ಮಳೆಗಾಲದ ಸಂಭಾವ್ಯ ಸವಾಲು ಎದುರಿಸಲು ಮೆಸ್ಕಾಂ ಇಲಾಖೆ ಸಜ್ಜು
800 ಮಂದಿಯ ವಿಶೇಷ ಕಾರ್ಯಪಡೆ, 53 ವಾಹನ
Team Udayavani, May 29, 2024, 6:35 AM IST
ಮಂಗಳೂರು: ವಿದ್ಯುತ್ಗೆ ಸಂಬಂಧಿಸಿದಂತೆ ಮಳೆಗಾಲದ ಸಂಭಾವ್ಯ ಸವಾಲು ಗಳನ್ನು ಎದುರಿಸಲು ಮೆಸ್ಕಾಂ ಸನ್ನದ್ಧವಾಗಿದ್ದು, ಸುಗಮ ಮತ್ತು ಸುಲಲಿತ ಸೇವೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಿ. ಪದ್ಮಾವತಿ ತಿಳಿಸಿದ್ದಾರೆ.
ವಿದ್ಯುತ್ ಸಂಪರ್ಕ ಹಾಗೂ ಸರಬರಾಜು ವ್ಯವಸ್ಥೆ ನಿರ್ವಹಣೆಯಲ್ಲಿರುವ ಲೋಪ ಗಳನ್ನು ಗುರುತಿಸಿ ತ್ವರಿತವಾಗಿ ದುರಸ್ತಿಗೊಳಿಸಲು ಕ್ರಮ ಕೈಗೊಳ್ಳುವಂತೆ ಮೆಸ್ಕಾಂನ ಎಲ್ಲ ಮುಖ್ಯ ಎಂಜಿನಿಯರ್, ಅಧೀಕ್ಷಕ ಎಂಜಿನಿಯರ್ಗಳು, ಕಾರ್ಯನಿರ್ವಾಹಕ ಎಂಜಿನಿಯರ್ಗಳಿಗೆ ಸೂಚಿಸಲಾಗಿದೆ. ವಿದ್ಯುತ್ ಸರಬರಾಜಿಗೆ ಅಚಡಣೆಯಾಗುವ ಮತ್ತು ಅಪಾಯಕಾರಿಯಾಗಿರುವ ಮರ/ಕೊಂಬೆಗಳನ್ನು ಕತ್ತರಿಸುವ ಕೆಲಸವನ್ನು ಈಗಾಗಲೇ ಮಾಡಲಾಗಿದೆ. ಮಳೆಗಾಲದ ತುರ್ತು ನಿರ್ವಹಣೆ ಕೆಲಸಗಳನ್ನು ನಿರ್ವಹಿಸಲು ಅನುಕೂಲವಾಗುವಂತೆ ವಿದ್ಯುತ್ ಕಂಬಗಳು, ತಂತಿಗಳು, ಪರಿವರ್ತಕಗಳು ಸೇರಿದಂತೆ ಸಲಕರಣೆಗಳನ್ನು ಮೆಸ್ಕಾಂನ ಎಲ್ಲ ವಿಭಾಗಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇರಿಸಲಾಗಿದೆ ಎಂದು ವಿವರಿಸಿದ್ದಾರೆ.
800 ಮಂದಿಯ ಕಾರ್ಯಪಡೆ
ವಿಭಾಗವಾರು ತುರ್ತು ನಿರ್ವಹಣ ಕೆಲಸಗಳನ್ನು ನಿರ್ವಹಿ ಸಲು ಮೆಸ್ಕಾಂ ವ್ಯಾಪ್ತಿಯ 4 ಜಿಲ್ಲೆ ಗಳಿಗೆ ಒಟ್ಟು 800 ಮಂದಿಯ ಕಾರ್ಯಪಡೆ ರಚಿಸಲಾಗಿದೆ. 53 ವಾಹನಗಳನ್ನು ಹೆಚ್ಚುವರಿಯಾಗಿ ವ್ಯವಸ್ಥೆಗೊಳಿಸಲಾಗಿದೆ. ತುರ್ತು ಕಾರ್ಯಾಚರಣೆಗೆ ಸಾಕಷ್ಟು ಸಂಖ್ಯೆ ಯಲ್ಲಿ ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದೆ. ವಿದ್ಯುತ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ, ಸರಬರಾಜು ಮಾರ್ಗ ದಲ್ಲಿ ಯಾವುದೇ ಅಪಾಯ, ಅವಘಡಗಳಾದಲ್ಲಿ ಸಂಪರ್ಕಿಸ ಬೇಕಾದ ದೂರವಾಣಿ ಸಂಖ್ಯೆಗಳನ್ನು ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟಿಸಲಾಗಿದೆ. ಇದಲ್ಲದೆ ಮೆಸ್ಕಾಂ ಸಹಾಯವಾಣಿ 1912ನ್ನು ಕೂಡ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಮುಂಗಾರು ಪೂರ್ವದ ಗಾಳಿ ಮಳೆಗೆ ಈಗಾಗಲೇ ಮೆಸ್ಕಾಂ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ಕಂಬಗಳು, ತಂತಿಗಳು, ಪರಿವರ್ತಕಗಳು ಸೇರಿದಂತೆ ಮೆಸ್ಕಾಂನ ಆಸ್ತಿಗಳಿಗೆ ಹಾನಿ ಸಂಭವಿಸಿದ್ದು ಇವುಗಳನ್ನು ಸರಿಪಡಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.