BJP, ಜೆಡಿಎಸ್ಗೆ ಹೆಚ್ಚು ಸ್ಥಾನ ಖಚಿತ: ವಿಜಯೇಂದ್ರ
Team Udayavani, May 31, 2024, 11:12 PM IST
ತೆಕ್ಕಟ್ಟೆ :ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮ್ಮ ತಂದೆಯ ಆಪ್ತ ಉದ್ಯಮಿ ಜಿ. ರಾಘವೇಂದ್ರ ಜಿ.ಉಪಾಧ್ಯಾಯ ಕುಟುಂಬಸ್ಥರು ನಡೆಸಿದ ಸಹಸ್ರನಾಲಿಕೇರ ಗಣಯಾಗಕ್ಕೆ ಮೇ.31 ರಂದು ಕುಟುಂಬ ಸಮೇತ ಭಾಗಿಯಾಗಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿ, ಆರು ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರವು ಬಂಡಾಯ ಹಾಗೂ ಬೇರೆ ಕಾರಣಗಳಿಗಾಗಿ ಹೆಚ್ಚು ಚರ್ಚೆಯಾಗುತ್ತಿದೆ. ಡಾ| ಧನಂಜಯ ಸರ್ಜಿ, ಭೋಜೇಗೌಡ ಅವರ ಪರವಾಗಿ ಈ ಭಾಗದ ಮುಖಂಡರು, ಕಾರ್ಯಕರ್ತರು ಕೆಲಸ ಮಾಡುತ್ತಿದ್ದು, ಯಾವುದೇ ಗೊಂದಲವಿಲ್ಲ. ಮೊದಲ ಪ್ರಾಶಸ್ತ್ಯದ ಅತೀ ಹೆಚ್ಚು ಮತವನ್ನು ಪಡೆದು ವಿಜಯಶಾಲಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಭ್ಯರ್ಥಿ ಬಗ್ಗೆ ಚರ್ಚಿಸುತ್ತಿದ್ದಾಗ ಸ್ವತಃ ಈಶ್ವರಪ್ಪನವರೇ ಡಾ| ಸರ್ಜಿ ಅವರಿಗೆ ಅವಕಾಶ ಕಲ್ಪಿಸುವಂತೆ ಸೂಚಿಸಿದ್ದು, ನಾನು ದೇಗುಲದ ಮುಂದೆ ನಿಂತು ಹೇಳುತ್ತಿದ್ದೇನೆ. ಪ್ರಸ್ತುತ ಈಶ್ವರಪ್ಪನವರು ಹೇಳಿದ್ದನ್ನು ಮರೆತಿದ್ದಾರೆ ಎಂದು ಭಾವಿಸುತ್ತೇನೆ ಎಂದರು.
ಹೆಚ್ಚು ಸ್ಥಾನ ಗಳಿಸುವೆವು
ಕಾಂಗ್ರೆಸ್ನ ಗ್ಯಾರಂಟಿಗಳೆಲ್ಲಾ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿಯವರು ಭ್ರಮೆಯಲ್ಲಿದ್ದಾರೆ. ರಾಜ್ಯದ ಪ್ರಜ್ಞಾವಂತ ಮತ ದಾರರು ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೆ ಪ್ರಧಾನಿ ಆಗಿಸಲಿದ್ದಾರೆ. ನಾನು ಭವಿಷ್ಯ ನುಡಿ ನುಡಿಯುತ್ತಿದ್ದೇನೆ ಎಂದು ಭಾವಿಸಬೇಡಿ. ನಿಸ್ಸಂದೇಹವಾಗಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಅತೀ ಹೆಚ್ಚು ಸ್ಥಾನ ಗಳಿಸಿ ದಾಖಲೆ ಸೃಷ್ಟಿಸಲಿದೆ ಎಂದರು.
ಪ್ರಸ್ತುತ ರಾಜ್ಯ ವಿಧಾನ ಪರಿಷತ್ ಗೆ ಸುಮಲತಾ , ರವಿಕುಮಾರ್ ಹೆಸರು ಮಾಧ್ಯಮದ ಮುಖಾಂತರವೇ ನಮಗೂ ಗಮನಕ್ಕೆ ಬಂದಿದೆ. ಹೆಸರುಗಳನ್ನು ಶೀಘ್ರವೇ ಅಂತಿಮಗೊಳಿಸುತ್ತೇವೆ ಎಂದು ಹೇಳಿದರು.
ಮಾಜಿ ಶಾಸಕರ ಬಂಡಾಯದ ಬಗೆಗಿನ ಪ್ರಶ್ನೆಗೆ ಪ್ರತಿಕ್ರಿಯಿಸಿ. ಅವರಿಗೆ ಒಳ್ಳೆಯದು ಮಾಡಲಿ ಎಂದು ಪ್ರತಿಕ್ರಿಯಿಸಿದರು.ರಾಹುಲ್ ಗಾಂಧಿ ಒಂದು ಲಕ್ಷ ರೂಪಾಯಿ ಘೋಷಣೆ ವಿಷಯ ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಹೆಚ್ಚು ದಿನ ಈ ಆಟಗಳು ನಡೆಯುವುದಿಲ್ಲ ಎಂದರು.
ದೇವಳದ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ವಿಶ್ರಾಂತ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಪ್ರದೀಪ್ ಜಿ.ಆರ್.ಉಪಾಧ್ಯಾಯ, ಪ್ರವೀಣ್ ಜಿ.ಆರ್ ಉಪಾಧ್ಯಾಯ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮತ್ತಿತರರು ಭಾಗವಹಿಸಿದ್ದರು.
ಶ್ರೀ ರಾಮ ಮಂದಿರದ ಪ್ರತಿಕೃತಿ ವೀಕ್ಷಿಸಿ ಮನಸೋತ ಬಿ.ವೈ. ವಿಜಯೇಂದ್ರ
ದೇವಸ್ಥಾನದಲ್ಲಿ ಧರ್ಮ ಜಾಗೃತಿ, ಶ್ರೀ ರಾಮನ ಚಿಂತನೆ ಮತ್ತು ಆದರ್ಶಗಳನ್ನು ಜನರಿಗೆ ತಲುಪಿಸಲು ತುಮಕೂರಿನ ಶಿಕ್ಷಕ ವಿನಯ ರಾಮ್ ಅವರು ಸುಮಾರು 86 ಕೆಜಿ ಥರ್ಮಾಕೂಲ್ ಬಳಸಿ ನಿರ್ಮಿಸಿರುವ ಶ್ರೀ ರಾಮ ಮಂದಿರದ ಮಾದರಿ ಪ್ರದರ್ಶನ ವನ್ನು ಬಿ.ವೈ. ವಿಜಯೇಂದ್ರ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರಸ್ತೆ ಮಾರ್ಜಿನ್ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.
Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ
Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
Fishing: ಬುಲ್ಟ್ರಾಲ್ ನಿಷೇಧ ಕಟ್ಟುನಿಟ್ಟು ಮಾಡಿ: ಸಚಿವರಿಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.