Congress ಮೇಲ್ಮನೆ ಪಟ್ಟಿ ಇಂದು ಯಾ ನಾಳೆ?: 65 ಸಂಭವನೀಯರು
ದಿಲ್ಲಿಯಿಂದ ವಾಪಸಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
Team Udayavani, May 31, 2024, 6:50 AM IST
ಬೆಂಗಳೂರು: ವಿಧಾನ ಪರಿಷತ್ತಿನ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯ ವಿಷಯವಾಗಿ ಬುಧವಾರವೂ ಯಾವುದೇ ಬೆಳವಣಿಗೆ ಆಗಿಲ್ಲ. ಲಭ್ಯ ಮಾಹಿತಿ ಪ್ರಕಾರ ಶುಕ್ರವಾರ ಇಲ್ಲವೇ ಶನಿವಾರ ಪಟ್ಟಿ ಬಿಡುಗಡೆ ಆಗಲಿದೆ.
ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಿಎಂ, ಡಿಸಿಎಂ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಲ್ಲಿಸಿದರೂ ಹೆಚ್ಚಿನ ಚರ್ಚೆ ನಡೆದಿಲ್ಲ. ಸಿಎಂ, ಡಿಸಿಎಂ ಬೆಂಗಳೂರಿಗೆ ವಾಪಸಾದರೂ ಟಿಕೆಟ್ ಆಕಾಂಕ್ಷಿಗಳ ದಂಡು ಮಾತ್ರ ದಿಲ್ಲಿಯಲ್ಲೇ ಬೀಡು ಬಿಟ್ಟು ಲಾಬಿ ಮುಂದುವರಿಸಿದೆ.
ಖರ್ಗೆ, ಕೆ.ಸಿ. ವೇಣುಗೋಪಾಲ್, ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದರೂ ರಾಹುಲ್ ಗಾಂಧಿ ಜತೆ ಖರ್ಗೆ ಅವರು ಸಮಾಲೋಚಿಸಿಯೇ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
ಗುರುವಾರ ರಾತ್ರಿ ಒಡಿಶಾದಿಂದ ರಾಹುಲ್ ಅವರು ದಿಲ್ಲಿಗೆ ವಾಪ ಸಾಗಿದ್ದು, ಶುಕ್ರವಾರ ಖರ್ಗೆ ಅವರು ಭೇಟಿಯಾದರೆ ಪಟ್ಟಿಗೆ ಅಂತಿಮ ಮುದ್ರೆ ಬೀಳುವ ಸಾಧ್ಯತೆಗಳಿವೆ.
65 ಸಂಭವನೀಯರು
300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದಿಲ್ಲಿ ನಾಯ ಕರ ಜತೆ ಚರ್ಚಿಸಿ 65 ಸಂಭಾವ್ಯರ ಪಟ್ಟಿಯನ್ನು ಹೈಕಮಾಂಡ್ಗೆ ಸಲ್ಲಿಸಿ ಬಂದಿದ್ದೇವೆ. ಯತೀಂದ್ರ ವಿಷಯವಾಗಿ ಹೈಕಮಾಂಡ್ ನಾಯಕರು ಈಗಾಗಲೇ ಮಾತು ಕೊಟ್ಟಿದ್ದರು. ಎಲ್ಲ ವಲಯ ಗಳಿಂದಲೂ ಟಿಕೆಟ್ ಆಕಾಂಕ್ಷಿಗಳಿ¨ªಾರೆ. ಮಂಗಳೂರಿ ನಲ್ಲಿ 21, ಚಿಕ್ಕಮಗಳೂರಿನಲ್ಲಿ 9 ಮಂದಿ ಇದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪರಮೇಶ್ವರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ನಾವು ಅವರ ಅಭಿಪ್ರಾಯ ಕೇಳಿದ್ದೇವೆ. ಪರಮೇಶ್ವರ ಅವರು ಸಿಎಂ ಅವರನ್ನು ಭೇಟಿ ಮಾಡಿ¨ªಾರೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.