Mangaluru: ಆಸ್ಪತ್ರೆಯಲ್ಲೇ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ! ಜಿಮ್ ಟ್ರೈನರ್ ಬಂಧನ
Team Udayavani, May 29, 2024, 9:02 PM IST
ಮಂಗಳೂರು: ನಗರದ ಆಸ್ಪತ್ರೆಗಳಲ್ಲೇ ವಿವಾಹಿತ ಮಹಿಳೆಯನ್ನು ಅತ್ಯಾಚಾರ ಎಸಗಿದ ವಿಲಕ್ಷಣ ಪ್ರಕರಣ ವರದಿಯಾಗಿದೆ.
ಕಾಸರಗೋಡು ಮೂಲದ ಮಹಿಳೆ ಚಿಕಿತ್ಸೆಗೆಂದು ಬರುವಾಗ ಆಕೆಯ ಜೊತೆ ಬಂದ ಪರಿಚಿತನೇ ಆಸ್ಪತ್ರೆಯಲ್ಲಿ ಹಾಗೂ ಆ ಬಳಿಕ ವಸತಿಗೃಹಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ.
ಆರೋಪಿ ಕೇರಳದ ಹೊಸದುರ್ಗ ಪುಲ್ಲೂರು ಗ್ರಾಮದ ಸುಜಿತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆ ಕಾಸರಗೋಡಿನಲ್ಲಿ ಜಿಮ್ಗೆ ಹೋಗುತ್ತಿದ್ದು, ಜಿಮ್ ಟ್ರೈನರ್ ಆಗಿರುವ ಸುಜಿತ್ ಪರಿಚಯವಾಗಿತ್ತು. ಮಹಿಳೆಗೆ ಫಿಸ್ತುಲ ಕಾಯಿಲೆಯಿದ್ದು ಚಿಕಿತ್ಸೆಗೆಂದು ನಗರದ ಆಸ್ಪತ್ರೆಗೆ ಕಳೆದ ಮಾರ್ಚ್ ತಿಂಗಳಲ್ಲಿ ಬಂದು ದಾಖಲಾಗಿದ್ದರು. ಅಲ್ಲಿ ರಾತ್ರಿ ಮಹಿಳೆಯ ಒಪ್ಪಿಗೆಯಿಲ್ಲದೆ ಸುಜಿತ್ ಅತ್ಯಾಚಾರ ಎಸಗಿದ್ದಲ್ಲದೆ ನಗ್ನ ಫೂಟೊಗಳನ್ನೂ ತೆಗೆದಿದ್ದ. ಬಳಿಕ ಏಪ್ರಿಲ್ ತಿಂಗಳಲ್ಲಿ ನಗ್ನ ಫೂಟೊಗಳನ್ನು ತೋರಿಸಿ, ಮಂಗಳೂರಿಗೆ ಬರುವಂತೆ ಒತ್ತಾಯಿಸಿ ಕರೆತಂದಿದ್ದ. ನಾಲ್ಕು ದಿನಗಳ ಕಾಲ ನಗರದ ಹೋಟೆಲ್ನಲ್ಲಿ ಬೆದರಿಸಿ ಅತ್ಯಾಚಾರ ಮಾಡಿ ಫೂಟೊ ತೆಗೆದಿದ್ದ.
ಮಹಿಳೆಗೆ ಫುಡ್ ಪಾಯ್ಸನ್ ಆಗಿದ್ದು ಆ ಬಳಿಕ ನಗರದ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ಆಗಲೂ ಅಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದಾನೆ.
ಇದರಿಂದ ನೊಂದ ಮಹಿಳೆ ಕದ್ರಿ ಠಾಣೆಗೆ ದೂರು ನೀಡಿದ್ದು, ಕಲಂ 376, 506 ಹಾಗೂ ಐಪಿಸಿ 149ರಂತೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ: Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.