![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
Bengaluru: ಟ್ರಕ್ ಟ್ರಮಿನಲ್ನಲ್ಲಿ 47 ಕೋಟಿ ರೂ. ಅಕ್ರಮ; ಮಾಜಿ ಎಂಡಿ ಸಿಐಡಿ ವಶಕ್ಕೆ
Team Udayavani, May 29, 2024, 11:17 AM IST
![Bengaluru: ಟ್ರಕ್ ಟ್ರಮಿನಲ್ನಲ್ಲಿ 47 ಕೋಟಿ ರೂ. ಅಕ್ರಮ; ಮಾಜಿ ಎಂಡಿ ಸಿಐಡಿ ವಶಕ್ಕೆ](https://www.udayavani.com/wp-content/uploads/2024/05/5-23-620x372.jpg)
ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟ್ರಮಿನಲ್ನಲ್ಲಿ ನಡೆದಿದ್ದ 47.10 ಕೋಟಿ ರೂ. ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಡಿಡಿಯು ಟಿಟಿಎಲ್ನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಎಸ್. ಶಂಕರಪ್ಪ ಅವರನ್ನು 2 ದಿನಗಳ ಕಾಲ ಸಿಐಡಿ ವಶಕ್ಕೆ ಪಡೆದುಕೊಂಡಿದೆ.
ಸೋಮವಾರ ಶಂಕರಪ್ಪನನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು, ಮಂಗಳವಾರ ಕೋರ್ಟ್ ಗೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗೆ ಎರಡು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಣಿಜ್ಯ ಪ್ರಚಾರ ಶಾಖೆಯ ಉಪನಿರ್ದೇಶಕರಾಗಿರುವ ಎಸ್.ಶಂಕರಪ್ಪ, ಈ ಹಿಂದೆ ಡಿಡಿಯುಟಿಟಿಎಲ್ನಲ್ಲಿ ಎಂ.ಡಿ ಆಗಿ ಕೆಲಸ ಮಾಡಿದ್ದರು. ಈ ಅಧಿಕಾರದ ಅವಧಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ 47.10 ಕೋಟಿ ರೂ. ಅಕ್ರಮ ನಡೆದಿತ್ತು. ಈ ಸಂಬಂಧ ಸಾಕ್ಷಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದರು. ಡಿಡಿಯುಟಿಟಿಎಲ್ನಲ್ಲಿ 2021ರಿಂದ 2023ರ ಅವಧಿಯಲ್ಲಿ ನಡೆದಿದ್ದ ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟೆಂಬರ್ 23ರಂದು ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.
ನಕಲಿ ದಾಖಲೆ ಸೃಷ್ಟಿ?: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ನಲ್ಲಿ 2021ರ ಅ. 25ರಂದು 194ನೇ ನಿರ್ದೇಶಕ ಮಂಡಳಿ ಸಭೆ ನಡೆಸಲಾಗಿತ್ತು. ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಹಾಗೂ ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು. ಟ್ರಕ್ ಟರ್ಮಿನಲ್ಗಳ ದುರಸ್ತಿ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ತುರ್ತಾಗಿ ತುಂಡು ಗುತ್ತಿಗೆ ನೀಡುವ ಬಗ್ಗೆ ಚರ್ಚಿಸಲಾಗಿತ್ತು. 10 ಕೋಟಿ ರೂ.ವರೆಗೆ ತುಂಡು ಗುತ್ತಿಗೆ ನೀಡಲು ಅಕ್ರಮವಾಗಿ ಅನುಮೋದನಾ ನಿರ್ಣಯ ಮಾಡಲಾಗಿತ್ತು. ಕಾಮಗಾರಿ ನಡೆಯದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆಯಲಾಗಿತ್ತು ಎಂದು ಸಿಐಡಿ ಮೂಲಗಳು ತಿಳಿಸಿವೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಡಿಯುಟಿಟಿಎಲ್ ಕಚೇರಿ ಹಾಗೂ ಹಲವರ ಮನೆಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿದ್ದ ಸಿಐಡಿ ಅಧಿಕಾರಿಗಳು, 600ಕ್ಕೂ ಹೆಚ್ಚು ದಾಖಲೆಗಳನ್ನು ಜಪ್ತಿ, ಪರಿಶೀಲನೆ ನಡೆಸಿದ್ದರು.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-150x79.jpg)
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.