ಕಾಂಞಂಗಾಡ್‌ ಬಾಂಗೋಡು ಹೊಸ್‌ ಅರಯಿಲ್‌ ವಟ್ಟತ್ತೋಡ್‌ನ‌ ಅಬ್ದುಲ್‌ ಕುಂಞಿ ಬಿ.ಕೆ. ಅವರ ಪುತ್ರ ಮುಹಮ್ಮನ್‌ ಸಿನಾನ್‌(16) ಸಾವಿಗೀಡಾದರು. ಜೊತೆಯಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Kasaragod ಬೈಕ್‌ ಅಪಘಾತ : ಗಾಯಾಳು ಯುವಕ ಸಾವು

Madikeri ವಿರಾಜಪೇಟೆ: ಡೆಂಗ್ಯೂ ಪ್ರಕರಣ ಹೆಚ್ಚಳ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Madikeri ಸೆ.15ರ ವರೆಗೆ “ಗಾಜಿನ ಸೇತುವೆ’ ವೀಕ್ಷಣೆ ಸ್ಥಗಿತ : ಜಿಲ್ಲಾಧಿಕಾರಿ ಸೂಚನೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.