ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


Team Udayavani, May 28, 2024, 11:55 PM IST

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಬೆಳ್ಮಣ್‌: ನಂದಿಕೂರಿನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್‌ ಪೂರೈಕೆಗೆ ಟವರ್‌ ನಿರ್ಮಾಣದ ಕಾಮಗಾರಿ ಇನ್ನಾ ಗ್ರಾಮದಲ್ಲಿ ಜನವಿರೋಧದ ಮಧ್ಯೆ ಆರಂಭಗೊಂಡಿದೆ. ಮಂಗಳವಾರ ಯಾವುದೇ ಪೂರ್ವ ಸೂಚನೆ ಇಲ್ಲದೆ ಟವರ್‌ ನಿರ್ಮಿಸಲು ಗುತ್ತಿಗೆದಾರರು ಖಾಸಗಿ ಕೃಷಿ ಜಮೀನಿಗೆ ಜೆಸಿಬಿ ನುಗ್ಗಿಸಿದ್ದು ಸ್ಥಳೀಯರ ಭಾರೀ ಆಕ್ರೋಶಕ್ಕೆ ಕಾರಣವಾಯಿತು.

300 ಕ್ಕೂ ಅಧಿಕ ಮಂದಿ ಸ್ಥಳದಲ್ಲಿ ಸೇರಿದ್ದರಲ್ಲದೇ, “ಕೃಷಿ ಭೂಮಿಯಲ್ಲಿ ಟವರ್‌ ನಿರ್ಮಾ ಣಕ್ಕೆ ಅವಕಾಶ ನೀಡಿದ್ದುಯಾರು’ ಎಂದು ಪ್ರಶ್ನಿಸಿದರಲ್ಲದೆ ಯಾವುದೇ ಕಾರಣಕ್ಕೂ ಟವರ್‌ ನಿರ್ಮಾಣಕ್ಕೆ ಬಿಡೆವು ಎಂದರು. ಜಿಲ್ಲಾಧಿಕಾರಿ ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಆದೇಶ ಹೊರಡಿಸುವುದಲ್ಲ. ಖುದ್ದಾಗಿ ಸ್ಥಳಕ್ಕೆ ಬಂದು ನೋಡಲಿ. ಜನರ ವಿರೋ ಧದ ಮಧ್ಯೆ ಕಾಮ ಗಾರಿಯನ್ನು ಮುಂದು ವರಿಸಿದರೆ ಜಿಲ್ಲಾಧಿಕಾರಿಗಳ ವಿರುದ್ಧವೇ ಹೋರಾಟ ಅನಿವಾರ್ಯ ಎಂದರು.

ಅಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ನಮಗೆ ಪರಿಹಾರದ ಮೊತ್ತ ದುಪ್ಪಟ್ಟು ಕೊಡಿ ಎಂದು ಕೇಳುತ್ತಿಲ್ಲ. ಬಡಪಾಯಿ ರೈತರ ಜಮೀನನ್ನು ಹೊರತುಪಡಿಸಿ ಬೇರೆಡೆ ಟವರ್‌ ನಿರ್ಮಿಸಿ ಎಂದು ಮಾಡಿದ ಮನವಿಗೆ ಸ್ಪಂದಿಸದೇ ಈಗ ಟವರ್‌ ನಿರ್ಮಾಣಕ್ಕೆ ಅವಕಾಶ ಕೊಟ್ಟ ದ್ದು ಸರಿಯೇ ಎಂದು ಪ್ರಶ್ನಿಸಿದರು.

ಹಲವು ಕುಟುಂಬಗಳಿಗೆತೊಂದರೆ
ಇನ್ನಾ ಗ್ರಾಮದ 8 ಕಡೆ ಟವರ್‌ ನಿರ್ಮಾಣಕ್ಕೆ ಸರಕಾರಿ ಮತ್ತು ಖಾಸಗಿ ಜಾಗದಲ್ಲಿ ಸ್ಥಳ ಗುರುತಿಸಲಾಗಿದೆ. ಖಾಸಗಿ ಜಾಗದ ಮಾಲಕರಿಗೆ ನೋಟಿಸ್‌ ನೀಡದೆ ಕಾಮಗಾರಿ ನಡೆಸಲಾಗುತ್ತಿದೆ. ವಿದ್ಯುತ್‌ ಲೈನ್‌ ಹಾದು ಹೋಗುವ ಪ್ರದೇಶದ 250 ಕ್ಕೂ ಅಧಿಕ ಕೃಷಿಕ ಕುಟುಂಬಗಳಿಗೆ ತೊಂದರೆಯಾಗಲಿದೆ ಎಂದು ಜಿ.ಪಂ. ಮಾಜಿ ಸದಸ್ಯೆ ರೇಷ್ಮಾ ಉದಯ ಶೆಟ್ಟಿ ಆರೋಪಿಸಿದರು.ಇನ್ನಾ ಗ್ರಾ.ಪಂ. ಸದಸ್ಯ ದೀಪಕ್‌ ಕೋಟ್ಯಾನ್‌, ಜಿಲ್ಲಾ ಧಿಕಾರಿಗಳಿಗೆ ಮನವಿ ಮಾಡಿದ‌ರೂ ಪದೇ ಪದೇ ಟವರ್‌ ನಿರ್ಮಾಣಕ್ಕೆ ಆದೇಶಿ ಸುತ್ತಿದ್ದಾರೆ. ಉಗ್ರ ಹೋರಾಟ ಅನಿವಾರ್ಯ ಎಂದರು. ಪಡುಬಿದ್ರಿ ಪೊಲೀಸ್‌ ಠಾಣಾಧಿಕಾರಿ ಪ್ರಸನ್ನ, ಗ್ರಾಮಕರಣಿಕ ಹನುಮಂತಪ್ಪ, ಗ್ರಾಮಸ್ಥರಾದ ಅಮರನಾಥ್‌ ಶೆಟ್ಟಿ, ಗ್ರಾ.ಪಂ. ಸದಸ್ಯ ಚಂದ್ರಹಾಸ ಶೆಟ್ಟಿ ಮತ್ತಿತರರು ಸ್ಥಳದಲ್ಲಿದ್ದರು.

ನೋಟಿಸ್‌ ನೀಡಿ 7 ದಿನ ಗಳ ಕಾಲಾ ವಕಾಶ ನೀಡಲು ಕಂಪೆನಿಗೆ ತಿಳಿಸಿದ್ದೇವೆ. ಬಳಿಕ ಕಾಮಗಾರಿ ಮುಂದುವರಿಯಲಿದೆ.
– ನರಸಪ್ಪ, ಕಾರ್ಕಳ ತಹಶೀಲ್ದಾರ್‌

 

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

Udupi: ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ಪುನರಾರಂಭ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.