Chikkamagaluru: ಅಪ್ಪ ಮಕ್ಕಳ ಕೈಯಿಂದ ಬಿಜೆಪಿ ಪಕ್ಷ ಮುಕ್ತ ಮಾಡಬೇಕು… :ಈಶ್ವರಪ್ಪ ಕಿಡಿ
ಪಕ್ಷ ಶುದ್ದೀಕರಣ ಮಾಡದಿದ್ದರೆ ರಾಜ್ಯದಲ್ಲಿ ಬಿಜೆಪಿಯ ಅಡ್ರಸ್ ಇರದಂತಾಗುತ್ತದೆ
Team Udayavani, May 30, 2024, 1:29 PM IST
ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿದೆ. ಸಾಮೂಹಿಕ ನಾಯಕತ್ವ ಪಕ್ಷದಲ್ಲಿ ಬರಬೇಕು. ಪಕ್ಷ ಶುದ್ದೀಕರಣ ಆಗಬೇಕು ಎನ್ನುವುದು ನನ್ನ ಹೋರಾಟದ ಉದ್ದೇಶ ಎಂದು ಕೆ.ಎಸ್. ಈಶ್ವರಪ್ಪ ಬಿಎಸ್ ವೈ ಹಾಗೂ ಮಕ್ಕಳ ವಿರುದ್ಧ ಗುಡುಗಿದರು.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದೆ ಬಿಜೆಪಿಯಲ್ಲಿ ಸಾಮೂಹಿಕ ನಾಯಕತ್ವ ಇತ್ತು. ಈಗ ಪಕ್ಷ ಅಪ್ಪ ಮಕ್ಕಳ ಕೈಯಲ್ಲಿ ಸಿಕ್ಕಿದೆ. ಅಪ್ಪ ಮಕ್ಕಳ ಕೈಯಿಂದ ಪಕ್ಷ ಮುಕ್ತ ಮಾಡಬೇಕು ಎಂಬ ಆಪೇಕ್ಷೆ ಕಾರ್ಯಕರ್ತರು ಮತ್ತು ನಾಯಕರಲ್ಲಿದೆ ಎಂದರು.
ನರೇಂದ್ರ ಮೋದಿ ಅವರು ಕಾಂಗ್ರೆಸ್ ಕುಟುಂಬ ರಾಜ ಕಾರಣ ಮುಕ್ತ ಮಾಡಬೇಕು ಎನ್ನುತ್ತಾರೆ. ಆದರೆ, ರಾಜ್ಯ ಬಿಜೆಪಿ ಬಿಎಸ್ ವೈ, ರಾಘವೇಂದ್ರ, ವಿಜಯೇಂದ್ರ ಕೈಯಲ್ಲಿದೆ. ಪಕ್ಷವನ್ನು ಅಪ್ಪ ಮಕ್ಕಳಿಂದ ಮುಕ್ತ ಮಾಡಬೇಕು ಎಂದು ಹೇಳಿದರು.
ಬಿಎಸ್ ವೈ ಏನೇ ಹೇಳಿದರೂ ಸರಿ ಇದೆ ಎಂಬ ಭ್ರಮೆಯಲ್ಲಿ ಕೇಂದ್ರದ ನಾಯಕರು ಇದ್ದಾರೆ. ಇದನ್ನು ಕೇಂದ್ರದ ನಾಯಕರಿಗೆ ತಿಳಿಸಬೇಕಿದೆ. ಹಾಗಾಗಿ ನಾನು ತಿರುಗಿ ಬಿದ್ದು ಚುನಾವಣೆಗೆ ನಿಂತೆ ಎಂದರು.
ಪಕ್ಷವನ್ನು ಶುದ್ದೀಕರಣ ಮಾಡದಿದ್ದರೇ ರಾಜ್ಯದಲ್ಲಿ ಬಿಜೆಪಿ ಅಡ್ರಸ್ ಇರಲ್ಲ. ಬಿಎಸ್ ವೈ ಅವರದ್ದು ಸ್ವಾರ್ಥ ರಾಜಕಾರಣ ಪಕ್ಷ ಶುದ್ದೀಕರಣ ಮಾಡಬೇಕೆನ್ನುವುದು ಪ್ರಾಮಾಣಿಕ ರಾಜಕಾರಣ. ನಾನು ಹೋರಾಟ ಶುರು ಮಾಡಿದ್ದೇನೆ. ಮುಂದೆ ನಮ್ಮೊಂದಿಗೆ ಇನಷ್ಟು ಜನರು ಸೇರ್ಪಡೆಗೊಳ್ಳಲಿದ್ದಾರೆ. ಬಿಜೆಪಿಯಲ್ಲಿ ಉಚ್ಚಾಟನೆಗೆ ಬೆಲೆ ಇಲ್ಲ. ಮುಖಂಡರು ಕಾರ್ಯಕರ್ತರು ಹೇದರದೆ ಪಕ್ಷ ಶುದ್ದೀಕರಣಕ್ಕೆ ಕೈ ಜೋಡಿಸಿ ಎಂದು ಕರೆ ನೀಡಿದರು.
ಇದನ್ನೂ ಓದಿ: Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.