ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ… ಬಸ್ ಸಿಬಂದಿ, ವೈದ್ಯರ ಕಾರ್ಯಕ್ಕೆ ಮೆಚ್ಚುಗೆ
Team Udayavani, May 30, 2024, 9:00 AM IST
ತಿರುವನಂತಪುರಂ: ಮಹಿಳೆಯೊಬ್ಬರು ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ.
ಕೇರಳದ ಮಲಪ್ಪುರಂ ಮೂಲದ 37 ವರ್ಷದ ಮಹಿಳೆಯೊಬ್ಬರು ಬುಧವಾರ ಮಧ್ಯಾಹ್ನ ತ್ರಿಶೂರ್ನಿಂದ ಕೋಝಿಕೋಡ್ನ ತೊಟ್ಟಿಲ್ಪಾಲಮ್ಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು ಈ ವೇಳೆ ಬಸ್ಸು ಪೆರಮಂಗಲಂ ಬಳಿ ಸಂಚರಿಸುತ್ತಿದ್ದಾಗ ಮಹಿಳೆಗೆ ಹೆರಿಗೆ ನೋವು ಶುರುವಾಗಿದೆ ಈ ವಿಚಾರವನ್ನು ಬಸ್ ಚಾಲಕನ ಬಳಿ ಹೇಳಿದಾಗ ಚಾಲಕ ಕೂಡಲೇ ಬಸ್ಸನ್ನು ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾರೆ ಅಲ್ಲದೆ ಆಸ್ಪತ್ರೆ ಸಿಬಂದಿಗೆ ಮಾಹಿತಿಯನ್ನೂ ನೀಡಿದ್ದಾರೆ ಬಸ್ಸು ಆಸ್ಪತ್ರೆ ಬಳಿ ಹೋಗುತ್ತಿದ್ದಂತೆ ಹೆರಿಗೆ ನೋವು ಜಾಸ್ತಿಯಾದ ಕಾರಣ ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರನ್ನು ಇಳಿಸಿದ ಆಸ್ಪತ್ರೆ ಸಿಬಂದಿ ಬಸ್ಸಿನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.
ಬಸ್ ಸಿಬ್ಬಂದಿ ಮತ್ತು ಅಮಲಾ ಆಸ್ಪತ್ರೆಯ ಆರೋಗ್ಯ ಕಾರ್ಯಕರ್ತರ ಸಕಾಲಿಕ ನೆರವಿನಿಂದ ಮಹಿಳೆ ಬಸ್ನೊಳಗೆ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಸಕಾಲಕ್ಕೆ ಸ್ಪಂದಿಸಿದ ಬಸ್ ಸಿಬಂದಿಗಳು ಹಾಗೂ ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ: Jagannath Festival: ಪುರಿಯ ಜಗನ್ನಾಥ ಉತ್ಸವದ ವೇಳೆ ಪಟಾಕಿ ಸ್ಫೋಟಗೊಂಡು 15 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.