![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 28, 2024, 9:26 PM IST
ಬೆಂಗಳೂರು: ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿಎಂ, ಡಿಸಿಎಂ ಇಬ್ಬರೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಆಗ್ರಹಿಸಿದ್ದಾರೆ.
ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಪರಮೇಶ್ವರ್, ಸಿಎಂ ಮತ್ತು ಡಿಸಿಎಂ ಇಬ್ಬರೂ ಜವಾಬ್ದಾರಿ ಸ್ಥಾನದಲ್ಲಿದ್ದಾರೆ. ನಮ್ಮೆಲ್ಲಾ ಹಿರಿಯರನ್ನು ಸಂಪರ್ಕಿಸಿದರೆ ಸೂಕ್ತ. ಅವರಿಬ್ಬರೇ ತೀರ್ಮಾನಿಸಿದರೆ ಅದು ನನ್ನ ದೃಷ್ಟಿಯಲ್ಲಿ ಸರಿ ಕಾಣುವುದಿಲ್ಲ ಎಂದರು.
ಹಿರಿಯರು, ಅನುಭವಿಗಳು, ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ಕೆಲಸ ಮಾಡಿ, ಜನಸಂಪರ್ಕದಲ್ಲಿ ಇರುವವರ ಬಳಿ ಯಾರಿಗೆ ಟಿಕೆಟ್ ಕೊಟ್ಟರೆ ಪಕ್ಷಕ್ಕೆ ಅನುಕೂಲ ಆಗುತ್ತದೆ ಎಂಬುದನ್ನು ಚರ್ಚಿಸಬೇಕು. ನಾನೊಬ್ಬನೇ ಎಂದಲ್ಲ, ನನ್ನಂತೆಯೇ ಹಿರಿಯರು ಇದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿದ್ದವರು, ಅನೇಕ ಸ್ಥಾನಮಾನಗಳ ಅನುಭವ ಇರುವವರ ಸಲಹೆ-ಸೂಚನೆ ಪಡೆಯುವುದು ಬಹಳ ಒಳ್ಳೆಯದು. ಇದು ನನ್ನ ಅಭಿಪ್ರಾಯ.
ಏಕಾಏಕಿಯಾಗಿ ಇಬ್ಬರೇ ಕುಳಿತು ತೀರ್ಮಾನ ಮಾಡಬಾರದು. ಜಿಲ್ಲಾವಾರು, ಪ್ರದೇಶವಾರು, ಪಕ್ಷ ಕಟ್ಟಲು ಸಹಾಯ ಮಾಡಿದವರು ಯಾರು? ಯಾವ ಸಮುದಾಯ ಪಕ್ಷದ ಜತೆಗೆ ನಿಂತಿದೆ ಎಂಬುದನ್ನೆಲ್ಲ ಗುರುತಿಸಬೇಕು ಎಂದು ಒತ್ತಾಯಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.