![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
China ಹೊಸ ದುಸ್ಸಾಹಸ ; ಸಿಕ್ಕಿಂ ಗಡಿಯಲ್ಲಿ ಯುದ್ಧ ವಿಮಾನ!
Team Udayavani, May 31, 2024, 6:40 AM IST
![1-china](https://www.udayavani.com/wp-content/uploads/2024/05/1-china-620x437.jpg)
ಹೊಸದಿಲ್ಲಿ: ಮೂರು ವರ್ಷಗಳಿಂದ ಚೀನವು ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸೇನಾ ಸೌಲಭ್ಯಗಳನ್ನು ಪಾಕಿಸ್ಥಾನದ ಜತೆಗೂಡಿ ವೃದ್ಧಿಸುತ್ತಿರುವ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಸಿಕ್ಕಿಂ ಗಡಿಯಿಂದ 150 ಕಿ.ಮೀ.ಗಿಂತ ಕಡಿಮೆ ದೂರದಲ್ಲಿ ಅದು ಮೇ 27ರಂದು ತನ್ನ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ನಿಯೋಜಿಸಿರುವ ಮಾಹಿತಿಯು ಈಗ ತಿಳಿದುಬಂದಿದೆ.
ಈ ಸಂಬಂಧದ ಫೋಟೋಗಳು ಬಹಿರಂಗವಾಗಿದ್ದು, ಚೀನೀ ವಾಯುಪಡೆಯ ಜೆ-20 ಯುದ್ಧ ವಿಮಾನಗಳನ್ನು ಟಿಬೆಟ್ನ 2ನೇ ಅತಿದೊಡ್ಡ ನಗರವಾದ ಶಿಗಾತ್ಸೆಯ ಸೇನಾ ಮತ್ತು ನಾಗರಿಕ ಬಳಕೆಯ ವಿಮಾನ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ. ಈ ವಿಮಾನಗಳ ಜತೆಗೆ ಕೆ.ಜೆ-500 ಏರ್ಬೋರ್ನ್ ಅರ್ಲಿ ವಾರ್ನಿಂಗ್ ಮತ್ತು ಕಂಟ್ರೋಲ್ ಏರ್ಕ್ರಾಫ್ಟ್ ಕೂಡ ಇರುವುದನ್ನು ಕಾಣಬಹುದು. ವಿಶೇಷ ಎಂದರೆ ಭಾರತಕ್ಕೆ ತೀರಾ ಸಮೀಪದಲ್ಲಿ ನಡೆದಿರುವ ಈ ಬೆಳವಣಿಗೆ ಭಾರತೀಯ ವಾಯುಪಡೆಗೆ ತಿಳಿದಿದೆ ಎನ್ನಲಾಗಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಇದಕ್ಕೆ ಪ್ರತಿಯಾಗಿ ಭಾರತದ ಬಳಿ ರಫೇಲ್ ಯುದ್ಧವಿಮಾನಗಳಿವೆ. ಭಾರತೀಯ ವಾಯುಪಡೆಯ 2ನೇ ರಫೇಲ್ ಸ್ಕ್ವಾಡ್ರನ್ ಪಶ್ಚಿಮ ಬಂಗಾಲದ ಹಾಸಿಮಾರಾದಲ್ಲಿದೆ. ಈ ಪ್ರದೇಶವು ಚೀನದ ಯುದ್ಧವಿಮಾನಗಳಿರುವ ಸ್ಥಳದಿಂದ ಹೆಚ್ಚುಕಡಿಮೆ 290 ಕಿ.ಮೀ. ದೂರದಲ್ಲಿದೆ.
ಅತ್ಯಾಧುನಿಕ ಯುದ್ಧವಿಮಾನ
ಜೆ-20 ಚೀನದ ಇದುವರೆಗಿನ ಅತ್ಯಾಧುನಿಕ ಯುದ್ಧವಿಮಾನವಾಗಿದೆ. ಸಾಮಾನ್ಯವಾಗಿ ಈ
ಯುದ್ಧ ವಿಮಾನಗಳನ್ನು ಚೀನದ ಪೂರ್ವ ಪ್ರಾಂತ್ಯ
ಗಳಲ್ಲಿ ನಿಯೋಜಿಸಲಾಗುತ್ತದೆ. ಈಗ ಇವು ಶಿಗಾತ್ಸೆಯಲ್ಲಿವೆ ಎಂದು ಆಲ್ ಸೋರ್ಸ್ ಅನಾಲಿಸಿಸ್ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![6](https://www.udayavani.com/wp-content/uploads/2024/06/6-20-150x90.jpg)
ಯೂಟ್ಯೂಬ್ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ
![1-qwewqewq](https://www.udayavani.com/wp-content/uploads/2024/06/1-qwewqewq-1-150x92.jpg)
West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್
![ARMY,-Navy-Chiefs](https://www.udayavani.com/wp-content/uploads/2024/06/ARMY-Navy-Chiefs-150x90.jpg)
Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!
![1-adsdadsad](https://www.udayavani.com/wp-content/uploads/2024/06/1-adsdadsad-150x87.jpg)
Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?
MUST WATCH
ಹೊಸ ಸೇರ್ಪಡೆ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-150x79.jpg)
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.