Mahalingapura: ಅಕ್ರಮ ಭ್ರೂಣಹತ್ಯೆ ಪ್ರಕರಣ: ಮೂವರ ಬಂಧನ, ಏಳು ಜನರ ವಿರುದ್ಧ ಪ್ರಕರಣ ದಾಖಲು


Team Udayavani, May 29, 2024, 10:28 PM IST

Mahalingapura: ಅಕ್ರಮ ಭ್ರೂಣಹತ್ಯೆ ಪ್ರಕರಣ: ಮೂವರ ಬಂಧನ, ಏಳು ಜನರ ವಿರುದ್ಧ ಪ್ರಕರಣ ದಾಖಲು

ಮಹಾಲಿಂಗಪುರ: ಮನೆಯಲ್ಲಿಯೇ ಅಕ್ರಮವಾಗಿ ಭ್ರೂಣಹತ್ಯೆ ಮಾಡುತ್ತಿದ್ದ ಮಹಾಲಿಂಗಪುರದ ಮಹಿಳೆ ಹಾಗೂ ಭ್ರೂಣಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮಹಾರಾಷ್ಟ್ರದ ಇಬ್ಬರು ಸೇರಿದಂತೆ ಮೂವರನ್ನು ಬುಧವಾರ ಮಹಾಲಿಂಗಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಹಾಲಿಂಗಪುರ ಪಟ್ಟಣದ ಜಯಲಕ್ಷ್ಮೀ ನಗರದ ಕವಿತಾ ಬಾಡನವರ, ಮಹಾರಾಷ್ಟದ ಸಾಂಗಲಿ ಜಿಲ್ಲೆಯ ದೂದ್‌ಗಾಂವದ ವಿಜಯ ಸಂಜಯ ಗೌಳಿ ಕುಪ್ಪವಾಡದ ಡಾ.ಮಾರುತಿ ಬಾಬಸೋ ಖರಾತ ಬಂತ ಆರೋಪಿಗಳು.

ಘಟನೆ ವಿವಿರ:
ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಸಂಜಯ ಗೌಳಿ, ಸಂಗೀತಾ ಗೌಳಿ, ವಿಜಯ ಗೌಳಿ, ಡಾ.ಮಾರುತಿ ಖರಾತ, ಅಥಣಿಯ ರಾಮಾನಂದ ನಗರದ ಡಾ.ಕೊತ್ವಾಲೆ, ಮಹಾಲಿಂಗಪುರದ ಕವಿತಾ ಬಾಡನವರ, ಒಬ್ಬ ಸೋನೋಗ್ರಾಫರ್ ಸೇರಿದಂತೆ ಏಳು ಜನರ ವಿರುದ್ದ ಮಹಾರಾಷ್ಟ್ರದ ಸಾಂಗಲಿ ಹಾಗೂ ಮಹಾಲಿಂಗಪುರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾದ ಏಳು ಜನರು ಸಹಕಾರದಿಂದ ಮಹಾಲಿಂಗಪುರದ ಕವಿತಾ ಬಾಡನವರ ಮನೆಯಲ್ಲಿ ಮೇ. 27 ರ ರಾತ್ರಿ 11ಕ್ಕೆ ಮಹಾರಾಷ್ಟ್ರ ಮೂಲದ ಮಹಿಳೆ ಸೋನಾಲಿ ಸಚಿನ ಕದಂ ಎಂಬ ಮಹಿಳೆಯ ಗರ್ಭಪಾತ ಮಾಡಿದ್ದಾರೆ. ಈ ಮಹಿಳೆಗೆ ಮೊದಲೆರಡು ಹೆಣ್ಣು ಮಕ್ಕಳಿದ್ದು, 3ನೇ ಮಗು ಹೆಣ್ಣು ಎಂದು ಸಾಂಗಲಿಯಲ್ಲಿ ಸ್ಕ್ಯಾನಿಂಗ್ ಮಾಡಿಸಿದಾಗ ಗೋತ್ತಾಗಿ ಮಹಾಲಿಂಗಪುರದ ಕವಿತಾ ಬಾಡನವರ ಬಳಿ ಬಂದಿದ್ದಾರೆ.

ಗರ್ಭಪಾತ ಮಾಡಿದ ಒಂದು ಗಂಟೆಯಲ್ಲಿ ಮಹಿಳೆಯು ತೀವೃರಕ್ತಸ್ರಾವವಾಗಿ ಮೃತಪಟ್ಟಿದ್ದಾಳೆ. ಮರಳಿ ಸಾಂಗಲಿಗೆ ಹೋಗುವಾಗ ಗಡಿಚೆಕ್‌ಪೋಸ್ಟ್ನಲ್ಲಿ ಮಹಾರಾಷ್ಟ್ರ ದ ಸಾಂಗಲಿ ಪೊಲೀಸರಿಗೆ ಸಿಕ್ಕಿದ್ದರಿಂದ, ಸಾಂಗಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆಗೆ ವರ್ಗಾವಣೆ :
ಬುಧವಾರ ಸಾಂಗಲಿ ಪೊಲೀಸರು ಬಾಗಲಕೋಟೆಯ ಎಸ್‌ಪಿ ಆಫೀಸಗೆ ತೆರಳಿ ಭ್ರೂಣಹತ್ಯೆ ಪ್ರಕರಣ ಮಾಹಿತಿ ನೀಡಿದ್ದಾರೆ. ಎಸ್‌ಪಿ ಅವರು ನೀಡಿದ ಮಾಹಿತಿಯಂತೆ ಸ್ಥಳೀಯ ಠಾಣಾಧಿಕಾರಿ ಪ್ರವೀಣ ಬೀಳಗಿ ಹಾಗೂ ಪೊಲೀಸರು ಪಟ್ಟಣದ ಕವಿತಾ ಬಾಡನವರ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರು.

ಅಧಿಕಾರಿಗಳಿಂದ ಮನೆ ಮೇಲೆ ದಾಳಿ :
ಪ್ರಕರಣದ ವಿಷಯ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಅಕಾರಿ ಅರವಿಂದ ಪಟ್ಟಣಶೆಟ್ಟಿ, ಮುಧೋಳ ಟಿಎಚ್‌ಓ ವೆಂಕಟೇಶ ಮಲಘಾಣ, ರಬಕವಿ-ಬನಹಟ್ಟಿ ತಹಶೀಲ್ದಾರ ಗಿರೀಶ ಸ್ವಾದಿ, ಬನಹಟ್ಟಿ ಸಿಪಿಆಯ್ ಸಂಜೀವ ಬಳಗಾರ, ಪಿಎಸ್‌ಆಯ್ ಪ್ರವೀಣ ಬೀಳಗಿ ಅವರು ಕವಿತಾ ಬಾಡನವರ ಮನೆಯ ಮೇಲೆ ದಾಳಿ ನಡೆಸಿದಾಗ ಮನೆಯಲ್ಲಿಯೇ ಗರ್ಭಪಾತ ಮಾಡಲು ಬಳಸುತ್ತಿದ್ದ ವೈದ್ಯಕೀಯ ಪರಿಕರಗಳು, ಔಷಧಿ ಮಾತ್ರೆಗಳು ಸಿಕ್ಕಿವೆ.

ಹಿಂದೆಯೂ ಎರಡು ಬಾರಿ ದಾಳಿ :
ದಶಕಗಳ ಹಿಂದೆ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ ಆಗಿ ಕೆಲಸ ಮಾಡುತ್ತಿದ್ದ ಕವಿತಾ ಬಾಡನವರ ಅವರು ಕಳೆದ 7-8- ವರ್ಷಗಳಿಂದ ಅಕ್ರಮವಾಗಿ ಭ್ರೂಣಪತ್ಯೆ ಹಾಗೂ ಭ್ರೂಣಹತ್ಯೆ ಮಾಡುತ್ತಿದ್ದರು ಎನ್ನಲಾಗಿದೆ. ವಿಚಿತ್ರವೆಂದರೆ 30-03-2019 ಮತ್ತು 22-08-2022 ರಂದು ಎರಡು ಬಾರಿ ಮುಧೋಳ ಟಿಎಚ್‌ಓ ಅವರು ಬಾಡನವರ ಮನೆ ಮೇಲೆ ದಾಳಿ ನಡೆಸಿದ್ದರು.

2022 ರಲ್ಲಿ ದಾಳಿ ನಡೆಸಿದ್ದ ಟಿಎಚ್‌ಓ ಅವರು ಮನೆಯ ಮುಖ್ಯದ್ವಾರಕ್ಕೆ ಶೀಲ್ ಹಾಕಿದ್ದರು. ಸದರಿ ದಾಳಿಗೆ ಸಂಬಂಸಿದಂತೆ ಬನಹಟ್ಟಿಯ ನ್ಯಾಯಾಲಯದಲ್ಲಿ ಕೇಸ್ ನಡೆಯುತ್ತಿದೆ. ಆದರೂ ಇಂದಿಗೂ ಮುಖ್ಯದ್ವಾರಕ್ಕೆ ಶೀಲ್ ಇದೆ. ಆದರೆ ಹಿತ್ತಲ ಬಾಗಿಲು ಮೂಲಕ ಅಕ್ರಮವಾಗಿ ಭ್ರೂಣಹತ್ಯೆ ಕೆಲಸವನ್ನು ಎಗ್ಗಿಲ್ಲದೆ ನಡೆಸಿದ್ದಾರೆ ಎಂಬುದು ಬುಧವಾರ ಅಕಾರಿಗಳ ದಾಳಿಯಿಂದ ತಿಳಿದುಬಂದಿದೆ.

ಇಲಾಖೆಗಳ ನಿರ್ಲಕ್ಷ್ಯ:
2022 ರಲ್ಲಿ ಮನೆಮೇಲೆ ದಾಳಿ ಮಾಡಿ, ಮುಖ್ಯದ್ವಾರಕ್ಕೆ ಶೀಲ್ ಮಾಡಿದ್ದರು ಸಹ, ಎರಡು ಮತ್ತು ಮೂರನೇ ಅಂತಸ್ಥಿನಲ್ಲಿ ವಾಸ ಹಾಗೂ ಕೆಳಮಹಡಿಯ ಹಿತ್ತಲ ಬಾಗಿಲು ಮೂಲಕ ಅಕ್ರಮ ಭ್ರೂಣಹತ್ಯೆ ಎಗ್ಗಿಲ್ಲದೆ ನಡೆದಿರುವದನ್ನು ನೋಡಿದರೆ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಮತ್ತು ಅಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ.

ಭ್ರೂಣಹತ್ಯೆಗೆ ಸಾವಿರಾರು ಹಣ ವಸೂಲಿ :
ಅಕ್ರಮ ಭ್ರೂಣ ಹತ್ಯೆಗಾಗಿ ಕವಿತಾ ಬಾಡನವರ ಅವರು ಕನಿಷ್ಠ 20 ಸಾವಿರದಿಂದ 80 ಸಾವಿರವರೆಗೆ ಹಣ ಪಡೆಯುತ್ತಿದ್ದರು ಎನ್ನಲಾಗಿದೆ. ಆರೋಪಿ ಕವಿತಾ ಅವರ ಪೋನ್ ಪೇ ನಂಬರಗೆ ಹಲವು ಗಣ್ಯ ವ್ಯಕ್ತಿ, ಅಧಿಕಾರಿಗಳಿಂದಲೂ ಸಾವಿರಾರು ರೂಪಾಯಿ ಜಮಾ ಆಗಿವೆ. ಪೋಲಿಸರು ಸೀಜ್ ಮಾಡಿರುವ ಕವಿತಾ ಬಾಡನವರ ಅವರ ಮೋಬೈಲ್‌ನಿಂದ ಮತ್ತಷ್ಟು ಜನರ ಹೆಸರು ಸದರಿ ಪ್ರಕರಣದಲ್ಲಿ ಸೇರಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.

ಅಕ್ರಮಕ್ಕೆ ಗಣ್ಯರ ಬೆಂಬಲದ ಶಂಕೆ? :
ಕವಿತಾ ಬಾಡನವರ ಅವರ ಮನೆಯಲ್ಲಿಯೇ ಅಕ್ರಮವಾಗಿ ನಡೆಸುತ್ತಿದ್ದ ಭ್ರೂಣಹತ್ಯೆ ಅಕ್ರಮ ದಂದೆಯಿಂದ ಕೋಟ್ಯಾಂತರ ಬೆಲೆ ಬಾಳುವ ಮನೆಯನ್ನು ನಿರ್ಮಿಸಿದ್ದಾರೆ. ಇವರ ಅಕ್ರಮ ದಂಧೆಗೆ ಹಲವು ಗಣ್ಯರು ಹಾಗೂ ಇಲಾಖೆಯ ಕೆಲ ಅಕಾರಿಗಳ ಬೆಂಬಲವಿದೆ ಎಂಬ ಅನುಮಾನ ಮೂಡುತ್ತಿದೆ. ಭ್ರೂಣಹತ್ಯೆ ಪ್ರಕರಣವು ಅಂತರರಾಜ್ಯಕ್ಕೆ ಹೋಗಿದ್ದರಿಂದ ವಿಚಾರಣೆಯ ನಂತರ ಪ್ರಕರಣವು ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾಯ್ದು ನೋಡಬೇಕಾಗಿದೆ.

ಇದನ್ನೂ ಓದಿ :Kadaba ನ್ಯಾಯಾಲಯದಲ್ಲಿ ಖಾಸಗಿ ದೂರು: ಕೊಂಬಾರಿನ ಐವರ ವಿರುದ್ಧ ಪ್ರಕರಣ ದಾಖಲು

ಟಾಪ್ ನ್ಯೂಸ್

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.