Asha workers: ಆಶಾ ಕಾರ್ಯಕರ್ತೆರಿಗೆ 4 ತಿಂಗಳಿಂದ ಸಂಬಳ ಇಲ್ಲ
Team Udayavani, May 31, 2024, 6:35 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಚುನಾವಣೆ, ಲಸಿಕೀಕರಣ, ಗರ್ಭಿಣಿಯರು, ಬಾಣಂತಿಯರ ಆರೋಗ್ಯ ವಿಚಾರಣೆ ಸಹಿತ ವಿವಿಧ ಕಾರ್ಯಗಳನ್ನು ನಡೆಸಿ ಮಾಹಿತಿ ಸಲ್ಲಿಸುವ ಆಶಾ ಕಾರ್ಯಕರ್ತೆಯರಿಗೆ 3-4 ತಿಂಗಳುಗಳಿಂದ ಗೌರವಧನ ಪಾವತಿಯಾಗಿಲ್ಲ.
ರಾಜ್ಯಾದ್ಯಂತ ಒಟ್ಟು 62 ಸಾವಿರ ಆಶಾ ಕಾರ್ಯಕರ್ತೆಯರಿಗೆ ಕಳೆದ ಫೆಬ್ರವರಿಯಿಂದ ಗೌರವಧನ ಸಿಕ್ಕಿಲ್ಲ. ರಾಜ್ಯ ಸರಕಾರದಿಂದ ನೀಡುವ 5,000 ರೂ. ಗೌರವಧನ ಮತ್ತು ಕೇಂದ್ರ ಸರಕಾರದ ಅಂದಾಜು 5,000 ರೂ. ಪ್ರೋತ್ಸಾಹಧನ ಸಹಿತ 3 ತಿಂಗಳ ಒಟ್ಟು 30 ಸಾವಿರ ರೂ. ಇನ್ನೂ ಪಾವತಿಯಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ 3 ತಿಂಗಳ ಗೌರವಧನ ಬಾಕಿ ಇದ್ದರೆ, ಇನ್ನೂ ಕೆಲವೆಡೆ 4 ತಿಂಗಳುಗಳಿಂದ ಬಾಕಿ ಇದೆ. ಜತೆಗೆ ಚುನಾವಣೆ ವೇಳೆಯ ಪ್ರೋತ್ಸಾಹಧನವನ್ನೂ ಬಾಕಿ ಉಳಿಸಿಕೊಂಡಿದೆ.
ಆಶಾ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಒಟ್ಟು 37 ಚಟುವಟಿಕೆಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ಇದನ್ನು ಕಾಲಮಿತಿಯೊಳಗೆ ನೀಡಲು ಮತ್ತು ಮೇಲ್ವಿಚಾರಣೆಗೆ ಆಶಾನಿಧಿ ತಂತ್ರಾಂಶವನ್ನು ವಿನ್ಯಾಸಗೊಳಿಸಲಾಗಿದ್ದರೂ ಮೇ ತಿಂಗಳು ಸೇರಿದರೆ ಒಟ್ಟು 4 ತಿಂಗಳ ಗೌರವಧನ ಬರಬೇಕಿದೆ.
ಒಬ್ಬ ಆಶಾ ಕಾರ್ಯಕರ್ತೆ ಸರಾಸರಿ 250-300 ಕುಟುಂಬಗಳ ಜತೆ ನಿಕಟ ಸಂಪರ್ಕವನ್ನು ಹೊಂದಿದ್ದು, ಸಮುದಾಯದವರಿಗೆ ಪೌಷ್ಟಿಕಾಂಶ ಆಹಾರ, ನೈರ್ಮಲ್ಯ, ದಾಖಲೆಗಳ ನಿರ್ವಹಣೆ, ಆರೋಗ್ಯ ಸೇವೆಗಳ ಸದುಪಯೋಗ, ಆಪ್ತ ಸಮಾಲೋಚನೆ, ಸುರಕ್ಷಿತ ಹೆರಿಗೆ, ಸ್ತನ್ಯಪಾನದ ಪ್ರಾಮುಖ್ಯ, ಲಸಿಕೆ, ಗರ್ಭನಿರೋಧಕಗಳ ಮಹತ್ವ, ಲೈಂಗಿಕ ಸೋಂಕುಗಳನ್ನು ತಡೆಗಟ್ಟುವಿಕೆ ಇತ್ಯಾದಿಗಳ ಜಾಗೃತಿ ಕಾರ್ಯಗಳನ್ನು ನಿರ್ವಹಿಸುತ್ತಾರೆ.
ತಾಂತ್ರಿಕ ಅಡಚಣೆ:
ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರಿಗೆ ನೀಡಬೇಕಿದ್ದ ಗೌರವಧನ ಪಾವತಿಗೆ ತಾಂತ್ರಿಕ ಅಡಚಣೆಯಾಗಿದೆ. ಮೊದಲು ಸರಕಾರದಿಂದ ನೇರ ಪಾವತಿ ಮೂಲಕ ಗೌರವಧನ ನೀಡಲಾಗುತ್ತಿತ್ತು. ಈಗ ಕೇಂದ್ರ-ರಾಜ್ಯ ಸರಕಾರದಿಂದ ಒಟ್ಟಿಗೆ ವೇತನ ನೀಡುವುದಾಗಿ ಚಿಂತನೆ ನಡೆಯುತ್ತಿದೆ. ರಾಜ್ಯ ಸರಕಾರದಿಂದ ಈಗಾಗಲೇ ಹಣ ಬಿಡುಗಡೆಯಾಗಿದ್ದು, ತಾಂತ್ರಿಕ ಅಡಚಣೆಯಿಂದ ಪಾವತಿ ತಡವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸುತ್ತಾರೆ.
ಫೆಬ್ರವರಿಯಿಂದ ಗೌರವಧನ ಸಿಗದೆ ಆಶಾ ಕಾರ್ಯಕರ್ತೆಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೇ ತಿಂಗಳು ಸೇರಿದರೆ ಒಟ್ಟು 4 ತಿಂಗಳ ಗೌರವಧನ ಬಾಕಿ ಇದೆ. ಇದನ್ನೇ ನಂಬಿಕೊಂಡು ಬದುಕುವವರು ಸಾಕಷ್ಟು ಮಂದಿ ಇದ್ದಾರೆ. ಈಗ ಶಾಲೆ ಆರಂಭವಾಗಿದ್ದು, ಪಠ್ಯ, ಸಮವಸ್ತ್ರ, ಶಾಲಾ ಶುಲ್ಕ ಇತ್ಯಾದಿ ಕಾರಣದಿಂದ ಬಾಳು ದುಃಸ್ಥಿತಿಯತ್ತ ಸಾಗಿದೆ. ಶೀಘ್ರವಾಗಿ ಮಾಸಿಕ ಗೌರವಧನ ನೀಡಬೇಕು.– ಡಿ. ನಾಗಲಕ್ಷ್ಮಿ, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ
ಆಶಾ ಕಾರ್ಯಕರ್ತೆಯರಿಗೆ ವಿವಿಧ ಯೋಜನೆಯಡಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಮಾರ್ಚ್ ಮತ್ತು ಎಪ್ರಿಲ್ ತಿಂಗಳಲ್ಲಿ ತಂತ್ರಾಂಶ ಅಡಚಣೆಯಿಂದಾಗಿ ಗೌರವಧನ ಪಾವತಿ ತಡವಾಗಿದೆ. ಮುಂದಿನ 5- 7 ದಿನಗಳಲ್ಲಿ ತಾಂತ್ರಿಕ ಅಡಚಣೆಯನ್ನು ಸರಿಪಡಿಸಿ ವೇತನ ನೀಡಲಾಗುವುದು.– ನವೀನ್ ಭಟ್, ಎನ್ಎಚ್ಎಂನ ವ್ಯವಸ್ಥಾಪಕ ನಿರ್ದೇಶಕರು
ಕೇಂದ್ರ ಮತ್ತು ರಾಜ್ಯ ಸರಕಾರದಿಂದ ನೀಡುವ ಗೌರವ ಮತ್ತು ಪ್ರೋತ್ಸಾಹ ಧನವನ್ನು ಸಂಯೋಜಿಸಲಾಗುತ್ತಿರುವುದರಿಂದ ಪಾವತಿ ಕಾರ್ಯ ತಡವಾಗಿದೆ. ರಾಜ್ಯ ಸರಕಾರದಿಂದ ಹಣ ಬಿಡುಗಡೆಯಾಗಿದೆ. ಮುಂದಿನ 10 ದಿನಗಳಲ್ಲಿ ಪಾವತಿ ಮಾಡಲಾಗುತ್ತದೆ.– ಡಾ| ರೇಖಾ, ಆಶಾ ಯೋಜನೆಯ ಉಪನಿರ್ದೇಶಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್ ಮ್ಯಾನ್ʼ?
IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈಯರ್ ಬ್ರ್ಯಾಂಡ್ʼ ಎಂಟ್ರಿ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.