Post Office: 8000 ಜಮೆ ವದಂತಿ; ಅಂಚೆ ಕಚೇರಿಗೆ ಜನ ದೌಡು
Team Udayavani, May 29, 2024, 11:12 AM IST
ಬೆಂಗಳೂರು: ಅಂಚೆ ಇಲಾಖೆಯು ಪ್ರತಿ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ಖಾತೆಗೆ 8,000 ರೂ. ಹಣ ಜಮೆ ಮಾಡಲಿದೆ ಎನ್ನುವ ಸುಳ್ಳು ವದಂತಿ ನಂಬಿದ ಜನರು ಅಂಚೆ ಕಚೇರಿಗಳಿಗೆ ತೆರಳಿ, ಐಪಿಪಿಬಿ ಖಾತೆ ತೆರೆಯಲು ಮುಂದಾಗುತ್ತಿದ್ದಾರೆ.
ಐಪಿಪಿಬಿ ಖಾತೆಯ ಮೂಲಕ ಗ್ರಾಹಕರು ತಮ್ಮ ಖಾತೆಯಿಂದ ಆನ್ಲೈನ್ ಮೂಲಕ ನೇರವಾಗಿ ವಿದ್ಯುತ್ ಬಿಲ್ ಪಾವತಿ, ಮೊಬೈಲ್ ರೀಚಾರ್ಜ್, ನೇರ ಹಣ ವರ್ಗಾವಣೆ ಸೇರಿದಂತೆ ಸೌಲಭ್ಯಗಳಿವೆ. ಜತೆಗೆ ಸರ್ಕಾರದ ವಿವಿಧ ಯೋಜನೆಗಳು ಈ ಖಾತೆಯೊಂದಿಗೆ ಜೋಡಿಸಲಾಗಿದೆ. ಆದರೆ ಇದೀಗ ಅಂಚೆ ಕಚೇರಿಯ ಐಪಿಪಿಬಿ ಖಾತೆಯಿದ್ದರೆ ಮಾಸಿಕ 8000 ರೂ. ಪಾವತಿ ಯಾಗಲಿದೆ ಎನ್ನುವ ವದಂತಿ ಸೃಷ್ಟಿಯಾಗಿದ್ದು, ಕಳೆದ 10 ದಿನಗಳಿಂದ ಬೆಂಗಳೂರು ಜಿಪಿಒ ಕಚೇರಿಯಲ್ಲಿ ಐಪಿಪಿಬಿ ಖಾತೆ ತೆರೆಯಲು ಮುಂಜಾನೆ 5 ಗಂಟೆಗೆ ಬಂದು ಸರದಿ ಸಾಲಿನಲ್ಲಿ ನಿಂತು ಕಾಯುತ್ತಿರುವ ದೃಶ್ಯ ಕಂಡು ಬರುತ್ತಿದೆ.
ಜನರ ನಿಯಂತ್ರಣಕ್ಕೆ ಅಂಚೆ ಇಲಾಖೆ ಅಧಿಕಾರಿಗಳು ಪೊಲೀಸರ ಸಹಾಯ ಪಡೆದುಕೊಳ್ಳುತ್ತಿದ್ದಾರೆ. ಕಚೇರಿ ಮುಂದೆ ವದಂತಿ ಬಗ್ಗೆ ಸ್ಪಷ್ಟನೆ ನೀಡಿದರೂ, ಜನರು ಮಾತ್ರ ಖಾತೆ ಮಾಡುವುದರಲ್ಲಿ ಮುಳುಗಿ ಹೋಗಿದ್ದಾರೆ.
ಪ್ರತಿದಿನ 800 ಅರ್ಜಿ ಸಲ್ಲಿಕೆ:
ಬೆಂಗಳೂರು ಅಂಚೆ ಕಚೇರಿಯಲ್ಲಿ ಈ ಹಿಂದೆ ಪ್ರತಿದಿನ 50 ರಿಂದ 60 ಐಪಿಪಿಬಿ ಖಾತೆಯನ್ನು ತೆರೆಯಲಾಗುತ್ತಿತ್ತು. ಆದರೆ ಇದೀಗ 700 ರಿಂದ 800 ಖಾತೆಗಳನ್ನು ತೆರೆಯಲು ಅರ್ಜಿ ಸ್ವೀಕಾರವಾಗುತ್ತಿದೆ. ಇದುವರೆಗೆ ಸುಮಾರು 8,000 ಅರ್ಜಿ ಸ್ವೀಕರಿಸಲಾಗಿದೆ. ಸುಮಾರು 7 ಮಂದಿ ಪೋಸ್ಟ್ ಮಾಸ್ಟರ್ ಹೊಸ ಖಾತೆ ತೆರೆ ಯುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸು ತ್ತಿದ್ದಾರೆ. ಜನ ದಟ್ಟಣೆಯನ್ನು ಕಡಿಮೆಗೊಳಿ ಸಲು ಅಂಚೆ ಸಿಬ್ಬಂದಿ ಖಾತೆ ತೆರೆಯಲು ಟೋಕನ್ ವ್ಯವಸ್ಥೆ ಜಾರಿಗೊಳಿಸಿದ್ದಾರೆ. ಬೆಂಗಳೂರು ಸೇರಿದಂತೆ ಕಡೆಯಲ್ಲಿ ಪೋಸ್ಟ್ ಮಾಸ್ಟರ್ ಅವರೇ ಮನೆಗಳಿಗೆ ತೆರಳಿ, ಐಪಿಪಿಬಿ ಖಾತೆಯನ್ನು ತೆರೆಯಲು ಮುಂದಾಗಿದ್ದಾರೆ.
ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ತೆರೆದರೆ ಮಾಸಿಕ 8,000 ಜಮೆಯಾಗುತ್ತದೆ ಎನ್ನುವ ವಂದತಿ ನಂಬಿ ಜನರು ಅಂಚೆ ಕಚೇರಿಯತ್ತ ಮುಗಿ ಬೀಳುತ್ತಿದ್ದಾರೆ. ಗ್ರಾಹಕರಿಗೆ ಈ ಬಗ್ಗೆ ಮಾಹಿತಿ ನೀಡಿದರೂ ಸಹ ಖಾತೆ ತೆರೆಯಲು ಮುಂದಾಗುತ್ತಿದ್ದಾರೆ. -ಎಚ್.ಎಂ. ಮಂಜೇಶ್, ಮುಖ್ಯ ಪೋಸ್ಟ್ ಮಾಸ್ಟರ್, ಬೆಂಗಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.