ಬೈಂದೂರು: ಪುಟ್ಟ ಮಕ್ಕಳ ಸುರಕ್ಷತೆಗಾದರೂ ಕಾಲು ಸಂಕ ನಿರ್ಮಿಸಿ


Team Udayavani, May 31, 2024, 5:14 PM IST

ಬೈಂದೂರು: ಪುಟ್ಟ ಮಕ್ಕಳ ಸುರಕ್ಷತೆಗಾದರೂ ಕಾಲು ಸಂಕ ನಿರ್ಮಿಸಿ

ಬೈಂದೂರು: 2022ರ ಆಗಸ್ಟ್‌ 8ರಂದು ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಪುಟ್ಟ ಬಾಲಕಿ, ಏಳು ವರ್ಷದ ಸನ್ನಿಧಿ ಮರದ ಸಂಕ ದಾಟು ವಾಗ ನದಿಯ ಸೆಳೆತಕ್ಕೆ ಸಿಲುಕಿ ನೀರು ಪಾಲಾದಾಗ ಸರಕಾರ, ಜಿಲ್ಲಾಡಳಿತ, ಜನಪ್ರತಿನಿಧಿಗಳು ಸೇರಿ ಎಲ್ಲರೂ ಕಣ್ಣೀರು ಸುರಿಸಿದ್ದರು.

ಸಾಲು ಸಾಲಾಗಿ ಸಾಂತ್ವನದ ಜತೆಗೆ ಶೀಘ್ರ ಬೈಂದೂರಿನ ಗ್ರಾಮೀಣ ಭಾಗದ ಕಾಲು ಸಂಕಗಳ ಬೇಡಿಕೆಯನ್ನು ಈಡೇರಿಸುತ್ತೇವೆ
ಎಂದು ಭರವಸೆ ನೀಡಿದ್ದರು. ಆದರೆ ಕಾಲ್ತೋಡಿನ ಆ ನಿರ್ದಿಷ್ಟ ಪ್ರದೇಶದ ಒಂದು ಕಾಲು ಸಂಕ ಬಿಟ್ಟರೆ ಬೇರೆ ಎಲ್ಲೂ ಕಾಲು ಸಂಕ ನಿರ್ಮಾಣವಾಗಿಲ್ಲ.

ಈಗ ಮಳೆಗಾಲ ಮತ್ತೆ ಬಂದಿದೆ. ಎಂದಿನಂತೆ ನದಿಗಳು ಉಕ್ಕೇರಲಿವೆ. ಸರಕಾರ ಜನಪ್ರತಿನಿಧಿಗಳ ಭರವಸೆ ನಂಬಿ ಕಾಲು ಸಂಕದ ಕನವರಿಕೆಯಲ್ಲೇ ಇದ್ದ ಈ ಭಾಗದ ಜನರಿಗೆ ಮತ್ತೆ ಆತಂಕ ಶುರುವಾಗಿದೆ. ಇಲಾಖೆ, ಜನಪ್ರತಿನಿಧಿಗಳು ಪರಸ್ಪರ ಒಬ್ಬರಿಗೊಬ್ಬರನ್ನು ಬೆರಳು ತೋರಿಸಿ ಕಾಲು ಸಂಕದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಮಕ್ಕಳ ಪಾಲಕರಂತೂ ಈ ಮಳೆಗಾಲದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಎಂದು ಆತಂಕಪಡುತ್ತಿದ್ದಾರೆ.

ಈ ಭಾಗದ ಹಳ್ಳಿಗಳಲ್ಲಿ ಮಳೆಗಾಲದಲ್ಲಿ ತುಂಬಿ ಹರಿಯುವ ನದಿಗಳು ಮರದ ಕೊಂಬೆ ಮೇಲೆ ಮಕ್ಕಳನ್ನು ಕಳುಹಿಸುವ ಸರ್ಕಸ್‌ ಸ್ಥಳೀಯರಿಗೆ ಸರ್ವೇಸಾಮಾನ್ಯವಾಗಿದೆ. ಆದರೆ ಇಲಾಖೆ ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಸನ್ನಿಧಿ ಮೃತ್ಯು ವಿನ ಅನಂತರ ಕಾಲ್ತೋಡು ಸಮೀಪ ಒಂದು ಕಾಲುಸಂಕ ನಿರ್ಮಾಣಗೊಂಡಿದೆ.ಉಳಿದ ಕಡೆ ಇದುವರೆಗೆ ಕೆಲಸ ನಡೆದಿಲ್ಲ. ಅಪಾಯ ನಡೆದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ ಮುಂಜಾಗ್ರತೆ ವಹಿಸಿ ಎನ್ನುವುದು ಇಲ್ಲಿನ ಜನರ ಆಗ್ರಹ.

ವರ್ಷಾಂತರಗಳ ಸಮಸ್ಯೆ ಇದು

ಬೈಂದೂರು ಭಾಗದಲ್ಲಿ ಕಾಲುಸಂಕದ ಸಮಸ್ಯೆ ಇಂದು ನಿನ್ನೆಯದಲ್ಲ.ಹತ್ತಾರು ವರ್ಷಗಳಿಂದ ಬಹುತೇಕ ಕಡೆ ಇದರ ಬೇಡಿಕೆಯಿದೆ. ಯಡ್ತರೆ ಗ್ರಾಮದ ಗಂಗನಾಡು, ನಿರೋಡಿ, ಕಾಲ್ತೋಡು ಭಾಗದ ಹೊಸೇರಿ, ಸಾಂತೇರಿ, ವಸ್ರೆ, ಬ್ಯಾಟಿಯಾಣಿ, ಮಧು ಕೊಡ್ಲು, ಚಪ್ಪರಕಿ, ಕಪ್ಪಾಡಿ, ಮುರೂರು, ಗುಂಡುಬಾಣ ಮುಂತಾದ ಕಡೆ ಬಹುತೇಕ ಮನೆಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾದರೆ ನದಿದಾಟಿ ಬರಬೇಕು.ಇಲ್ಲವಾದರೆ ಹತ್ತಾರು ಕಿ.ಮೀ ಸುತ್ತು ಬಳಸಿ ಬರಬೇಕಾಗಿದೆ. ಒಂದೆಡೆ ಕೃಷಿ ಚಟುವಟಿಕೆ ಇದರ ನಡುವೆ ನಿಗದಿ ಸಮಯಕ್ಕೆ ಮಕ್ಕಳನ್ನು ಶಾಲೆಗೆ ಕರೆತರಬೇಕಾದ ಜವಾಬ್ದಾರಿ ನಿಭಾಯಿ ಸುವುದು ಭಾರಿ ಕಷ್ಟ. ಹೀಗಾಗಿ ಮಕ್ಕಳು ಮನೆಗೆ ಬರುವವರೆಗೆ ಪಾಲಕರ ಆತಂಕದಿಂದ ದಿನ
ಕಳೆಯಬೇಕಾಗಿದೆ.

ಸ್ಥಳೀಯರಿಂದ ಕಾಲುಸಂಕದ ಕಾಮಗಾರಿ
ಇಲ್ಲಿನ ಸಾತೇರಿ, ಹೊಸೇರಿ ಭಾಗದಲ್ಲಿ ಸರಕಾರದ ಸ್ಪಂದನೆಗೆ ಕಾದು ಬೇಸತ್ತು ಸ್ಥಳೀಯರೇ ಶ್ರಮದಾನದ ಮೂಲಕ ಕಾಲುಸಂಕ ನಿರ್ಮಿಸಿ ಕೊಂಡಿದ್ದಾರೆ. ಮರದ ದಿಮ್ಮಿ ಗಳಿಂದ ನಿರ್ಮಿಸಿದ ಈ ತಾತ್ಕಾಲಿಕ ಕಾಲು ಸಂಕ ಸುರಕ್ಷಿತ ವೇನೂ ಅಲ್ಲ. ಆದರೆ ಬೇರೆ ದಾರಿ ಇಲ್ಲ

ಜನ ಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಕೆ ಕಾಲುಸಂಕ ನಿರ್ಮಿಸಲು ಕಳೆದ ಹಲವು ವರ್ಷಗಳಿಂದ ಶಾಸಕರಿಗೆ,
ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ನೀಡಲಾಗಿತ್ತು.ಮಳೆಗಾಲದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಮಸ್ಯೆಯಾಗುತ್ತಿದೆ. ಸರಕಾರ ಇಲ್ಲಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕಿದೆ.
*ಆನಂದ ಪೂಜಾರಿ, ಗ್ರಾಮಸ್ಥರು

*ಅರುಣ್‌ ಕುಮಾರ್‌ ಶಿರೂರು

ಟಾಪ್ ನ್ಯೂಸ್

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fishing: ಬುಲ್‌ಟ್ರಾಲ್‌ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ

Fishing: ಬುಲ್‌ಟ್ರಾಲ್‌ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ

fraudd

Gangolli: ದೋಣಿಯ ಸೊತ್ತು ಮಾರಾಟ ಮಾಡಿ 22 ಲಕ್ಷ ರೂ. ವಂಚನೆ

5(1)

Moodgall: ಈಗ ಭಾರೀ ಜನ!; ಗುಹಾಂತರ ಕೇಶವನಾಥೇಶ್ವರ ದೇವಾಲಯಕ್ಕೆ ಪ್ರವಾಸಿಗರ‌ ಸಂಖ್ಯೆ ಹೆಚ್ಚಳ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

Gangolli: ಮೀನುಗಾರಿಕೆ ಸೊತ್ತು ಮಾರಿ ಲಕ್ಷಾಂತರ ರೂ. ವಂಚನೆ

Gangolli: ಮೀನುಗಾರಿಕೆ ಸೊತ್ತು ಮಾರಿ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.