Badiyadka ನಾಪತ್ತೆಯಾಗಿದ್ದ ಮಹಿಳೆ ಶವ ಹೊಳೆಯಲ್ಲಿ ಪತ್ತೆ
Team Udayavani, May 31, 2024, 10:32 PM IST
ಬದಿಯಡ್ಕ: ಔಷಧ ಖರೀದಿಸಲೆಂದು ಮನೆಯಿಂದ ಹೋಗಿ ನಾಪತ್ತೆಯಾಗಿದ್ದ ನಾರಂಪಾಡಿ ನಿವಾಸಿ ದಿ| ನಾರಾಯಣ ಅವರ ಪತ್ನಿ ಲೀಲಾವತಿ (60) ಅವರ ಮೃತದೇಹ ಕುಂಬಳೆ ಹೊಳೆಯಲ್ಲಿ ಪತ್ತೆಯಾಗಿದೆ.
ಪುತ್ರ ಪ್ರಮೋದ್ ಅವರ ಜತೆ ವಾಸಿಸುತ್ತಿದ್ದ ಲೀಲಾವತಿ ಅವರು ಸೋಮವಾರ ಬೆಳಗ್ಗೆ ಔಷಧ ತರಲೆಂದು ಮನೆಯಿಂದ ಹೊರಟಿದ್ದರು. ಆದರೆ ಸಂಜೆಯಾದರೂ ಮನೆಗೆ ವಾಪಸಾಗಲಿಲ್ಲ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.
ಪೊಲೀಸರು ತನಿಖೆ ನಡೆಸುತ್ತಿದ್ದಂತೆ ಲೀಲಾವತಿ ಅವರ ಆಟೋ ರಿಕ್ಷಾವೊಂದರಲ್ಲಿ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸಮೀಪಕ್ಕೆ ತೆರಳಿದ್ದು ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಶೋಧ ನಡೆಸುತ್ತಿದ್ದಂತೆ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.